- ಎಸ್ಎಸ್ ಮಲ್ಲಿಕಾರ್ಜುನ, ಆರ್.ಎಸ್. ಶೇಖರಪ್ಪ, ಸೊಪ್ಪಿನ ಗುರುರಾಜ, ಅಯೂಬ್ ಸಾಥ್
ನಗರದ ಜಿಲ್ಲಾಡಳಿತ ಭವನಕ್ಕೆ ಪತಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಮುಖಂಡರಾದ ಆರ್.ಎಸ್. ಶೇಖರಪ್ಪ, ಗುರುರಾಜ ಸೊಪ್ಪಿನ ಮರಿಯಪ್ಪ ಹಾಗೂ ದೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಜೊತೆಗೆ ತೆರಳಿದ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ 2ನೇ ಸಲ ಉಮೇದುವಾರಿಕೆ ಅರ್ಪಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಭ್ಯರ್ಥಿ ಡಾ.ಪ್ರಭಾ, ಕ್ಷೇತ್ರಾದ್ಯಂತ ಕಾಂಗ್ರೆಸ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲಿ ಪಕ್ಷ ಹಾಗೂ ನಮ್ಮೆಲ್ಲರ ಜವಾಬ್ದಾರಿಯೂ ಹೆಚ್ಚಾಗಿದೆ. ಜನರ ಕಷ್ಟ ಸು-ಖದಲ್ಲಿ ನಾವು ಭಾಗಿಯಾಗಿದ್ದೇವೆ. ಉತ್ಸಾಹ ವೃದ್ಧಿಸಿದೆ ಎಂದರು.ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದು ಚುನಾವಣೆಯಲ್ಲಿ ತಮಗೆ ಪೂರಕ ಅಂಶವಾಗಲಿದೆ. ಮನಃಪೂರ್ವಕವಾಗಿ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
- - - ಬಾಕ್ಸ್ 18ರಂದು ಮೆರವಣಿಗೆಯಲ್ಲಿ ಸಿಎಂ, ಡಿಸಿಎಂ ಭಾಗಿ: ಎಸ್ಎಸ್ಎಂ ಕನ್ನಡಪ್ರಭ ವಾರ್ತೆ, ದಾವಣಗೆರೆ
ನಗರದ ಡಿಸಿ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ 2ನೇ ಸಲ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾದ್ಯಂತ ಯುವಜನರು, ಮಹಿಳೆಯರು, ಪುರುಷರು, ಹಿರಿಯರು ನಮ್ಮ ಪರವಾಗಿದ್ದಾರೆ ಎಂದರು.
- - - ಕೋಟ್ ಶಿಸ್ತಿನ ಪಕ್ಷವೆಂದು ಹೇಳುತ್ತಿದ್ದ ಬಿಜೆಪಿ ಈಗ ದುಡ್ಡಿನ ಪಕ್ಷವಾಗಿದೆ. ಬಿಜೆಪಿ ಸಂಸದರಿಂದ ಬೇಸತ್ತಿರುವ ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ, ಸೌಮ್ಯ ನರೇಂದ್ರ, ಎಲ್.ಡಿ.ಗೋಣೆಪ್ಪ, ಜಯಮ್ಮ ಗೋಪಿನಾಯ್ಕ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೇ, ಬಿಜೆಪಿಯ ಒಳ್ಳೊಳ್ಳೆ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ
- - - -15ಕೆಡಿವಿಜಿ5, 6:
ದಾವಣಗೆರೆ ಡಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ತಮ್ಮ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ 2ನೇ ಸಲ ನಾಮಪತ್ರ ಸಲ್ಲಿಸಿದ ನಂತರ ಮುಖಂಡರ ಜೊತೆ ಚರ್ಚೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ, ಮುದೇಗೌಡ್ರ ಗಿರೀಶ ಇತರರು.-15ಕೆಡಿವಿಜಿ8: