ಕನ್ನಡಪ್ರಭ ವಾರ್ತೆ ಶಿವಮೊಗ್ಗ
2014ರಲ್ಲಿ ದೇಶಕ್ಕೆ ಬುಲೆಟ್ ಟ್ರೈನ್ ಕೊಡುತ್ತೇವೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದು ಇರುವ ರೈಲುಗಳಿಗೂ ಸಿಗ್ನಲ್ ಕೊಡಲು ಇವರಲ್ಲಿ ಕಾರ್ಮಿಕರಿಲ್ಲ ದಂತಾಗಿದೆ. ಕೇಂದ್ರ ಸರ್ಕಾರವು ರೈಲಿನ ಚೇರ್ ಮತ್ತು ಶೌಚಾಲಯದ ಚಿತ್ರಗಳನ್ನು ಕೇವಲ ಸೋಶಿಯಲ್ ಮೀಡಿಯಾದಲ್ಲಿ ತೋರಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮನವಿಯಲ್ಲಿ ಆರೋಪಿಸಿದರು.
ಬುಲೆಟ್ ರೈಲ್ನ ತಂತ್ರಜ್ಞಾನ ದೇಶಕ್ಕೆ ಕಾಲಿಡುವ ಒತ್ತಲ್ಲೇ ಸಿಗ್ನಲ್ ಲೋಪದಿಂದ ಹಾಗೂ ಚಾಲಕನ ನಿರ್ಲಕ್ಷ್ಯ ಈ ಘಟನೆಗೆ ಕಾರಣವಾಗಿದೆ. ಪದೇ ಪದೇ ರೈಲು ಅಪಘಾತಗಳು ನಡೆಯುತ್ತಿದ್ದು, ಇದರ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಸ್.ಶಿವಕುಮಾರ್, ಮುಖಂಡರಾದ ಎಚ್.ಸಿ.ಯೋಗೀಶ್, ರಂಗೇಗೌಡ, ಎಚ್. ಎಸ್.ಬಾಲಾಜಿ, ನವೀನ್, ಅಕ್ಬರ್, ಗಿರೀಶ್, ಕುಮಾರ್ ಇನ್ನಿತರರು ಹಾಜರಿದ್ದರು.