ಕನ್ನಡಪ್ರಭ ವಾರ್ತೆ ಪಾಂಡವಪುರ
ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಾಡೆ ಗಿರೀಶ್ ಮಾತನಾಡಿ, ಎಚ್.ಡಿ.ಪುಟ್ಟಸ್ವಾಮೀಗೌಡ, ವಿಜಯೇಂದ್ರಮೂರ್ತಿ ಹಾಗೂ ವಿ.ಎಸ್.ನಿಂಗೇಗೌಡ ಅವರನ್ನು ಆಡಳಿತ ಮಂಡಳಿಯಿಂದ ಅಭಿನಂದಿಸಲಾಗಿದೆ. ನೂತನ ನಿರ್ದೇಶಕರು ಮುಂದಿನ ದಿನಗಳಲ್ಲಿ ತಾಲೂಕಿನ ಸಹಕಾರ ಸಂಘ ಅಭಿವೃದ್ಧಿಗೆ ಶ್ರಮಿಸಬೇಕು. ಜೊತೆಗೆ ಟಿಎಪಿಸಿಎಂಎಸ್ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಟಿಎಪಿಸಿಎಂಎಸ್ ಉಪಾಧ್ಯಕ್ಷೆ ಪ್ರೇಮ ಪುಟ್ಟೇಗೌಡ, ನಿರ್ದೇಶಕರಾದ ಸಿ.ಎಸ್.ಗೋಪಾಲಗೌಡ, ಪಿ.ಎಲ್.ಆದರ್ಶ, ಸಿ.ಎಂ.ಕಿರಣ್,ಎಂ.ಸ್ವಾಮಿ, ಎ.ಕೃಷ್ಣ, ಎಚ್.ಎನ್.ಚಿಟ್ಟಿಬಾಬು, ಹಾಳಯ್ಯ,ಸುನಂದಮ್ಮ, ಸಹಕಾರ ಇಲಾಖೆಯ ಎ.ಆರ್. ನಾಗಭೋಷಣ್ , ಮುಖಂಡ ಅರಳಕುಪ್ಪೆ ಮಹದೇವು, ಕಾರ್ಯದರ್ಶಿ ನವೀನ್ ಸೇರಿದಂತೆ ಅಧಿಕಾರ ವರ್ಗ, ಸಿಬ್ಬಂದಿ ಹಾಜರಿದ್ದರು.ವಸತಿ ಶಾಲೆ ವಿದ್ಯಾರ್ಥಿನಿಯರ ಸಾಧನೆ
ತಾಲೂಕಿನಲ್ಲಿ ಎಲೆಕೆರೆ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಖವಾಲಿ, ಘಜಲ್, ಕವನ ವಾಚನ, ಹಿಂದಿ ಕಂಠಪಾಠ, ಜನಪದ ಗೀತೆ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಪ್ರೌಢಶಾಲಾ ವಿಭಾಗದ ಕ್ವಿಜ್ನಲ್ಲಿ ದ್ವಿತೀಯ ಸ್ಥಾನ ಹಾಗೂ ಭರತನಾಟ್ಯ, ಚರ್ಚಾ ಸ್ಪರ್ಧೆಗಳಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಶ್ರೀರಂಗಪಟ್ಟಣ:
ಗ್ರಾಪಂ ಪರವಾಗಿ ಪಿಡಿಒ ಗರಕಹಳ್ಳಿ ದೇವೇಗೌಡ ಕೆ., ಅಧ್ಯಕ್ಷೆ ಚನ್ನಮ್ಮ ಹಾಗೂ ಮಾಜಿ ಅಧ್ಯಕ್ಷ ರಾಮು ಪುರಸ್ಕಾರ ಸ್ವೀಕರಿಸಿದರು. ಗ್ರಾಮದ ಸಮಗ್ರ ಅಭಿವೃದ್ಧಿ, ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಆಡಳಿತ ಹಾಗೂ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ತಿಳಿಸಿದ್ದಾರೆ.