ಕಾಂಗ್ರೆಸ್‌ಗೆ ಗಾಂಧೀಜಿ ತತ್ವದ ಮೇಲೆ ನಂಬಿಕೆ

KannadaprabhaNewsNetwork |  
Published : Jan 31, 2025, 12:46 AM IST
ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹುತಾತ್ಮ ದಿನ ಆಚರಿಸಲಾಯಿತು | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷ ಗಾಂಧೀಜಿ ಅವರ ಸತ್ಯ,ಶಾಂತಿ ಮತ್ತು ಅಹಿಂಸೆಯ ತತ್ವದ ಮೇಲೆ ನಡೆಯುತ್ತಿದೆ. ಎಲ್ಲ ವರ್ಗದ ಜನರಿಗೂ ಅವಕಾಶಗಳನ್ನು ಕಲ್ಪಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ ತಿಳಿಸಿದ್ದಾರೆ

ಕನ್ನಡಪ್ರಭ ವಾರ್ತೆ, ತುಮಕೂರುಕಾಂಗ್ರೆಸ್ ಪಕ್ಷ ಗಾಂಧೀಜಿ ಅವರ ಸತ್ಯ,ಶಾಂತಿ ಮತ್ತು ಅಹಿಂಸೆಯ ತತ್ವದ ಮೇಲೆ ನಡೆಯುತ್ತಿದೆ. ಎಲ್ಲ ವರ್ಗದ ಜನರಿಗೂ ಅವಕಾಶಗಳನ್ನು ಕಲ್ಪಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ ತಿಳಿಸಿದ್ದಾರೆನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸದ್ಬಾವನಾ ದಿನ (ಹುತಾತ್ಮರ ದಿನ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಮಹಾತ್ಮಗಾಂಧೀಜಿ ಅವರು ಕೇವಲ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದಷ್ಟೇ ಅಲ್ಲ.ಈ ದೇಶದಲ್ಲಿ ನಡೆಯುತಿದ್ದ ಅನಿಷ್ಠ ಪದ್ದತಿಗಳ ವಿರುದ್ದವೂ ಹೋರಾಟ ನಡೆಸಿದ್ದರು ಎಂದರು.ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ಪಕ್ಷ, ಸ್ವಾತಂತ್ರ್ಯ ನಂತರವೂ ದೇಶದ ಸಮಗ್ರ ಅಭಿವೃದ್ದಿಗೆ ನಿರಂತರವಾಗಿ ಶ್ರಮಿಸಿದ ಪರಿಣಾಮ ಶಾಲಾ,ಕಾಲೇಜು,ಆಸ್ಪತ್ರೆ, ರಸ್ತೆ,ವಿಮಾನ ನಿಲ್ದಾಣಗಳು,ಅಣೆಕಟ್ಟು ಗಳು ನಿರ್ಮಾಣಗೊಂಡು ದೇಶದ ಜನರು ಸ್ವಾವಲಂಭಿ ಜೀವನ ನಡೆಸಲು ಸಾಧ್ಯವಾಯಿತು. ಇದನ್ನು ತಿಳಿಯದ ಕೆಲವರು ದೇಶಕ್ಕೆ ಕಾಂಗ್ರೆಸ್ ಕೊಡುಗೆ ಎನು ಎಂದು ಪ್ರಶ್ನೆ ಮಾಡುತ್ತಾರೆ. ಇತಿಹಾಸವೇ ಗೊತ್ತಿಲ್ಲದವರಿಂದ ಇತಿಹಾಸ ನಿರ್ಮಿಸಲು ಸಾಧ್ಯವೇ ಎಂದು ಜಿ.ಚಂದ್ರಶೇಖರ ಗೌಡ ಪ್ರಶ್ನಿಸಿದರುನನ್ನ ಜೀವನವೇ ನನ್ನ ಸಂದೇಶ ಎಂದ ಮಹಾತ್ಮಗಾಂಧಿಯ ತತ್ವಗಳನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಪ್ರಪಂಚದ ಶೇ 90 ರಷ್ಟು ರಾಷ್ಟ್ರಗಳು ಗಾಂಧೀಜಿ ಅವರನ್ನು ನೆನಪು ಮಾಡುತ್ತಿವೆ. ಗಾಂಧೀಜಿ ಹುತಾತ್ಮ ರಾದ ದಿನ ವಿಶ್ವದ 144 ದೇಶಗಳು ಅವರ ದೇಶದ ಬಾವುಟಗಳನ್ನು ಅರ್ಧಕ್ಕೆ ಇಳಿಸಿ ಗೌರವ ಸಲ್ಲಿಸಿದ್ದರು. ಇಂದು ಮಹಾತ್ಮಗಾಂಧಿ ಎನ್ನುವ ಹೆಸರಿಗೆ ಇದ್ದ ಶಕ್ತಿ. ಮಹಾತ್ಮಗಾಂಧಿ ಅವರ ರೀತಿಯಲ್ಲಿಯೇ ಜವಹರಲಾಲ್ ನೆಹರು, ಸರದಾರ್ ವಲ್ಲಭಾ ಬಾಯಿ ಪಟೇಲ್, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೇರಿದಂತೆ ಅನೇಕರು ಈ ದೇಶಕ್ಕಾಗಿ ತಮ್ನ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರನ್ನು ನಾವುಗಳು ಸ್ಮರಿಸಬೇಕಿದೆ ಎಂದು ನುಡಿದರು.ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಇಂದಿನ ಹುತಾತ್ಮರ ದಿನಾಚರಣೆಯಲ್ಲಿ ರಾಷ್ಷ್ರಕ್ಕಾಗಿ ಮಡಿದ ರಾಜಗುರು, ಸುಖದೇವ್, ಭಗತ್ ಸಿಂಗ್ ಸೇರಿದಂತೆ ಎಲ್ಲರಿಗೂ ಗೌರವ ಸಲ್ಲಿಸಬೇಕಾಗಿದೆ. ಶಸ್ತ್ರಾಸ್ತ್ರಗಳಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸುವುದು ಕಷ್ಟ ಎಂದು ಅರಿತು ತಾವು ನಂಬಿದ್ದ ಅಹಿಂಸಾ ಚಳವಳಿ ಮೂಲಕವೇ ಸ್ವಾತಂತ್ರ್ಯಕ್ಕೆ ಹೋರಾಡಿ ಯಶಸ್ವಿಯಾದರು. ಗಾಂಧೀಜಿಯವರನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ಗಾಂಧಿ ಆಧ್ಯಯನ ಕೇಂದ್ರ ತೆರೆಯಲು ಮುಂದಾದರೆ ಗಾಂಧಿ ಪ್ರತಿಷ್ಠಾನದಿಂದ ಎಲ್ಲ ರೀತಿಯ ನೆರವು ದೊರೆಯಲಿದೆ. ಈ ನಿಟ್ಟಿನಲ್ಲಿ ಸಿಂಡಿಕೇಟ್ ಸದಸ್ಯರಾದ ಶಿವಣ್ಣ ಅವರು ಪ್ರಯತ್ನಿಸಬೇಕು. ವೋಡೆ ಪಿ.ಕೃಷ್ಣಾ ಪ್ರತಿಷ್ಠಾನ ಸಹ ಕೈಜೋಡಿಸಲಿದೆ ಎಂದರು.ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ಶಿವಣ್ಣ ಮಾತನಾಡಿ, ಗಾಂಧೀಜಿ ಸೇರಿದಂತೆ ಹುತಾತ್ಮರಾದ ಕಾಂಗ್ರೆಸ್ ನಾಯಕರುಗಳನ್ನು ಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ವಿವಿಯ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಗಾಂಧಿ ಆಧ್ಯಯನ ಕೇಂದ್ರ ಸ್ಥಾಪಿಸಲು ಪ್ರಾಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.ಮುಖಂಡರಾದ ಷಣ್ಮುಗಪ್ಪ, ಅರಕೆರೆ ಪಂಚಣ್ಣ, ರೇವಣ್ಣ ಸಿದ್ದಯ್ಯ,ಸುಜಾತ, ಭಾಗ್ಯ, ಅವರುಗಳು ಮಾತನಾಡಿದರು. ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಂಜುನಾಥ್, ಕೆಂಪರಾಜು, ಅನಿಲ್, ಲೋಕೇಶ್ ಸ್ವಾಮಿ, ಕಾರ್ಮಿಕ ವಿಭಾಗದ ವಿ.ಎಸ್.ಸೈಯದ್ ದಾದಾಪೀರ, ನದೀಂ, ಶಿವಾಜಿ ಸೇರಿದಂತೆ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮನ್ನಾಗಮಂಡಲ ಕ್ಷೇತ್ರಕ್ಕೆ ಉದಯ ಕುಮಾರ್‌ ಶೆಟ್ಟಿ ಭೇಟಿ
ಜೇನು ಹುಳುಗಳು ಸಂರಕ್ಷಣೆ ಪರಿಸರ ಸಮತೋಲನಕ್ಕೆ ಅಗತ್ಯ: ಡಾ. ಆರ್ ಎನ್ ಕೆಂಚರೆಡ್ಡಿ