ದಿಡಗ ಏತ ನೀರಾವರಿ ಯೋಜನೆ ಕಾಂಗ್ರೆಸ್ ಸರ್ಕಾರದ ಕೊಡುಗೆ

KannadaprabhaNewsNetwork |  
Published : Dec 12, 2025, 01:30 AM IST
11ಎಚ್ಎಸ್ಎನ್15 : ನುಗ್ಗೇಹಳ್ಳಿ ಹೋಬಳಿಯ ಸಮೀಪದ ಕೆ ವಡ್ಡರಹಳ್ಳಿ ಗ್ರಾಮದ  ನೂತನ ಸಮುದಾಯ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ  ಮಾಜಿ ವಿಧಾನ ಪರಿಷತ್ ಸದಸ್ಯ  ಎಂಎ ಗೋಪಾಲಸ್ವಾಮಿ ಅವರನ್ನು  ಗ್ರಾಮದ ವತಿಯಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕೆ ವಡ್ಡರಹಳ್ಳಿ ನೂತನ ಸಮುದಾಯ ಭವನ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ದಿಡಗ ಭಾಗದ ರೈತರು ದಿಡಗ ಮತ್ತು ದಿಡಗ ತುಮಕೂರು ಗ್ರಾಮದ ಕೆರೆ ತುಂಬಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬಂದಿದ್ದರು. ತಾವು ಈ ಬಗ್ಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ಈ ಭಾಗದ ರೈತರೊಂದಿಗೆ ತೆರಳಿ ಮನವಿ ಮಾಡಲಾಗಿತ್ತು. ಇದಕ್ಕೆ ಸರ್ಕಾರ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ನುಗ್ಗೇಹಳ್ಳಿ: ದಿಡಗ ಭಾಗದ ಹತ್ತಾರು ವರ್ಷಗಳ ಕನಸಾಗಿದ್ದ ಏತ ನೀರಾವರಿ ಯೋಜನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ 74 ಕೋಟಿ ಅನುದಾನ ಬಿಡುಗಡೆ ಮಾಡುವ ಮೂಲಕ ರೈತರ ಕನಸನ್ನು ನನಸು ಮಾಡಿದೆ ಎಂದು ವಿಧಾನ ಪರಿಷತ್ ಮಾಜಿ ಶಾಸಕ ಎಂ ಎ ಗೋಪಾಲಸ್ವಾಮಿ ಹೇಳಿದರು.ಹೋಬಳಿಯ ಸಮೀಪದ ಕೆ ವಡ್ಡರಹಳ್ಳಿ ನೂತನ ಸಮುದಾಯ ಭವನ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ದಿಡಗ ಭಾಗದ ರೈತರು ದಿಡಗ ಮತ್ತು ದಿಡಗ ತುಮಕೂರು ಗ್ರಾಮದ ಕೆರೆ ತುಂಬಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬಂದಿದ್ದರು. ತಾವು ಈ ಬಗ್ಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ಈ ಭಾಗದ ರೈತರೊಂದಿಗೆ ತೆರಳಿ ಮನವಿ ಮಾಡಲಾಗಿತ್ತು. ಇದಕ್ಕೆ ಸರ್ಕಾರ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.ಅನೇಕ ವರ್ಷಗಳಿಂದ ಈ ಭಾಗದಲ್ಲಿ ಕೆರೆಗಳು ತುಂಬದೇ ರೈತರು ಸಮಸ್ಯೆ ಎದುರಿಸುತ್ತಿದ್ದರು. ಈ ಭಾಗದ ಜನ, ಜಾನುವಾರುಗಳಿಗೆ ಕೂಡ ಕುಡಿಯುವ ನೀರಿಗೂ ಸಮಸ್ಯೆಯಾಗಿತ್ತು. ನಾಗಮಂಗಲ ಭಾಗದ ಹೇಮಾವತಿ ನಾಲೆಯಿಂದ ಏತ ನೀರಾವರಿ ಯೋಜನೆ ಮೂಲಕ ಈ ಭಾಗದ ಕೆರೆಗಳನ್ನು ತುಂಬಿಸಲು ಯೋಜನೆ ರೂಪಿಸಲಾಗಿದೆ ಎಂದರು. ಕೆ ವಡ್ಡರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮುದಾಯ ಭವನಕ್ಕೆ ನಾನು ಸುಮಾರು 7 ಲಕ್ಷ ಹಣ ನೀಡಿದ್ದೇನೆ. ನನ್ನ ವಿಧಾನಪರಿಷತ್ ಸದಸ್ಯರ ಅವಧಿಯಲ್ಲಿ ಜಿಲ್ಲೆಯ ಹಾಗೂ ತಾಲೂಕಿನ ನೀರಾವರಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಶ್ರಮ ವಹಿಸಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ವಡ್ಡರಹಳ್ಳಿ ಮೋಹನ್, ನಟೇಶ್, ಪ್ರಮೋದ್‌, ರಮೇಶ್, ವಿಎನ್ ಬೋರೇಗೌಡ, ವಿ. ಎಚ್ ಹನುಮಂತೇಗೌಡ, ಸೇರಿದಂತೆ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ
ವೃದ್ಧೆ ಮನೆಯಲ್ಲಿ ಚಿನ್ನ ಕದ್ದಿದ್ದಮಹಿಳಾ ಕೇರ್‌ಟೇಕರ್‌ ಸೆರೆ