ರಾಜ್ಯದಲ್ಲಿ ಕಾಂಗ್ರೆಸ್ಸಿಗೆ 20ಕ್ಕೂ ಹೆಚ್ಚು ಸ್ಥಾನ: ರಾಯರೆಡ್ಡಿ

KannadaprabhaNewsNetwork |  
Published : May 08, 2024, 01:03 AM ISTUpdated : May 08, 2024, 01:04 AM IST
7ಕೆಕೆಆರ್1:ಕುಕನೂರು ತಾಲೂಕಿನ ತಳಕಲ್ಲ ಗ್ರಾಮದಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮತದಾನ ಮಾಡಿದರು. ಶಾಸಕ ರಾಘವೇಂದ್ರ ಹಿಟ್ನಾಳ ಈ ವೇಳೆ ಆಗಮಿಸಿದ್ದರು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರು 10 ವರ್ಷ ಮಾಡಿದ ಆಡಳಿತ ಜನರಲ್ಲಿ ನಿರಾಸೆ ಮೂಡಿಸಿದೆ.

ಮತದಾನ ಮಾಡಿದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ

ಕನ್ನಡಪ್ರಭ ವಾರ್ತೆ ಕುಕನೂರು

ಪ್ರಧಾನಿ ನರೇಂದ್ರ ಮೋದಿಯವರು 10 ವರ್ಷ ಮಾಡಿದ ಆಡಳಿತ ಜನರಲ್ಲಿ ನಿರಾಸೆ ಮೂಡಿಸಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ತಾಲೂಕಿನ ತಳಕಲ್ಲ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಮತದಾನ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತದೆ ಎನ್ನುತ್ತಿದ್ದಾರೆ. ಆದರೆ ಆ ರೀತಿಯ ವಾತಾವರಣ ಇಲ್ಲ ಎಂದರು.

ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ:

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ. ಸಿಎಂ ಸಿದ್ದರಾಮಯ್ಯ ಜನಪರ ಆಡಳಿತಗಾರ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಕೊಪ್ಪಳದಲ್ಲಿ ರಾಜಶೇಖರ ಹಿಟ್ನಾಳ ವಿಜಯಶಾಲಿ ಆಗಲಿದ್ದಾರೆ ಎಂದರು.

ರಾಯರಡ್ಡಿ ಅವರೊಂದಿಗೆ ಮತಕೇಂದ್ರದವರೆಗೂ ಹೆಜ್ಜೆ ಹಾಕಿ ಸಾಥ್ ನೀಡಿದ ಶಾಸಕ ರಾಘವೇಂದ್ರ ಹಿಟ್ನಾಳ್‌, ರಾಜಶೇಖರ ಹಿಟ್ನಾಳ 1.5 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಗ್ಯಾರಂಟಿ ಯೋಜನೆಗಳು ಜನರಿಗೆ ಅನುಕೂಲ ಆಗಿವೆ. ರೈತರು, ಮಹಿಳೆಯರು, ಯುವಕರು, ಹಿರಿಯರು ಎಲ್ಲರೂ ಕಾಂಗ್ರೆಸ್‌ಗೆ ಬೆಂಬಲವಾಗಿ ನಿಂತಿದ್ದಾರೆ. ಈ ಉತ್ಸಾಹ ನೋಡಿದಾಗ ಗೆಲುವು ನಿಶ್ಚಿತ ಎಂದರು.

ರಾಯರಡ್ಡಿ ಕುಟುಂಬ ಸಮೇತ ತೆರಳಿ ಮತದಾನ ಮಾಡಿದರು. ಪತ್ನಿ ಆಶಾ, ಮಗಳು ಮಮತಾ ಮತ್ತು ಸಹೋದರ ಶಿವಣ್ಣ ರಾಯರಡ್ಡಿ ಹಾಗೂ ಕುಟುಂಬದವರು ಇದ್ದರು.

ಪ್ರಧಾನಿ ಮೋದಿ ಮೇಲೆ ಜನರ ವಿಶ್ವಾಸ:ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿರುವ ವಿಶ್ವಾಸ ಜನರನ್ನು ಉತ್ಸಾಹದಿಂದ ಬಿಜೆಪಿಗೆ ಮತ ನೀಡುವಂತೆ ಮಾಡಿದೆ. ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ಸಂಸತ್ತಿನಲ್ಲಿ ಕೊಪ್ಪಳ ಪ್ರತಿನಿಧಿಯಾಗಿ ಸೇವೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಮೊಮ್ಮಗಳು ವೀಕ್ಷಾಳನ್ನು ಎತ್ತಿಕೊಂಡು ಮತದಾನ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜನರ ಉತ್ಸಾಹ, ಮೋದಿ ಮೇಲೆ ಜನರಿಟ್ಟಿರುವ ವಿಶ್ವಾಸದಿಂದ ಎಲ್ಲ ಮತಗಟ್ಟೆಯಲ್ಲಿ ಜನರು ಮತದಾನ ಮಾಡಿದ್ದಾರೆ. ಭಾರತವನ್ನು ವಿಶ್ವ ಗುರುವನ್ನಾಗಿ ಮಾಡಬೇಕಾದ ಸಂಕಲ್ಪವನ್ನು ಪ್ರತಿಯೊಬ್ಬ ಮತದಾರ ಈಡೇರಿಸಲಿದ್ದಾರೆ. ಕ್ಯಾವಟರ್ ಈ ಚುನಾವಣೆಯಲ್ಲಿ ಗೆದ್ದು ಪ್ರಧಾನಿ ನರೇಂದ್ರ ಮೋದಿಗೆ ಬಲ ನೀಡಲಿದ್ದಾರೆ ಎಂದರು.

ಈ ಲೋಕಸಭಾ ಚುನಾವಣೆ ರಾಷ್ಟ್ರಕ್ಕೆ ಶಕ್ತಿ ತುಂಬಲಿದೆ. ಹೆಚ್ಚು ಸ್ಥಾನ ಗೆದ್ದು ಬಿಜೆಪಿ ಮತ್ತೆ ಕೇಂದ್ರದಲ್ಲಿ ಆಡಳಿತ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ. ರಾಷ್ಟ್ರದ ಜನರೇ ನನ್ನ ಪರಿವಾರ ಎಂದು ದೇಶಕ್ಕೆ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದಾರೆ ಎಂದರು.ಗ್ರಾಪಂ ಅಧ್ಯಕ್ಷ ಹನುಮಂತಪ್ಪ ಬನ್ನಿಕೊಪ್ಪ, ಪ್ರಭು ಆಚಾರ್, ನಾಗರಡ್ಡಿ ಗಟ್ಟಿ, ಕಪ್ಪತ್ತಪ್ಪ ಅಂಗಡಿ, ಯಮನಪ್ಪ ಈಳಗೇರ, ದೇವಪ್ಪ ದ್ಯಾಂಪೂರು, ಶರಣಯ್ಯ ಗಾಂಜಿ, ಗ್ರಾಮದ ಹಿರಿಯರು, ಮುಖಂಡರಿದ್ದರು.ರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ