ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಒಂದಲ್ಲ ಒಂದು ರೀತಿ ಪೋಷಣೆ ಮಾಡುತ್ತ ಬಂದಿದೆ. ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಪರಿಣಾಮ ಹಿಂದು ಯುವತಿ, ಯುವಕರು ಬಲಿಯಾಗುತ್ತಿದ್ದಾರೆ. ಕೊಲೆಯಾಗಿದ್ದು ಹಿಂದು ಯುವತಿ ನೇಹಾ, ರಕ್ಷಣೆ ನೀಡ ಬೇಕಾಗಿದ್ದು ನೇಹಾ ಕುಟುಂಬಕ್ಕೆ, ಆದರೆ ಇವರು ರಕ್ಷಣೆ ನೀಡಿದ್ದು ಮಾತ್ರ ಫಯಾಜ್ ಕುಟುಂಬಕ್ಕೆ ಇದೆಂತಹ ತುಷ್ಠೀಕರಣ. ಈ ಹಿಂದೆಯೂ ಕೂಡ ಅನೇಕ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಈ ಹಲ್ಲೆಗೆ ಕಾಂಗ್ರೆಸ್ಸ್ ಸರ್ಕಾರ ಕಾರಣವಾಗುತ್ತದೆ. ಈ ಸರ್ಕಾರದಲ್ಲಿ ಏನು ಬೇಕಾದರೂ ಮಾಡಿ ಜಯಿಸಿಕೊಳ್ಳಬಹುದು ಎಂದು ಒಂದು ಕೋಮಿನ ವರ್ಗ ನಿಶ್ಚಯಿಸಿದಂತಿದೆ ಎಂದು ಹರಿಹಾಯ್ದರು.
ಹರ್ಷ, ಪುಟ್ಟಪ್ಪ, ರಾಜು ಹೀಗೆ ಸಾಲು ಸಾಲಾಗಿ ಹಿಂದೂಗಳ ಹತ್ಯೆಯಾಗಿದೆ. ಹತ್ಯೆ ನಡೆದಾಗಲೆಲ್ಲ ಘಟನೆಯನ್ನು ಬೇಗ ದಾರಿ ತಪ್ಪಿಸುತ್ತಾರೆ. ನೇಹಳ ಕೊಲೆ ಯನ್ನು ಖಂಡಿಸಬೇಕಾದ ಗೃಹಸಚಿವರು ಮತ್ತು ಮುಖ್ಯಮಂತ್ರಿಗಳು ಇದು ವೈಯುಕ್ತಿಕ ಕಾರಣಕ್ಕಾಗಿ ಆದ ಕೊಲೆ ಲವ್ ಜಿಹಾದ್ ಅಲ್ಲ, ತನಿಖೆ ಮಾಡುತ್ತೇವೆ. ಈಗಾಗಲೇ ಆರೋಪಿಯನ್ನು ಬಂದಿಸಿದ್ದೇವೆ. ಶಿಕ್ಷೆಯನ್ನು ಕೊಡುತ್ತೇವೆ ಎಂದು ಹಾರಿಕೆ ಉತ್ತರವನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.ಇಂದು ಪ್ರತಿಭಟನೆ:
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲವೇ ಇಲ್ಲವಾಗಿದೆ. ಅದರ ಆಡಳಿತವೇ ಆಗಿದೆ. ಹಿಂದೂಗಳನ್ನು ಹತ್ಯೆ ಮಾಡಲೇ ಬೇಕು ಎಂಬಂತೆ ಘಟನೆಗಳು ನಡೆಯುತ್ತಿದೆ. ಜಾತ್ಯಾತೀತ ಎಂಬ ಪದಕ್ಕೆ ಅರ್ಥವೇ ಇಲ್ಲವಾಗಿದೆ. ಲವ್ ಜಿಹಾದ್ ಹೆಸರಿನಲ್ಲಿ ನಡೆಯುವ ಹತ್ಯೆಗಳಿಗೆ ಈ ಕಾಂಗ್ರೆಸ್ ಸರ್ಕಾರ ಶಕ್ತಿ ತುಂಬುತ್ತಿದೆ ಎಂದರು.
ಶಾಂತಿ ಸುವ್ಯವಸ್ಥೆ ಇದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ಕೇವಲ 2 ತಿಂಗಳಲ್ಲಿ ರಾಜ್ಯದಲ್ಲಿ 13495 ವಿವಿಧ ಪ್ರಕರಣಗಳು ಇಲ್ಲಿ ನಡೆದಿದೆ. 2 ತಿಂಗಳಲ್ಲಿ ಅತ್ಯಾಚಾರ, ಕೊಲೆ, ದರೋಡೆ, ಚೈನ್ ಕಳ್ಳತನ ಹೀಗೆ ವಿವಿಧ ರೀತಿಯ ಪ್ರಕರಣಗಳು ದಾಖಲಾಗಿದ್ದವೆ ಎಂದರೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿದೆ ಎಂದರು.