ಮಹಿಳಾ ಹಕ್ಕು, ಸ್ವಾತಂತ್ರ್ಯ ಕಸಿಯುವ ಕೆಲಸಕ್ಕೆ ಕೈ ಹಾಕಿದ ಕಾಂಗ್ರೆಸ್‌: ಆರೋಪ

KannadaprabhaNewsNetwork |  
Published : Apr 19, 2026, 02:45 AM IST
ಹೂವಿನಹಡಗಲಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ದಿಂದ ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ಆಯೋಜಿಸಿತ್ತು.  | Kannada Prabha

ಸಾರಾಂಶ

ಮಹಿಳಾ ಮೀಸಲಾತಿಗೆ ರಾಹುಲ್‌ ಗಾಂಧಿ ಮತ್ತು ಅವರ ಟೀಮ್‌ ಅಡ್ಡಿಪಡಿಸಿ, ಸಂಭ್ರಮಾಚರಣೆ ಮಾಡುತ್ತಿರುವುದು ಮಹಿಳಾ ಕುಲಕ್ಕೆ ಮಾಡಿದ ಮೋಸ

ಹೂವಿನಹಡಗಲಿ: ನಾರಿಯರಿಗೆ ಶೇ.33ರಷ್ಟು ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ಮತ ಹಾಕಿದ ಕಾಂಗ್ರೆಸ್ ತನ್ನ ಕರಾಳಮುಖ ಅನಾವರಣಗೊಳಿಸಿ ತನ್ನ ಮೋಸದಾಟ ಮುಂದುವರಿಸಿದೆ. ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯ ಕಸಿಯುವ ಕೆಲಸ ಮಾಡಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುವರ್ಣ ಆರುಂಡಿ ಆರೋಪಿಸಿದರು.

ಪಟ್ಟಣದ ಲಾಲ್‌ ಬಹದ್ಧೂರ್‌ ಶಾಸ್ತ್ರಿ ವೃತ್ತದಲ್ಲಿ ಬಿಜೆಪಿ ಮಹಿಳಾ ಮೋರ್ಚಾ, ಬಿಜೆಪಿ ಮಂಡಲ ಪದಾಧಿಕಾರಿಗಳ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳಾ ಮೀಸಲಾತಿ ಮಸೂದೆಗೆ ಮತ ಹಾಕದ ಕಾಂಗ್ರೆಸ್‌ ಹಾಗೂ ತನ್ನ ಮಿತ್ರ ಪಕ್ಷಗಳ ವಿರೋಧವನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಮಹಿಳೆಯರಿಗೆ 4 ಗ್ಯಾರಂಟಿ ಯೋಜನೆಗಳನ್ನು ನೀಡಿ ಬಾಯಿ ಮುಚ್ಚಿಸಿದೆ. ಆದರೆ ಕೇಂದ್ರ ಸರ್ಕಾರ ನಾರಿಯರಿಗೆ ಶಕ್ತಿ ನೀಡುವಂತಹ ಮಹತ್ವದ ಮಹಿಳಾ ಮೀಸಲಾತಿಗೆ ರಾಹುಲ್‌ ಗಾಂಧಿ ಮತ್ತು ಅವರ ಟೀಮ್‌ ಅಡ್ಡಿಪಡಿಸಿ, ಸಂಭ್ರಮಾಚರಣೆ ಮಾಡುತ್ತಿರುವುದು ಮಹಿಳಾ ಕುಲಕ್ಕೆ ಮಾಡಿದ ಮೋಸ ಎಂದು ಜರಿದರು.

ಶೇ.33 ರಷ್ಟು ಮಹಿಳಾ ಮೀಸಲಾತಿ ಮಸೂದೆ ಕುರಿತು ಹಳ್ಳಿಯಲ್ಲಿ ಜಾಗೃತಿ ಮೂಡಿಸಿ ಬದಲಾವಣೆ ತರಬೇಕಿದೆ. ಇವರಿಗೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್‌ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವದ ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್‌ ದೊಡ್ಡ ಅನ್ಯಾಯ ಮಾಡಿದೆ. ಈ ಕುರಿತು ಪ್ರತಿ ಹಳ್ಳಿಗಳ ಮಹಿಳೆಯರಿಗೆ ಬೂತ್‌ ಮಟ್ಟದಲ್ಲಿ ಅರಿವು ಮೂಡಿಸುತ್ತೇವೆಂದು ಹೇಳಿದರು.

ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಐನಳ್ಳಿ ಭಾಗ್ಯಮ್ಮ ಮಾತನಾಡಿ, ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲಿಸದೇ ಮಹಿಳೆಯರಿಗೆ ಕಾಂಗ್ರೆಸ್‌ ಕಂಟಕಪ್ರಾಯವಾಗಿದೆ ಎಂದು ದೂರಿದರು.

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೀರಾಬಾಯಿ ಮಾತನಾಡಿ, ಮಹಿಳೆಯರ ಬಹು ದಿನಗಳ ಕನಸಿಗೆ ಕಾಂಗ್ರೆಸ್‌ ಕೊಳ್ಳಿ ಇಟ್ಟಿದೆ. ಮಹಿಳಾ ಮೀಸಲಾತಿ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಮಾಡುತ್ತಿದ್ದರೆ ಇತ್ತ ಭ್ರಷ್ಟ ಕಾಂಗ್ರೆಸ್‌ ಪಕ್ಷಕ್ಕೆ ಮಹಿಳೆಯರ ಶಾಪ ತಟ್ಟದೇ ಬಿಡುವುದಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಟಿ ಲಿಂಗರಾಜ, ಬಸವರಾಜ ಪುಟಾಣಿ, ವಿನೋದ್‌ ಜಾಡರ್‌, ಪುನೀತ್‌ ದೊಡ್ಮನಿ, ಟಿ.ಸೌಮ್ಯ, ಬಿ.ಎಚ್‌.ಎಂ. ವಿಜಯಲಕ್ಷ್ಮೀ, ಎಂ.ಗೀತಾ, ಗೀತಮ್ಮ ಬಡಿಗೇರ, ಕುಸುಮಾ, ಕಾಳಮ್ಮ, ವೀಣಾ, ರಶೀದಾ, ಹಸೀನಾ ಸೇರಿದಂತೆ 50ಕ್ಕೂ ಹೆಚ್ಚು ಮಹಿಳೆಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಸಿಆರ್‌ಇ ಎಸ್ಪಿ, ಡಿವೈಎಸ್ಪಿ ವಿರುದ್ಧ ದಲಿತ ಇನ್ಸ್‌ಪೆಕ್ಟರ್ ಕಿರುಕುಳ ಆರೋಪ
ಈ ಬಾರಿ ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಶೇ. 30-35ರಷ್ಟು ಇಳಿಮುಖ