ಕನ್ನಡಪ್ರಭ ವಾರ್ತೆ ರಾಮನಗರ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ 40- 45 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ಎಂದೂ ಕೂಡ ನೋಡಿರಲಿಲ್ಲ. ರಾಜ್ಯದಲ್ಲಿ ಸಂಪೂರ್ಣ ಅಭಿವೃದ್ಧಿ ಶೂನ್ಯ ಹಾಗೂ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅತ್ಯಂತ ಕೆಟ್ಟ ಆಡಳಿತ ವ್ಯವಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಚಯಿಸಿದ್ದಾರೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆಯೇ ಆಗುತ್ತಿಲ್ಲ. ರೈತರ ಸಮಸ್ಯೆಗಳಿಗೆ ಗಮನ ಕೊಡುತ್ತಿಲ್ಲ, ಹಿಂದುಳಿದವರು, ದಲಿತರ ಸಮಸ್ಯೆಗಳಿಗೆ ಪರಿಹಾರ ಕೊಡುವ ಬದಲಾಗಿ ಇವರೆಲ್ಲವನ್ನೂ ಮರೆಮಾಚಿದ್ದಾರೆ. ದುಡ್ಡೆಷ್ಟು ಹೊಡೆದಿರಿ. ಆಸ್ತಿ ಎಷ್ಟು ಮಾಡಿದ್ದೀರಿ. ಜನರಿಗೆ ಎಷ್ಟು ತೆರಿಗೆ ಹಾಕಿದ್ದೀರಿ. ಬೆಲೆ ಏರಿಕೆ ಎಷ್ಟು ಮಾಡಿದಿರಿ. ದಲಿತರ ಹಣ ಎಷ್ಟು ಲೂಟಿ ಮಾಡಿದ್ದೀರಿ. ಎಷ್ಟು ಜನರ ಹನಿಟ್ರಾಪ್ ಮಾಡಿದಿರಿ? ಫೋನ್ ಟ್ಯಾಪಿಂಗ್ ಎಷ್ಟಾಗಿದೆ. ಎಂಬ ಚರ್ಚೆ ಆಗುವಂತಾಗಿದೆ. ಇದು ಆಡಳಿತವೇ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಈ ಸರ್ಕಾರ ಇರಲೇಬಾರದಿತ್ತು. ಇಂಥ ಪರಿಸ್ಥಿತಿಗೆ ರಾಜ್ಯವನ್ನು ತಳ್ಳುವ ಬದಲಾಗಿ ರಾಜೀನಾಮೆ ಕೊಟ್ಟು ಆ ಕಡೆ ಹೊರಟು ಹೋಗಬೇಕಿತ್ತು ಎಂದು ತಿಳಿಸಿದರು.ದಲಿತರ ಹಣವನ್ನು ಸರ್ಕಾರ ತಿಂದು ಹಾಕುತ್ತಿದೆ. ದಲಿತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದ್ದರೂ ಕಾಂಗ್ರೆಸ್ ದಲಿತ ಸಚಿವರು, ಶಾಸಕರು ಬಾಯಿ ಬಿಡುತ್ತಿಲ್ಲ. ಇಂತಹ ಗುಲಾಮಗಿರಿಯನ್ನು ನಾನು ಎಲ್ಲಿಯೂ ನೋಡಿಲ್ಲ. ದಲಿತರ ಹಣ, ದಲಿತರಿಗೆ ಮೀಸಲಾಗಿ ಇಡಬೇಕು. ಗ್ಯಾರಂಟಿಗಾಗಿ ದಲಿತರ ಹಣ ಬಳಸಿಕೊಳ್ಳಲಾಗಿದೆ ಎಂದು ಟೀಕಿಸಿದರು.
ಸಂವಿಧಾನ ಬದಲಾವಣೆ ಬಗ್ಗೆ ಡಿಕೆಶಿ ಮಾತನಾಡಿದರೂ ದಲಿತ ಸಂಘಟನೆಗಳು ಧ್ವನಿ ಎತ್ತುತ್ತಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ದಲಿತರಿಗೆ ಭಯ ಬಂದುಬಿಟ್ಟಿದೆ. ಕಾಂಗ್ರೆಸ್ ಏನೇ ಮಾತನಾಡಿದರೂ ಸುಮ್ಮನಿರುತ್ತಾರೆ. ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು. ದಲಿತರು ಹೆದರಿಕೊಂಡು ಬದುಕುತ್ತಿದ್ದಾರೆ. ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಯಾರೇ ಮಾತನಾಡಿದರೂ ಧೈರ್ಯವಾಗಿ ವಿರೋಧಿಸಿ. ಯಾವುದೇ ಪಕ್ಷ ಆದರೂ ಸರಿಯೇ ವಿರೋಧಿಸಿ ಎಂದು ಮನವಿ ಮಾಡಿದರು.
ಡಿ.ಕೆ.ಶಿವಕುಮಾರ್ ರಾಜಕೀಯ ನಿವೃತ್ತಿ ಪಡೆಯೋದನ್ನು ಮಾಡಿ ತೋರಿಸಬೇಕು. ತಿರುಚೋದಕ್ಕೆ ಅದೇನು ಡ್ಯಾಂ ನೀರಲ್ಲ. ನೀವು ಒಂದು ಮಾಧ್ಯಮದಲ್ಲಿ ಕೂತು ಮಾತನಾಡಿದ್ದೀರಿ. ಇಡೀ ದೇಶವೇ ನಿಮ್ಮ ಸಂದರ್ಶನ ನೋಡಿದೆ. ನಾವೇನು ನಿಮ್ಮ ನಾಲಿಗೆಗೆ ಹಗ್ಗಕಟ್ಟಿ ತಿರುಚಿದ್ದೇವಾ. ಡಿಕೆಶಿ ಮುಂದೆ ಸಿಎಂ ಆಗುವ ಅವಕಾಶ ಹೊಂದಿರುವವರು. ಆದರೆ, ಇವರ ಮಾತುಗಳನ್ನು ಕೇಳಿದರೆ ಇವರು ಸಿಎಂ ಆಗಬಾರದು. ಅವರು ವಿಚಲಿತರಾಗಿ ಇಂತಹ ಮಾತುಗಳನ್ನು ಆಡುತ್ತಿದ್ದಾರೆ ಎಂದು ಹರಿಹಾಯ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ರಾಜ್ಯ ಪರಿಷತ್ ಸದಸ್ಯ ಆರ್.ವಿ.ಸುರೇಶ್, ಮುಖಂಡರಾದ ಗೌತಮ್ ಗೌಡ, ಪ್ರಸಾದ್ ಗೌಡ, ಶಿವಾನಂದ, ಜಗನ್ನಾಥ್ ಗೌಡ, ರಾಜಣ್ಣ, ಕಿಶನ್, ಜಯಪ್ರಕಾಶ್ ಇದ್ದರು.