ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಇಂದು ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂಥ ಮಹಾನ್ ಮೋಸಗಾರರನ್ನು ನಂಬದಿರಿ ಎಂದು ಮತದಾರರಲ್ಲಿ ವಿನಂತಿಸಿದರು. 17 ಬಜೆಟ್ ಮಂಡಿಸುವಾಗ ರಾಜಕೀಯ ಪುನರ್ಜನ್ಮ ನೀಡಿದ ಬಾಗಲಕೋಟೆ ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದರು. ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಟೀಕಿಸಿದರು.
3 ವರ್ಷಗಳಿಂದ ಕೇವಲ ಗ್ಯಾರಂಟಿ ಎಂದು ಮೋಸ ಮಾಡಿದ್ದಾರೆ. ಬಡವರ ಮನಸ್ಸು ಕದ್ದು ಮತಬ್ಯಾಂಕ್ ಮಾಡಿಕೊಳ್ಳುವ ಪ್ರಯತ್ನ ಇವರದು ಎಂದು ದೂರಿದರು. 2018, 2023ರಲ್ಲಿ ನೀವು ಘೋಷಿಸಿದ ಯಾವುದಾದರೂ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೀರಾ ಎಂದು ಕಾಂಗ್ರೆಸ್ಸಿನವರನ್ನು ಪ್ರಶ್ನಿಸಿದರು.ಹೆಂಡ, ಹಣದ ಹೊಳೆ ಹರಿಸಿ ಗೆಲ್ಲುವ ಪ್ರಯತ್ನ:ಮುಖ್ಯಮಂತ್ರಿ, 20 ಸಚಿವರು, 50 ಜನ ಶಾಸಕರು ಚುನಾವಣೆ ಗೆಲ್ಲಲು ಭ್ರಷ್ಟಾಚಾರದಿಂದ ಮಾಡಿದ ಕೋಟ್ಯಂತರ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿದರು. ನದಿ ನೀರಿಗಿಂತ ಹೆಚ್ಚು ಹೆಂಡದ ಹೊಳೆ ಹರಿಸಲಾಗುತ್ತಿದೆ. ಹೆಂಡ, ಕೋಟ್ಯಂತರ ರೂಪಾಯಿ ಹಂಚುವ ಮೂಲಕ ಚುನಾವಣೆ ಗೆಲ್ಲುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಇವರು ಎಸ್ಸಿ ಜನಾಂಗಕ್ಕೆ ವಿಶ್ವಾಸದ್ರೋಹ, ದೊಡ್ಡ ಅನ್ಯಾಯ ಮಾಡಿದ್ದಾರೆ. ಮೋದಿಜೀ ಅವರು ಎಲ್ಲ ಬಡವರಿಗಾಗಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವುಗಳನ್ನು ಬಾಗಲಕೋಟೆಯಲ್ಲಿ ಅನುಷ್ಠಾನಕ್ಕೆ ತರುತ್ತಿಲ್ಲ ಎಂದು ಆಕ್ಷೇಪಿಸಿದರು. ಅಭಿವೃದ್ಧಿಯ ಹರಿಕಾರ ವೀರಣ್ಣ ಚರಂತಿಮಠರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.