ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯ ವಿವಿಧೆಡೆ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ಬುಧವಾರ ಯಾದಗಿರಿ ನಗರಕ್ಕೆ ಆಗಮಿಸಿದ್ದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು.
ದಲಿತರನ್ನು ದಾರಿ ತಪ್ಪಿಸಿ ಮತ ಸೆಳೆದಿರುವ ಕಾಂಗ್ರೆಸ್ 136 ಸೀಟು ಗೆದ್ದಿದ್ದಾಗಿ ಬೀಗಿದ್ದರು. ನಂಬಿದವರ ಚರ್ಮ ತೆಗೆದು ಸಿದ್ದರಾಮಯ್ಯನವರು ಚಪ್ಪಲಿ ಹಾಕಿ ಮೆರೆಯುತ್ತಿದ್ದಾರೆ ಎಂದು ದೂರಿದರು.ಅತಿವೃಷ್ಟಿ, ಪ್ರವಾಹದ ಕಡೆ ಗಮನ ಕೊಡಬೇಕಾದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ, ದಿನಕ್ಕೊಂದರಂತೆ ರಾಜ್ಯ ಸರ್ಕಾರದ ಹಗರಣಗಳು ಹೊರಕ್ಕೆ ಬರುತ್ತಿದ್ದು, ಸರ್ಕಾರಕ್ಕೆ ಉತ್ತರ ಕೊಡಲಿಕ್ಕಾಗುತ್ತಿಲ್ಲ.
ನೀವು (ಕಾಂಗ್ರೆಸ್ ಸರ್ಕಾರ) ಮಾಡಿದ ಹಗರಣಗಳು ನಿಮ್ಮನ್ನು ಸುಮ್ಮನೆ ಬಿಡುತ್ತವೆಯೇ ಎಂದು ಪ್ರಶ್ನಿಸಿದ ನಾರಾಯಣಸ್ವಾಮಿ, ಇಡಿ ಕಾನೂನಾತ್ಮಕವಾಗಿ ಬಂದಿದೆ. ಉದ್ಧಟತನದ ಮಾತಿಗೆ ನಾವು ಜಗ್ಗುವುದಿಲ್ಲ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಈ ಕುರಿತು ವರದಿಯನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ಸಲ್ಲಿಸುವುದಾಗಿ ಹೇಳಿದ ಅವರು, ಕೆಲವೆಡೆ ಮನೆಗಳು ಬಿದ್ದಿದ್ದು ಮತ್ತೆ ಕೆಲವೆಡೆ ಬೆಳೆನಾಶ ಸಂಭವಿಸಿದೆ. ಕಳೆದ ವರ್ಷ ಬರಗಾಲದ ಪರಿಸ್ಥಿತಿ ಇದ್ದರೂ ಸರಕಾರ ಎಚ್ಚತ್ತುಕೊಳ್ಳಲಿಲ್ಲ; ಇದರಿಂದ ರೈತರಿಗೆ ಅನ್ಯಾಯವಾಗಿದೆ ಎಂದರು.
ಶ್ರಮ, ಪಕ್ಷನಿಷ್ಠೆ, ಜನಸಂಪರ್ಕ ಮತ್ತಿತರ ವಿಚಾರಗಳನ್ನು ಗುರುತಿಸಿ ತಮ್ಮನ್ನು ಮೇಲ್ಮನೆ ವಿಪಕ್ಷ ನಾಯಕನಾಗಿ ನೇಮಿಸಿದ ಪಕ್ಷದ ನಾಯಕತ್ವಕ್ಕೆ ಅವರು ಧನ್ಯವಾದ ಸಲ್ಲಿಸಿದರು.ಈ ವೇಳೆ ರಾಯಚೂರು ಬಿಜೆಪಿ ಜಿಲ್ಲಾಧ್ಯಕ್ಷ ಶಾಸಕ ಡಾ.ಶಿವರಾಜ್ ಪಾಟೀಲ್, ಮಹೇಶರಡ್ಡಿ ಮುದ್ನಾಳ್, ದೇವೇಂದ್ರನಾಥ ನಾದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ಪರುಶುರಾಮ ಕುರಕುಂದಿ, ಮೇಲಪ್ಪ ಗುಳಗಿ, ಖಂಡಪ್ಪ ದಾಸನ, ಸಿದ್ದಣ್ಣಗೌಡ ಕಾಡಂನೊರ, ಮಹದೆವಪ್ಪ ಯಲಸತ್ತಿ ಸೇರಿ ಇತರರಿದ್ದರು.