ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರಿನ ವಿಜಯನಗರದ ಸಪ್ತಪದಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ಆಯೋಜಿಸಿದ್ದ ಬಲಗೈ ಬಲವರ್ಧನೆ ಸಂದೇಶ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸಂವಿಧಾನ ಬದಲಾಯಿಸುತ್ತದೆ, ಡಾ. ಅಂಬೇಡ್ಕರ್ ಅವರಿಗೆ ಅವಮಾನ ಮಾಡುತ್ತಿದೆ ಎಂದು ಹೇಳುತ್ತಾ ಕಾಂಗ್ರೆಸ್ ಸುಳ್ಳಿನ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಸಂವಿಧಾನ ರಕ್ಷಣೆಯ ನೆಪದಲ್ಲಿ ಜಾಥಾ ನಡೆಸಿದ್ದ ಕಾಂಗ್ರೆಸ್ ಅದೇ ಸಂವಿಧಾನವನ್ನು ಕಡೆಗಣಿಸಿ ಹಿಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ರೂಪಿಸಿದೆ. ಕಾಂಗ್ರೆಸ್ ನಲ್ಲಿರುವ ದಲಿತ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ. ಹೀಗಾಗಿ, ಯಾರು ದಲಿತರಿಗೆ ದ್ರೋಹ ಮಾಡಿದವರು ಎಂಬುದನ್ನು ಪರಾಮರ್ಶೆ ಮಾಡಬೇಕಿದೆ ಎಂದು ಅವರು ತಿಳಿಸಿದರು.1917 ರಲ್ಲಿ ಈ ಪ್ರಾಂತ್ಯಕ್ಕೆ ಮಹಾರಾಜರು ಮೀಸಲಾತಿ ನೀಡಿದ್ದಾರೆ. ಹೀಗಾಗಿ, ಇಲ್ಲಿನ ನಮ್ಮ ಸಮುದಾಯದ ಜನ ಉನ್ನತ ಸ್ಥಾನಮಾನ ಅಲಂಕರಿಸುವಂತಾಗಿದೆ. ಕಲ್ಯಾಣ, ಬಾಂಬೆ ಕರ್ನಾಟಕದಲ್ಲಿ ಸಮುದಾಯದವರೂ ಕೂಲಿ ಮಾಡಿಕೊಂಡೇ ಬದುಕಬೇಕಾದ ಸ್ಥಿತಿಯಿದೆ. ಹೀಗಾಗಿ ಅವರ ಕೊಡುಗೆಗಳನ್ನು ಸ್ಮರಿಸಿ ಯದುವೀರ ಅವರನ್ನು ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.
ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಬಿಜೆಪಿ ನಗರಾಧ್ಯಕ್ಷರಾದ ಮಾಜಿ ಶಾಸಕ ಎಲ್. ನಾಗೇಂದ್ರ, ಬಿಜೆಪಿ ಮುಖಂಡರಾದ ಮಾಧವ, ಹರೀಶ್ ಕುಮಾರ್, ಡಾ. ರೇವಣ್ಣ, ನಾಗಣ್ಣ, ಪ್ರಮೀಳಾ, ಶಿವರಾಮ, ನಾರಾಯಣ, ಡಾ. ಅಶ್ವಿನಿ ಶರತ್, ಎಸ್. ಮಹದೇವಯ್ಯ, ಶೈಲೇಂದ್ರ ಮೊದಲಾದವರು ಇದ್ದರು.