ಕನ್ನಡಪ್ರಭವಾರ್ತೆ ಮೂಲ್ಕಿ
ಪಿ ವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ ವಕ್ಫ್ ಮಂಡಳಿಗೆ ಹೆಚ್ಚಿನ ಅಧಿಕಾರ ಕೊಡುವ ಹೊಸ ಕಾಯಿದೆಯನ್ನು ಅಂಗೀಕರಿಸಿದ್ದು ಹೇಗೆ, ಜನರನ್ನು ಕತ್ತಲಲ್ಲಿ ಇಟ್ಟು ವಕ್ಫ್ ಆಸ್ತಿ ಎಂದು ಗುರುತಿಸುವ ಗಣನೀಯ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಲಾಯಿತು. 2013ರಲ್ಲಿ ಈ ಕಾಯಿದೆಯನ್ನು ಪರಿಷ್ಕಾರ ಮಾಡಿದ್ದು ಈ ವಿಶೇಷ ಅಧಿಕಾರದಿಂದಾಗಿ ವಕ್ಫ್ ಯಾವುದಾದರೂ ಆಸ್ತಿಯನ್ನು ತನ್ನದು ಎಂದು ಅನ್ನಿಸಿದರೆ ಅಧಿಕೃತವಾಗಿ ವಕ್ಫ್ ಆಸ್ತಿ ಎಂದು ಘೋಷಿಸುವ ಅಧಿಕಾರ ನೀಡಿದ್ದೀರಿ. ಇದೇ ಕಾರಣದಿಂದ ಇಂದು ದೇಶದ ಮುಗ್ಧ ರೈತರು, ಬಡ ಜನರು ಅತಂತ್ರರಾಗಿದ್ದಾರೆ. ವಕ್ಫ್ ಮಂಡಳಿಗಳು ಭ್ರಷ್ಟಾಚಾರ, ಭೂ ಅತಿಕ್ರಮಣ, ನಿಧಿಯ ದುರ್ಬಳಕೆ, ಅಧಿಕಾರದ ದುರುಪಯೋಗ ಮತ್ತು ಹಗರಣಗಳಿಗೆ ಕುಖ್ಯಾತಿ ಪಡೆದು, ಇದೀಗ ಲ್ಯಾಂಡ್ ಜಿಹಾದ್ ನಡೆಸುತ್ತಿದ್ದು ಇದನ್ನು ತಡೆಯಲು ಕೇಂದ್ರದ ಬಿಜೆಪಿ ಸರ್ಕಾರ ತರುವ ಕಾಯಿದೆಯನ್ನು ಜನರು ಪಕ್ಷ ಭೇದ ಮರೆತು ಬೆಂಬಲಿಸಬೇಕು.ಕಾಂಗ್ರೆಸ್ ಪಕ್ಷವು ಮಾಡಿದ ತಪ್ಪಿಗೆ ದೇಶದ ಜನರ ಅದರಲ್ಲೂ ಬಡ ವರ್ಗದ ಕ್ಷಮೆ ಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.