ಕಾಂಗ್ರೆಸ್ ಹಿಟ್ಅಂಡ್ ರನ್ ತಂತ್ರ: ಸಂಸದ ಬೊಮ್ಮಾಯಿ

KannadaprabhaNewsNetwork |  
Published : Nov 15, 2025, 02:15 AM IST
ಮ | Kannada Prabha

ಸಾರಾಂಶ

ಬಿಹಾರದಲ್ಲಿ ಮೋದಿ ಮತ್ತು ನಿತೀಶಕುಮಾರ ಜೋಡಿಯು ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನವನ್ನು ಧೂಳಿಪಟ ಮಾಡಿದೆ. ಆದರೆ ಜನತೆಯ ತೀರ್ಪನ್ನು ಒಪ್ಪಿಕೊಳ್ಳದ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ದೂರು ಸಲ್ಲಿಸುವ ತನ್ನ ಹಳೇ ಚಾಳಿಯನ್ನು ಮುಂದುವರೆಸುವ ಮೂಲಕ ಹಿಟ್ ಅಂಡ್ ರನ್ ತಂತ್ರ ಅಳವಡಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು.

ಬ್ಯಾಡಗಿ: ಬಿಹಾರದಲ್ಲಿ ಮೋದಿ ಮತ್ತು ನಿತೀಶಕುಮಾರ ಜೋಡಿಯು ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನವನ್ನು ಧೂಳಿಪಟ ಮಾಡಿದೆ. ಆದರೆ ಜನತೆಯ ತೀರ್ಪನ್ನು ಒಪ್ಪಿಕೊಳ್ಳದ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ದೂರು ಸಲ್ಲಿಸುವ ತನ್ನ ಹಳೇ ಚಾಳಿಯನ್ನು ಮುಂದುವರೆಸುವ ಮೂಲಕ ಹಿಟ್ ಅಂಡ್ ರನ್ ತಂತ್ರ ಅಳವಡಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು.ಬಿಹಾರ ಫಲಿತಾಂಶದ ಹಿನ್ನೆಲೆಯಲ್ಲಿ ಪಟ್ಟಣದ ಹಳೇ ಪುರಸಭೆ ಬಳಿ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ವಿಜಯೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಬಿಹಾರದ ಜನತೆಯು ಎನ್‌ಡಿಎಗೆ ಸ್ಪಷ್ಟ ಬಹುಮತ ನೀಡಿದ್ದು ಭರ್ಜರಿ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಹಾರದಲ್ಲಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುದೊಡ್ಡ ಮುಖಭಂಗವಾಗಿದೆ ಎಂದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಪ್ರಸ್ತುತ ದಿನಗಳಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಯಾವುದೇ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ತಮ್ಮ ಪಕ್ಷವನ್ನು ಪ್ರಾದೇಶಿಕ ಪಕ್ಷಗಳ ಜೊತೆಗೆ ವಿಲೀನ ಮಾಡುವುದು ಉತ್ತಮ. ಎಡ ಪಕ್ಷಗಳು ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನವನ್ನು ಪಡೆದುಕೊಂಡಿದ್ದು, ಉತ್ತರಪ್ರದೇಶ ಹಾಗೂ ಬಿಹಾರ ಫಲಿತಾಂಶದಲ್ಲಿ ಇದು ಸಾಬೀತಾಗಿದೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಬಿಹಾರದಲ್ಲಿ ಈ ಬಾರಿ ಎನ್‌ಡಿಎ ಸೋಲಲಿದೆ ಎಂದು ಭವಿಷ್ಯ ನುಡಿದಿದ್ದ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿಗೆ ಬಿಹಾರದ ಜನತೆ ಮತ್ತೊಮ್ಮೆ ಎನ್‌ಡಿಎ ಮೈತ್ರಿಗೆ ಗೆಲುವು ತಂದು ಕೊಡುವ ಮೂಲಕ ಉತ್ತರ ನೀಡಿದ್ದಾರೆ ಎಂದರು. ಇದಕ್ಕೂ ಮುನ್ನ ದೆಹಲಿ ಸ್ಫೋಟದಲ್ಲಿ ಮಡಿದ ಜನರಿಗೆ ಮೌನಾಚರಣೆ ನಡೆಸಲಾಯಿತು

ಈ ವೇಳೆ ತಾಲೂಕಾಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ, ಸಂತೋಷಕುಮಾರ ಪಾಟೀಲ, ಶಂಕ್ರಣ್ಣ ಮಾತನವರ, ಶಂಕರಗೌಡ ಪಾಟೀಲ, ಹಾಲೇಶ ಜಾಧವ, ಯಶೋಧರ ಅರ್ಕಾಚಾರಿ, ಪುರಸಭೆ ಮಾಜಿ ಸದಸ್ಯರಾದ ಸುಭಾಸ ಮಾಳಗಿ, ಸರೋಜಾ ಉಳ್ಳಾಗಡ್ಡಿ, ವಿನಯ ಹಿರೇಮಠ, ದ್ಯಾಮನಗೌಡ ಪಾಟೀಲ, ವಿನಾಯಕ ಕಂಬಳಿ, ಪ್ರದೀಪ ಜಾಧವ, ನಿಂಗನಗೌಡ ಪಾಟೀಲ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

Recommended Stories

ಎರಡನೇ ಬೆಳೆಗಿಲ್ಲ ತುಂಗಭದ್ರಾ ನೀರು
ಬಿಹಾರ ಜನರಿಂದ ಕಾಂಗ್ರೆಸ್‌ಗೆ ತಕ್ಕ ಉತ್ತರ: ಜಿ.ಐ. ಹೆಗಡೆ