ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಕಲಾಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡುವವರೆಗೆ ನಾನು ವಿಶ್ರಮಿಸುವುದಿಲ್ಲ ಎಂದು ಶಪಥ ಮಾಡಿದ್ದೇನೆ ಎಂದರು.
ರಾಜ್ಯದ 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ, ಸಿಎಂ ತಿರುಗಿ ನೋಡಲಿಲ್ಲ. ಅಲ್ಪಸಂಖ್ಯಾತರಿಗೆ ಸಿಎಂ ಸಾವಿರ ಕೋಟಿ ರುಪಾಯಿ ನೀಡುವುದಾಗಿ ಹೇಳಿದ್ದಾರೆ. ಅದೇ ಹಣವನ್ನು ಉತ್ತರ ಕರ್ನಾಟಕ್ಕೆ ನೀಡಿದರೆ ಇಲ್ಲಿನ ಜ್ವಲಂತ ಸಮಸ್ಯೆಗಳೇ ಬಗೆಹರಿಯುತ್ತಿದ್ದವು ಎಂದರು.ದಿನದ 24 ಗಂಟೆ ಅಲ್ಪಸಂಖ್ಯಾತರ ಬಗ್ಗೆ ಚಿಂತನೆ ನಡೆಸುವ ಸಿಎಂಗೆ ಬಡವರ, ರೈತರ ಹಾಗೂ ದೀನ ದಲಿತರ ಸಮಸ್ಯೆಗಳ ಬಗ್ಗೆ ಗಮನವಿಲ್ಲ. ಮುಂಬರುವ ಲೋಕಸಭೆ ಚುನಾವಣೆಗಾಗಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ನೀವು ರಾಜ್ಯಕ್ಕೆ ಸಿಎಂ, ಕೇವಲ ಅಲ್ಪಸಂಖ್ಯಾತರಿಗಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯ ಸರಕಾರ ಬಜೆಟ್ ಮಂಡಿಸುವ ಪೂರ್ವದಲ್ಲಿ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ದೊಡ್ಡ ಪ್ರತಿಭಟನೆ ಹಮ್ಮಿಕೊಳ್ಳಬೇಕಿದೆ ಎಂದರು.
---
ಬಾಕ್ಸ್ಕಾಂಗ್ರೆಸ್ ಬಿಡಲು 50 ಶಾಸಕರು ರೆಡಿ
---
ಕೋಟ್:ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರಾಜ್ಯದ ಭರವಸೆಯ ನಾಯಕರಾಗಿದ್ದಾರೆ. ನೂತನ ತಂಡವನ್ನು ಕಟ್ಟಿಕೊಂಡು ರಾಜ್ಯಾದ್ಯಂತ ಸಂಚರಿಸುವ ಮೂಲಕ ಲೋಕಸಭೆ ಚುನಾವಣೆಗೆ ತಯಾರು ನಡೆಸಿದ್ದಾರೆ. ಅವರ ನೇತೃತ್ವದಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಬೇಕು.
---
ಬಾಗಲಕೋಟೆ ಜಿಲ್ಲೆಗೂ ಯಡಿಯೂರಪ್ಪನವ್ರಿಗೂ ಅವಿನಾಭಾವ ಸಂಬಂಧ ಇದೆ. ಬಹುಶಃ ಬಾಗಲಕೋಟೆ ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೆ ಯಡಿಯೂರಪ್ಪ ನವ್ರು ಭೇಟಿ ಕೊಟ್ಟಿದ್ದಾರೆ. ಯಡಿಯೂರಪ್ಪನವರು ಯಾವಾಗಲೂ ಒಂದು ಮಾತು ಹೇಳತ್ತಿದ್ದರು. ಉತ್ತರ ಕರ್ನಾಟಕ ಜನರಲ್ಲಿ ಸ್ವಲ್ಪ ಬಡತನ ಇರಬಹುದು. ಹೃದಯದಿಂದ ಶ್ರೀಮಂತರಿದ್ದಾರೆ ಎಂದು ಹೇಳಿದ್ದರು. ಅವರ ಮಾತು ನೂರಕ್ಕೆ ನೂರರಷ್ಟು ಸತ್ಯ ಅನಿಸುತ್ತಿದೆ. ನನಗೂ ಅಷ್ಟು ಪ್ರೀತಿಯಿಂದ ಬರಮಾಡಿಕೊಂಡಿದ್ದೀರಿ.-ಬಿ.ವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ವಿಜಯೇಂದ್ರ ಅವರು ಮೀನಿನ ಮರಿಯಂತೆ. ಮೀನಿನ ಮರಿಗೆ ಈಜು ಕಲಿಸುವ ಅವಶ್ಯಕತೆ ಇಲ್ಲ. ಯಡಿಯೂರಪ್ಪ ಅವರಿಗಿಂತಲೂ ವಿಜಯೇಂದ್ರ ಅವರು ಒಂದು ಹೆಜ್ಜೆ ಮುಂದೆ ಇರುತ್ತಾರೆ. ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಮಾಡಲು ನಾವೆಲ್ಲ ದುಡಿಯಬೇಕು, ಶ್ರಮಿಸಬೇಕಿದೆ.
-ಗೋವಿಂದ ಕಾರಜೋಳ ಮಾಜಿ ಡಿಸಿಎಂ