ಕಾಂಗ್ರೆಸ್, ಬಿಜೆಪಿ ರೈತ ವಿರೋಧಿ ಸರ್ಕಾರಗಳು
ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬರಗಾಲ ಘೋಷಿಸಿ 3 ತಿಂಗಳು ಗತಿಸಿವೆ, ಆದರೆ ಕೇಂದ್ರ ಕಡೆಗೆ ಕೈ ತೋರಿಸುತ್ತಿರುವ ರಾಜ್ಯ ಸರ್ಕಾರ ತನ್ನ ಹೇಡಿತನ ಪ್ರದರ್ಶಿಸುತ್ತಿದೆ, ರೈತರ ಹಿತಾಸಕ್ತಿ ದೃಷ್ಟಿಯಿಂದಲಾದರೂ ತಮ್ಮ ಪಾಲಿನ ಪರಿಹಾರ ಮೊತ್ತ ಘೋಷಿಸಬೇಕು ಮತ್ತು ಹಿಂದೆಯೇ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
₹8500 ನೇರವಾಗಿ ಕೇಂದ್ರ ಹಾಕಲಿ: ಬರಪೀಡಿತ ಪ್ರದೇಶದ ವ್ಯಾಪ್ತಿಯ ಪ್ರತಿ ಎಕರೆಗೆ ₹ 25 ಪರಿಹಾರ ನೀಡುವಂತೆ ಬೇಡಿಕೆಯಿಟ್ಟಿದೆ, ರಾಷ್ಟ್ರೀಯ ಪ್ರಕೃತಿ ವಿಪತ್ತು ನಿಧಿಯಿಂದ (ಎನ್ಡಿಆರ್ಎಫ್) ಹೆಕ್ಟೇರ್ಗೆ ₹ 8500 ಕೇಂದ್ರ ಸರ್ಕಾರದಿಂದ ಸಿಗುವ ಸಾಧ್ಯತೆಯಿದೆ, ಅದಕ್ಕೆ ಇನ್ನಷ್ಟು ಸೇರಿಸಿ ರಾಜ್ಯ ಸರ್ಕಾರ ಪರಿಹಾರ ನೀಡುವಂತೆ ಆಗ್ರಹಿಸಿದರು.ಕ್ರೆಡಿಟ್ ತೆಗೆದುಕೊಳ್ಳೋದು ಬೇಡ: ರೈತ ಮುಖಂಡ ಗಂಗಣ್ಣ ಎಲಿ ಮಾತನಾಡಿ, ಯಾವುದೇ ಕ್ಷಣದಲ್ಲಿಯೂ ಲೋಕಸಭೆ ಚುನಾವಣೆ ಘೋಷಣೆಯಾಗಬಹುದು, ಇದನ್ನೇ ಕಾಯ್ದು ಕುಳಿತಿರುವ ಎರಡೂ ರಾಷ್ಟ್ರೀಯ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಪರಿಹಾರ ನೀಡಿ ರೈತರಿಂದ ಕ್ರೆಡಿಟ್ ಪಡೆದುಕೊಳ್ಳಲು ಹವಣಿಸುತ್ತಿವೆ. ಹೀಗಾಗಿ ಬರಗಾಲ ಪರಿಹಾರ ಘೋಷಣೆಗೆ ಹಿನ್ನೆಡೆಯಾಗಿದೆ ಎಂದರು.
ಬರಗಾಲ ಪರಿಹಾರ ಪಡೆಯುವ ನಿಟ್ಟಿನಲ್ಲಿ ಮುಂದಿನ ಹೋರಾಟದ ರೂಪುರೇಷೆ ರಚಿಸುವ ಕುರಿತು ಜ. 8 ರಂದು ಸೋಮವಾರ ಹಾವೇರಿಯ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದ್ದು, ಈ ಹಿಂದೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅರ್ಜಿ ಸಲ್ಲಿಸಿದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಗತ್ಯ ಸಲಹೆ ಸೂಚನೆ ನೀಡಬಹುದು ಎಂದು ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.