ಜನಹಿತ ಮರೆತ ಕಾಂಗ್ರೆಸ್‌: ಬಿಎಸ್‌ವೈ ಟೀಕೆ

KannadaprabhaNewsNetwork |  
Published : Apr 02, 2026, 02:00 AM IST
ಯಡಿಯೂರಪ್ಪ ಪ್ರಚಾರ | Kannada Prabha

ಸಾರಾಂಶ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ವಾತಾವರಣ ಚೆನ್ನಾಗಿದ್ದು, ಇಲ್ಲಿ ಹಾಗೂ ಬಾಗಲಕೋಟೆ ಎರಡೂ ಕಡೆ ಬಿಜೆಪಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ವಾತಾವರಣ ಚೆನ್ನಾಗಿದ್ದು, ಇಲ್ಲಿ ಹಾಗೂ ಬಾಗಲಕೋಟೆ ಎರಡೂ ಕಡೆ ಬಿಜೆಪಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಸವರಾಜ ಪೇಟೆ, ಕಾಯಿಪೇಟೆ, ಸ್ವಾಗೇರಪೇಟೆ ಸೇರಿ ನಗರದ ವಿವಿಧೆಡೆ ಸತತ 2ನೇ ದಿನವೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ.ದಾಸಕರಿಯಪ್ಪ ಪರ ರೋಡ್ ಶೋ ನಡೆಸಿ, ಮತಯಾಚಿಸಿದರು. ಉರಿವ ಬಿಸಿಲನ್ನೂ ಲೆಕ್ಕಿಸದೆ ಸುಮಾರು 2 ಗಂಟೆ ಅವರು ರೋಡ್‌ ಶೋ ನಡೆಸಿದರು.

ದಕ್ಷಿಣದ ಬಸವರಾಜ ಪೇಟೆಯಿಂದ ತೆರೆದ ವಾಹನದಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪ ಭರ್ಜರಿ ರೋಡ್ ಶೋ ನಡೆಸಿ, ಮತಯಾಚಿಸಿದರು. ಹುಬ್ಬಳ್ಳಿ ಚೌಡಪ್ಪ ಗಲ್ಲಿ, ಮಹಾರಾಜ ಪೇಟೆ, ಹಾಸಭಾವಿ ವೃತ್ತ, ಕಾಯಿಪೇಟೆ ಬಸವೇಶ್ವರ ದೇವಸ್ಥಾನ ರಸ್ತೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ವೀರ ಮದಕರಿ ನಾಯಕ ವೃತ್ತ ಇತರೆಗೆ ರೋಡ್ ಶೋ ಸಾಗಿತು.

ಹೋದಲ್ಲೆಲ್ಲಾ ಅಭಿಮಾನಿಗಳು, ಹಿತೈಷಿಗಳು ಯಡಿಯೂರಪ್ಪನವರಿಗೆ ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿ, ರಾಜಾಹುಲಿ ಎಂಬ ಘೋಷಣೆ ಕೂಗುತ್ತಾ, ಸನ್ಮಾನಿಸುತ್ತಾ, ಕೈ ಮುಗಿಯುತ್ತಾ, ಕೈಬೀಸುತ್ತಾ, ಹೂವಿನ ರೀತಿ ಚಿಹ್ನೆ ತೋರಿಸುವ ಮೂಲಕ ಬೆಂಬಲಿಸುತ್ತಿದ್ದುದು ಕಂಡು ಬಂತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ನಿರೀಕ್ಷೆಯನ್ನೂ ಮೀರಿ ಎರಡೂ ಕ್ಷೇತ್ರದಲ್ಲಿ ನಮಗೆ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಸರ್ಕಾರದಿಂದ ಜನ ರೋಸಿದ್ದಾರೆ. ಜನಹಿತ ಮರೆತು ಸರ್ಕಾರದ ಖಜಾನೆ ಲೂಟಿ ಮಾಡುತ್ತಿರುವ ಕಾಂಗ್ರೆಸ್ಸಿನ ಬಗ್ಗೆ ಜನ ಭ್ರಮನಿರಸನರಾಗಿದ್ದಾರೆ ಎಂದರು.

ರೋಡ್‌ ಶೋಗೂ ಮುನ್ನ ಡಿಸಿಎಂ ಲೇಔಟ್‌ನಲ್ಲಿ ಆರ್ಯ ವೈಶ್ಯ ಸಂಘ ಸಂಸ್ಥೆಗಳ ಸಮೂಹ ಆಯೋಜಿಸಿದ್ದ ‘ಆರ್ಯವೈಶ್ಯ ಬಂಧುಗಳ ಸ್ನೇಹ ಮಿಲನ’ ಸಮಾರಂಭದಲ್ಲಿ ಪಾಲ್ಗೊಂಡು, ಬಿಜೆಪಿ ಪರ ಮತಯಾಚಿಸಿದರು. ಅಲ್ಲದೆ, ಪಿ.ಜೆ.ಬಡಾವಣೆಯಲ್ಲಿರುವ ಜೆಡಿಎಸ್ ನಾಯಕ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ನಿವಾಸಕ್ಕೆ ಭೇಟಿ ನೀಡಿ, ಮಾಜಿ ಸಚಿವ ದಿವಂಗತ ಎಚ್‌.ಶಿವಪ್ಪನವರ ಜನ್ಮದಿನಾಚರಣೆಯಲ್ಲಿ ಭಾಗಿಯಾದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಸಂಘಟಿತ ಕಾರ್ಮಿಕರಿಗೂ ಸರ್ಕಾರಿ ಸೌಲಭ್ಯ ಕಲ್ಪಿಸಿ: ಕಾಮಾಕ್ಷಿ ರೇವಣಕರ
ಮೈಲಾರ ಮಹಾದೇವಪ್ಪನವರ ರಾಷ್ಟ್ರಪ್ರೇಮ ಎಲ್ಲರಿಗೂ ಆದರ್ಶ: ಡಾ. ವಿಜಯಮಹಾಂತೇಶ ದಾನಮ್ಮನವರ