ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಂಗಳವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ಪ್ರಚಾರ್ ಖರ್ಗೆ.
ಆರ್ಎಸ್ ಎಸ್ ಚಟುವಟಿಕೆ ನಿಷೇಧಸಬೇಕು ಎಂದು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದ್ದಾರೆ.ಆರ್ ಎಸ್ ಎಸ್ ಕಳೆದ ನೂರು ವರ್ಷದಿಂದ ದೇಶಭಕ್ತರನ್ನು ನಿರ್ಮಾಣ ಮಾಡುತ್ತಿದೆ. ಇವರು ಬ್ಯಾನ್ ಮಾಡಿದ್ರು, ಉರ್ಕೊಂಡ್ರು ಅಷ್ಟೇ. ನೆಹರೂ- ಇಂದಿರಾ ಕಾಲದಲ್ಲಿ ತುರ್ತು ಪರಿಸ್ಥಿತಿ ಹೇರಿ ಕತ್ತು ಹಿಸುಕಿದಾಗಲೂ ಆರ್ ಎಸ್ ಎಸ್ ಬೆಳೆದಿದೆ. ಈಗಲೂ ಬೆಳೆಯುತ್ತಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರೋರು ಕೂಡ ಆರ್ ಎಸ್ ಎಸ್ ನ ಸ್ವಯಂಸೇವಕರು. ಇದನ್ನ ಮರಿಬೇಡಿ ಎಂದು ತಾಕೀತು ಮಾಡಿದರು.
ರಾಜ್ಯದಲ್ಲಿ ಮೂರು ತಿಂಗಳಿಂದ ಸಂಬಳ ಆಗಿಲ್ಲ. ಬದುಕಲಿಕ್ಕೆ ಆಗ್ತಿಲ್ಲ. ಅವಮಾನಿತಳಾಗಿ ಸಾಯ್ತಿದ್ದೇನೆ ಎಂದು ಗ್ರಂಥಾಲಯ ನಿರ್ವಾಹಕಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಆಶಾ ಕಾರ್ಯಕರ್ತೆರಿಗೂ ಸಂಬಳ ಕೊಟ್ಟಿಲ್ಲ. ಇಷ್ಟೆಲ್ಲ ನೂನ್ಯತೆಗಳನ್ನು ಮರೆಮಾಚಿ, ಜನರ ಆಕ್ರೋಶವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ನಾಯಕರು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ತಮಗೆ ಕೊಟ್ಟ ಖಾತೆ ಬಗ್ಗೆ ಸ್ವಲ್ಪವೂ ಯೋಚಿಸುತ್ತಿಲ್ಲ, ಗ್ರಾಪಂನಲ್ಲಿ ಕೆಲಸ ಮಾಡೋರಿಗೆ ಸಂಬಳ ಕೊಡೋಕೆ ಆಗ್ತಿಲ್ಲ ಎಂದು ಆರೋಪಿಸಿದರು.
ಪ್ರಿಯಾಂಕ್ ಖರ್ಗೆ ಅವರು ಗಿಮಿಕ್ ರಾಜಕಾರಣಿ. ಪಾಕಿಸ್ತಾನ ಜಿಂದಾಬಾದ್ ಅನ್ನೋರನ್ನು ಸಮರ್ಥನೆ ಮಾಡಿಕೊಂಡು ದೇಶ ಭಕ್ತರ ದಮನ ಮಾಡುವ ನಿಮ್ಮ ಮಾನಸಿಕ ಸ್ಥಿತಿ ಜನರಿಗೆ ಗೊತ್ತಾಗುತ್ತೆ. ಆರ್ಎಸ್ಎಸ್ ಬ್ಯಾನ್ ಮಾಡಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಖಾರವಾಗಿ ಹೇಳಿದರು.