ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ: ಸಂಸದ ಕ್ಯಾ. ಚೌಟ

KannadaprabhaNewsNetwork |  
Published : May 02, 2025, 11:46 PM IST
ಸಂಸದ ಕ್ಯಾ.ಬ್ರಿಜೇಶ್‌ ಚೌಟ  | Kannada Prabha

ಸಾರಾಂಶ

ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರುಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿ ಅವಮಾನಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಂಸದರು, ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿಇಟಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಯಜ್ಞೋಪವೀತ ತುಂಡರಿಸಿರುವುದು ಹಿಂದೂಗಳ ಶ್ರದ್ಧೆಯ ಮೇಲೆ ನಡೆದ ಆಕ್ರಮಣವಾಗಿದೆ. ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ಬಲವಂತವಾಗಿ ತೆಗೆಸಿರುವುದು ಸನಾತನ ಹಿಂದು ಧರ್ಮದ ಭಾಗವಾದ ಬ್ರಾಹ್ಮಣ ಸಮಾಜಕ್ಕೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದಲ್ಲಿ ದ್ವೇಷದ ಬೀಜವನ್ನು ಬಿತ್ತುತ್ತಿದ್ದು, ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮುಸ್ಲಿಮರಿಗೆ ಮೀಸಲಾತಿ, ಜಾತಿ ಗಣತಿಯಲ್ಲಿಯೂ ತಾರತಮ್ಯ, ಜನಿವಾರದಂತಹ ಕೃತ್ಯಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಗದ ಜನರನ್ನು ಓಲೈಸುತ್ತಿರುವುದು ಕೋಮುವಾದದ ಅತಿರೇಕದ ನಡೆಗಳಾಗಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ರಾಜ್ಯದ ಜನತೆಯ ಕ್ಷಮೆಯಾಚಿಸಿ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುರ್ತು ಸಂಪುಟ ಸಭೆ ತೀರ್ಮಾನ : ಜಿ ರಾಮ್‌ ಜಿ ವಿರುದ್ಧ 22ರಿಂದ ಸಮರಾಧಿವೇಶನ
ಮುಜರಾಯಿ ದೇಗುಲಗಳಲ್ಲಿ ಇಂದು ಭಕ್ತರಿಗೆ ಎಳ್ಳು-ಬೆಲ್ಲ