ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಿಳಾ ಮೀಸಲು ಸಾಂವಿಧಾನಿಕ ತಿದ್ದುಪಡಿ ಮಸೂದೆ ಸೋಲಿಗೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಕಾರಣವಾಗಿವೆ. ದೇಶದ ಶೇ.೫೦ರಷ್ಟಿರುವ ಮಹಿಳೆಯರು ಕಾಂಗ್ರೆಸನ್ನು ಕ್ಷಮಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಹುಮಾನ ಕೊಡಬಹುದು:ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗೆ ಮೊದಲ ಬಹುಮಾನ ಕೊಡಬಹುದು. ಬೆಲೆ ಏರಿಕೆಯಲ್ಲಿ ಕಾಂಗ್ರೆಸ್ ಮೀರಿಸೋದಕ್ಕೆ ಯಾವ ಪಕ್ಷದ ಸರ್ಕಾರದಿಂದಲೂ ಸಾಧ್ಯವಿಲ್ಲ ಎಂದರು.ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ:
ದಲಿತರಿಗೆ ಅನ್ಯಾಯ:
ಪತ್ರಿಕಾಗೋಷ್ಠಿಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಸಿ.ಮಹದೇವಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಡಾ.ನವೀನ್ ಮೌರ್ಯ, ಮಂಡಲ ಬಿಜೆಪಿ ಮಾಜಿ ಅಧ್ಯಕ್ಷ ಎಲ್.ಸುರೇಶ್, ಮಂಡಲ ಪ್ರಧಾನ ಕಾರ್ಯದರ್ಶಿ ಗರಗನಹಳ್ಳಿ ಮಹೇಂದ್ರ, ದಲಿತ ಮುಖಂಡ ಬಸವರಾಜು, ರಾಜೇಂದ್ರ ಸೇರಿದಂತೆ ಹಲವರಿದ್ದರು.
ಅಕ್ರಮ ಗಣಿಗಾರಿಕೆ; ಪತ್ರಕರ್ತರು ಸಿಎಂ ಪ್ರಶ್ನೆ ಮಾಡಿ
ಗುಂಡ್ಲುಪೇಟೆ:
ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ಗಣಿಗಾರಿಕೆಗೆ ಬೆಂಬಲಿಸ್ತೀರಾ? ಎಂದು ಮಂಗಳವಾರ ಗುಂಡ್ಲುಪೇಟೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳನ್ನೇ ಕೇಳಬೇಕು, ಇಂಥವರ ಮೇಲೆ ಕ್ರಮ ಜರುಗಿಸುತ್ತೀರಾ ಎಂದು ಪತ್ರಕರ್ತರು ಪ್ರಶ್ನಿಸಿ ಎಂದು ಸಲಹೆ ನೀಡಿದರು.
ಸ್ಥಳೀಯ ಶಾಸಕರಾದ ಗಣೇಶ್ ಪ್ರಸಾದ್ ಶಾಸಕರಾಗಿರುವವರೆಗೂ ಅವರು ನಡೆಸುವ ಎಲ್ಲಾ ಉದ್ದಿಮೆಗಳನ್ನು ರಾಜ್ಯ ಸರ್ಕಾರ ರದ್ದು ಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಗುಂಡ್ಲುಪೇಟೆ ತಾಲೂಕಿನ ಅಕ್ರಮ ಗಣಿಗಾರಿಕೆಗೆ ಸ್ಥಳೀಯ ಶಾಸಕರೇ ಕಾರಣರಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.ಸಿದ್ದು ಕೈ ಬಿಡೋವಾಗ ಕಾಂಗ್ರೆಸ್ ನಿರ್ಣಾಮ ಗ್ಯಾರಂಟಿ: ಛಲವಾದಿ
ಗುಂಡ್ಲುಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಬಿಡುವಾಗ ಕಾಂಗ್ರೆಸ್ ನಿರ್ಣಾಮ ಮಾಡುತ್ತಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ಸಿದ್ದರಾಮಯ್ಯ ಕಾಂಗ್ರೆಸ್ಗೆ ಸೇರುವುದಕ್ಕೂ ಮುನ್ನ ನೇರ ನಡೆಗೆ ಹೆಸರಾಗಿದ್ದರು. ಕಾಂಗ್ರೆಸ್ ಸೇರಿದ ಬಳಿಕ ಕಾಂಗ್ರೆಸ್ಸಿಗರನ್ನೇ ಮುಳುಗಿಸುವ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು. ಸಿದ್ದರಾಮಯ್ಯ ಹಸಿ ಸುಳ್ಳುಗಾರರಲ್ಲಿ ಸುಳ್ಳುಗಾರ ಎಂದು ಜರಿದರು.------