ಹೊಸಕೋಟೆ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್ ಮಾತನಾಡಿ, ದೇಶವನ್ನಾಳುವ ಸರ್ಕಾರ ಶ್ರೀಮಂತರ ಪರವಾಗಿದ್ದರೆ, ರಾಜ್ಯವನ್ನಾಳುವ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಇದಕ್ಕೆ ನಿದರ್ಶನವಾಗಿ ಬಡವರ ಹೊಟ್ಟೆ ತುಂಬಿಸುವ ಗ್ಯಾರಂಟಿ ಯೋಜನೆಗಳು ಕಣ್ಣ ಮುಂದಿವೆ. ಪ್ರಮುಖವಾಗಿ ನುಡಿದಂತೆ ನಡೆದಿರುವ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಗಿದೆ ಎಂದರು. ಅಷ್ಟೇ ಅಲ್ಲದೆ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ ರಾಜಶೇಖರ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ಮುನಿಶಾಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಗೀರ್ ಅಹಮ್ಮದ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಎನ್.ಹೊಸಹಳ್ಳಿ ರವಿ, ತಾಪಂ ಮಾಜಿ ಸದಸ್ಯ ಬೀರಪ್ಪ ಹಾಜರಿದ್ದರು.ಫೋಟೋ : 6 ಹೆಚ್ಎಸ್ಕೆ 1