ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಫಾಜಿಲ್ ಅಹ್ಮದ್‌ ಭೇಷರತ್ ಕ್ಷಮೆಗೆ ಕಾಂಗ್ರೆಸ್‌ ಆಗ್ರಹ

KannadaprabhaNewsNetwork | Published : Oct 6, 2023 12:06 PM

ಚನ್ನಪಟ್ಟಣ: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕುರಿತು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಸೈಯ್ಯದ್ ಫಾಜಿಲ್ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ನಗರಸಭೆ ಸದಸ್ಯರು, ಫಾಜಿಲ್ ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಚನ್ನಪಟ್ಟಣ: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕುರಿತು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಸೈಯ್ಯದ್ ಫಾಜಿಲ್ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ನಗರಸಭೆ ಸದಸ್ಯರು, ಫಾಜಿಲ್ ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಗರಸಭೆ ಸದಸ್ಯರು, ಜಮೀರ್ ವಿರುದ್ಧ ಹಗುರವಾಗಿ ಮಾತನಾಡಿರುವ ಫಾಸಿಲ್ ಅಹ್ಮದ್ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕೆಂದರು. ನಗರಸಭೆ ಕಾಂಗ್ರೆಸ್ ಸದಸ್ಯ ವಾಸಿಲ್ ಅಲಿಖಾನ್ ಮಾತನಾಡಿ, ಕುಮಾರಸ್ವಾಮಿ ಮುಸ್ಲಿಂ ಸಮುದಾಯ ಕುರಿತು ನೀಡಿರುವ ಹೇಳಿಕೆಯನ್ನು ಸಮರ್ಥಿಸುವ ಭರದಲ್ಲಿ ಫಾಜಿಲ್, ಸಚಿವ ಜಮೀರ್ ಅಹ್ಮದ್ ವಿರುದ್ಧ ಹಗುರವಾಗಿ ಮಾತನಾಡಿರುವುದು ಖಂಡನೀಯ. ಈ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಎಚ್ಡಿಕೆ ಸಿಎಂ ಆಗಲು ಸಹಕಾರ: ಕುಮಾರಸ್ವಾಮಿ ಮೊದಲ ಬಾರಿ ಮುಖ್ಯಮಂತ್ರಿ ಆಗಲು ಜಮೀರ್ ಅಹ್ಮದ್, ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ಸಚಿವ ಚಲುವರಾಯಸ್ವಾಮಿ ಮುಂತಾದವರ ತಂಡ ಕಾರಣ. ಇವರು ಅಂದು ಕುಮಾರಸ್ವಾಮಿಯನ್ನು ಬೆಂಬಲಿಸದಿದ್ದಲ್ಲಿ ಅವರು ಸಿಎಂ ಆಗಲುತ್ತಲೇ ಇರಲಿಲ್ಲ. ಕುಮಾರಸ್ವಾಮಿಗೆ ನಿಜವಾದ ರಾಜಕೀಯ ಹೇಳಿಕೊಟ್ಟಿದ್ದೇ ಈ ತಂಡ ಎಂದು ತಿಳಿಸಿದರು. ಅಂದು ಜಮೀರ್ ಅಹ್ಮದ್ ಖಾನ್ ಚಾಲಕ ಸ್ಥಾನದಲ್ಲಿ ಕುಳಿತು ಬಸ್ ಓಡಿಸದಿದ್ದರೆ ಕುಮಾರಸ್ವಾಮಿ ಸಿಎಂ ಅಗುತ್ತಲೇ ಇರಲಿಲ್ಲ. ಕಾಲಕಾಲಕ್ಕೆ ಈ ತಂಡ ಕುಮಾರಸ್ವಾಮಿ ಅವರನ್ನು ಬೆಂಬಲಿಸಿದ ಕಾರಣಕ್ಕೆ ಅವರು ಬೆಳೆದರು. ಇದರ ಅರಿವಿಲ್ಲದ ಫಾಜಿಲ್, ಜಮೀರ್ ಅಹ್ಮದ್ ಕುರಿತು ಹೇಳಿಕೆ ನೀಡಿರುವುದು ಖಂಡನೀಯ. ಬಸವರಾಜ ಬೊಮ್ಮಾಯಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಳಾಯಿತು. ಇಂತಹ ಹೊತ್ತಿನಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಕೈಜೋಡಿಸಿರುವುದು ನಮ್ಮ ಸಮುದಾಯಕ್ಕೆ ಬೇಸರ ತರಿಸಿದೆ ಎಂದರು. ಎಚ್‌ಡಿಡಿ, ಎಚ್‌ಡಿಕೆ ಬೆಂಬಸಿದ್ದ ಸಮುದಾಯ: ಈ ಹಿಂದಿನಿಂದಲೂ ಅಲ್ಪಸಂಖ್ಯಾತ ಸಮುದಾಯ ಜೆಡಿಎಸ್ ಅನ್ನು ಬೆಂಬಲಿಸಿಕೊಂಡು ಬಂದಿತ್ತು. ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಲು, ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗುವಲ್ಲಿ ಮುಸ್ಲಿಂ ಸಮುದಾಯದ ಕೊಡುಗೆ ಸಾಕಷ್ಟಿದೆ. ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸೋತ ಕಾರಣಕ್ಕೆ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾರೆ. ಅವರ ಈ ನಿರ್ಧಾರ ಸರಿಯೋ ತಪ್ಪೋ ಎಂಬುದನ್ನು ಮುಂದಿನ ದಿನಗಳಲ್ಲಿ ರಾಜ್ಯದ ಜನರೇ ತೀರ್ಮಾನಿಸಲಿದ್ದಾರೆ ಎಂದರು. ನಗರಸಭೆ ಸದಸ್ಯ ಲಿಯಾಕತ್ ಮಾತನಾಡಿ, ಕುಮಾರಸ್ವಾಮಿಯವರಿಗೆ ರಾಮನಗರದಲ್ಲಿ ತಮ್ಮ ಮಗ ಗೆಲ್ಲಬೇಕಿತ್ತು ಅಷ್ಟೇ. ಆದರೆ ಅವರು ಸೋತರು. ಅದಕ್ಕಾಗಿ ಈಗ ಲೋಕಸಭೆ ಚುನಾವಣೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರನ್ನು ಸೋಲಿಸುವ ನಿಟ್ಟಿನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ನಗರಸಭೆ ಮಾಜಿ ಸದಸ್ಯ ಭಾವಸ ಮಾತನಾಡಿ, ನಗರದ ಶೇರ್ವಾ ಹೋಟೆಲ್ ಬಳಿ ಇದ್ದ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಕಚೇರಿಯನ್ನು ಫಾಜಿಲ್ ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಕೆಲ ದಿನಗಳ ಹಿಂದೆ ಇವರೇ ಕಾಂಗ್ರೆಸ್‌ಗೆ ಬರುವ ಕುರಿತು ಕೆಲವರೊಂದಿಗೆ ಮಾತುಕತೆ ನಡೆಸಿದ್ದರು. ಇಂತವರು ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಬಗ್ಗೆ ಮಾತನಾಡುತ್ತಾರೆ. ನಮ್ಮ ನಾಯಕರ ಬಗ್ಗೆ ಮಾತನಾಡುವ ಮೊದಲು ಇವರು ಒಂದು ಚುನಾವಣೆಗೆ ಸ್ಪರ್ಧಿಸಿ ತೋರಿಸಲಿ ಎಂದು ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಶಾಬಿರ್, ಮತೀನ್, ತೌಸಿಫ್ ಕಾಂಗ್ರೆಸ್ ಮುಖಂಡ ಲೋಕೇಶ್ ಉಪಸ್ಥಿತರಿದ್ದರು. ಪೊಟೋ೫ಸಿಪಿಟ೧: ಚನ್ನಪಟ್ಟಣದಲ್ಲಿ ನಗರಸಭೆ ಕಾಂಗ್ರೆಸ್‌ ಸದಸ್ಯರು ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದರು.