ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಸರ್ಕಾರ ಬಜೆಟ್ನಲ್ಲಿ ಸಿಂಹಪಾಲು ಅನುದಾನವನ್ನು ಗ್ಯಾರಂಟಿ ಯೋಜನೆಗೆ ಮೀಸಲಿಟ್ಟಿದೆ. ಈ ಯೋಜನೆಗಳಿಂದ ಬಡವರ ಹಸಿವು ನೀಗಿದೆ. ಮಹಿಳೆಯರ ಸಬಲೀಕರಣವಾಗಿದೆ ಎಂದರು.
ಅಧಿಕಾರಿಗಳು ಗ್ಯಾರಂಟಿ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಮುಂದಿನ ದಿನಗಳಲ್ಲಿ ಗ್ರಾಪಂ ಮಟ್ಟದಲ್ಲಿ ಗ್ಯಾರಂಟಿ ವಿಲೇವಾರಿ ಸಭೆ ನಡೆಸಲು ಕ್ರಮ ವಹಿಸುವಂತೆ ಜಿಪಂ ಸಿಇಒ ನಂದಿನಿ ಅವರಿಗೆ ಸೂಚಿಸಿದರು.ಜಿಎಸ್ಟಿ, ಐಟಿ ಸೇರಿದಂತೆ ಕೆಲವು ಸಣ್ಣಪುಟ್ಟ ಲೋಪದೋಷಗಳಿಂದಾಗಿ ಕೆಲವು ಅರ್ಹರಿಗೆ ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿದ್ದಾರೆ. ತಾಲೂಕಿನ 734 ಮಂದಿ ಮಹಿಳೆಯರು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇದು ಕೇವಲ ಮಂಡ್ಯ ಜಿಲ್ಲೆಯಲ್ಲಿ ಮಾತ್ರವಲ್ಲ. ಇಡೀ ರಾಜ್ಯದ ಸಮಸ್ಯೆಯಾಗಿದೆ. ಹಾಗಾಗಿ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ನಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಯುವನಿಧಿ ಯೋಜನೆ ಬಗ್ಗೆ ಹೆಚ್ಚು ಪ್ರಚಾರವಾಗಬೇಕು. ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು. ಇನ್ನೂ ಶಕ್ತಿ ಯೋಜನೆ ಹಾಗೂ ಗೃಹಜ್ಯೋತಿ ಯೋಜನೆಯೂ ಸಾಕಷ್ಟು ಅನುಕೂಲವಾಗಿದೆ ಎಂದರು.
ಗೃಹಲಕ್ಷ್ಮಿ ಯೋಜನೆ ಹಣದಿಂದ ತಾಲೂಕಿನ ರೈಲ್ವೆ ಸ್ಟೇಷನ್ ಬಳಿ ಹಣ್ಣಿನ ಅಂಗಡಿ ಹಾಕಿಕೊಂಡು ಬದುಕು ಕಟ್ಟಿಕೊಂಡಿರುವ ಕೆನ್ನಾಳು ಗ್ರಾಮದ ಜಯಲಕ್ಷ್ಮಿ ಎಂಬ ಮಹಿಳೆ ಡಾ.ಪುಷ್ಪ ಅಮರನಾಥ್ ಅವರನ್ನು ಅಭಿನಂದಿಸಿದರು. ನಿಮ್ಮಂತ ಮಹಿಳೆಯರಿಂದ ಗೃಹಲಕ್ಷ್ಮಿ ಯೋಜನೆಗೆ ಗೌರವ ಬಂದಿದೆ. ನೀವು ಮಹಿಳಾ ಶಕ್ತಿಯಾಗಿದ್ದೀರಾ ಎಂದು ಬಣ್ಣಿಸಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಪ್ರಸ್ತುತ ಅಕ್ಕಿಯ ಜೊತೆ ರಾಗಿ ಸಹ ನೀಡಲಾಗುತ್ತಿದೆ. ಇನ್ನೂ ಎರಡು ದಿನದೊಳಗಾಗಿ ಪಡಿತರ ವಿತರಿಸಲಾಗುವುದು. ಬ್ಯಾಂಕ್ನಲ್ಲಿ ಖಾತೆ ತೆರೆಯುವ ವೇಳೆ ಪ್ಯಾನ್ ಸಂಖ್ಯೆ ಬೇಕಿಲ್ಲ. ಈ ಬಗ್ಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಂದ ಚರ್ಚಿಸಿ ನಿರ್ದೇಶನ ನೀಡಲಾಗುವುದು ಎಂದರು.