ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಲೆಗಾಂವ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಸೇರಿ ಏಳು ಆರೋಪಿಗಳು ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿರುವುದು ಹಿಂದೂ ರಾಷ್ಟ್ರಕ್ಕೆ ಸಿಕ್ಕ ಜಯವಾಗಿದೆ ಎಂದರು.
2006ರಲ್ಲಿ ಮಲೆಗಾಂವ್ ಸ್ಫೋಟ ನಡೆದಾಗ ಇಡೀ ದೇಶ ನಡುಗಿತ್ತು. ಸ್ಪೋಟದಲ್ಲಿ 6 ಜನ ಸತ್ತು ಹೋದರು. 100 ಜನ ಗಾಯಗೊಂಡರು. ಆಗ ರಾಷ್ಟ್ರೀಯ ತನಿಖಾ ದಳವು ಈ ಘಟನೆಗೆ ಸೆಮಿ(ಇಸ್ಲಾಮಿಕ್ ಸಂಘಟನೆ) ಕೈವಾಡ ಇದೆ ಎಂದು ಹೇಳಿತ್ತು. ಆದರೆ ಆಗ ಆಡಳಿತದಲ್ಲಿದ್ದ ಕೇಂದ್ರದ ಯುಪಿಎ ಸರ್ಕಾರವು ಎನ್ಐಎ ಹೇಳಿಕೆಯನ್ನು ತಿರುಚಿ ಸೆಮಿ ಸಂಘಟನೆಯನ್ನ ದೇಶ ಭಕ್ತ ಸಂಘಟನೆ ಎಂದು ಬಿಂಬಿಸಲು ಯತ್ನಿಸಿತು. ಕಾಂಗ್ರೆಸ್ ಸೆಮಿ ರಕ್ಷಣೆಗೆ ನಿಂತಿತ್ತು. ಅದೇ ವೇಳೆ ಈ ಘಟನೆಗೆ ಸಾಧ್ವಿ ಪ್ರಜ್ಞಾಸಿಂಗ್ ಅವರ ನೇತೃತ್ವದ ಅಭಿನವ ಭಾರತ ಸಂಘಟನೆಯನ್ನು ಎಳೆ ತಂದು, ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ 8 ಜನರು ಆರೋಪಿಗಳೆಂದು ಮಾಡಲಾಯಿತು ಎಂದು ಹೇಳಿದರು.ಸ್ಪೋಟದಲ್ಲಿ ನೂರುಲ್ ಕುದಾರನ್ನು ಬಂಧಿಸಲಾಗಿತ್ತು. ಶಬೀರ್ ಬ್ಯಾಟರಿವಾಲಾ ರೈಸ್ ಅಹಮದ್ ರನ್ನು ಹುಡುಕಲು ಆರಂಭಿಸಲಾಯಿತು. ಪೊಲೀಸರು ದಾಳಿಯಲ್ಲಿ ಮತ್ತೊಂದು ಮುಸ್ಲಿಂ ಸಂಘಟನೆಯ ಪಾಲ್ಗೊಳ್ಳುವಿಕೆ ಸಹ ಹೊರಬಿದ್ದಿತ್ತು. ಅವರೆಲ್ಲ ಮಾಡಿದ್ದನ್ನು ಬದಿಗೊತ್ತಿ ಪ್ರಜ್ಞಾ ಸಿಂಗ್ ಮತ್ತು ಅಭಿನವ ಭಾರತದ ಮೇಲೆ ಚಾರ್ಜ್ ಶೀಟ್ ಹಾಕಲಾಗಿತ್ತು. ಇದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಷಡ್ಯಂತ್ರವಾಗಿತ್ತು ಎಂದು ಕಿಡಿಕಾರಿದರು.
ಸೋನಿಯಾ ಮತ್ತು ರಾಹುಲ್ ಈ ದೇಶದ ಪ್ರಜೆನೇ ಅಲ್ಲ. ಇವರನ್ನು ಪ್ರಧಾನಿ ಮಾಡಲು ಹೊರಟಿದ್ರು, ಇವರೆಲ್ಲ ದೇಶದ ಕ್ಷಮೆಯಾಚಿಸಬೇಕು.
ಪ್ರಜ್ಞಾ ಸಿಂಗ್ ಪರ ಬಂದ ತೀರ್ಪು ಕಾಂಗ್ರೆಸ್ ನ ನೀತಿಯನ್ನ ಬಯಲು ಮಾಡಿದೆ. ಈ ತೀರ್ಪು ಹಿಂದುತ್ವಕ್ಕೆ ಶಕ್ತಿ ತುಂಬಿದೆ. ಪ್ರಜ್ಞಾ ಸಿಂಗ್ ವೀಲ್ ಚೇರು ಹಿಡಿದಿರುವುದು ಕಾಂಗ್ರೆಸ್ನ ನೀತಿಯಿಂದಾಗಿದೆ. ತೀರ್ಪು ಪ್ರಜ್ಞಾರನ್ನ ಖುಲಾಸೆಗೊಳಿಸಿದೆ. ಜೀವನವನ್ನ ಹಾಳು ಮಾಡಿದ ಕಾಂಗ್ರೆಸ್ಗೆ ಶಿಕ್ಷೆ ಇಲ್ವಾ ಎಂದು ಪ್ರಶ್ನಿಸಿದರು.
ಗೋಷ್ಟಿಯಲ್ಲಿ ಸೂಡಾ ಮಾಜಿ ಅಧ್ಯಕ್ಷ ಎಸ್. ಜ್ಞಾನೇಶ್ವರ್, ನಗರ ಬಿಜೆಪಿ ಅಧ್ಯಕ್ಷ, ಡಿ. ಮೋಹನ್ ರೆಡ್ಡಿ, ಮಂಜುನಾಥ್ ನವುಲೆ, ದೀನ್ ದಯಾಳ್ ಇದ್ದರು.