ಕನ್ನಡಪ್ರಭ ವಾರ್ತೆ ಮಡಿಕೇರಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳು ಕೂಡ ಕಾಂಗ್ರೆಸ್ ನ ಸಾಂಪ್ರದಾಯಿಕ ಕ್ಷೇತ್ರಗಳಾಗಿವೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ. ದಾವಣಗೆರೆ ಕ್ಷೇತ್ರದಲ್ಲಿ ಶಿವಶಂಕರಪ್ಪ ಅವರು ನಮ್ಮ ದೊಡ್ಡ ನಾಯಕರಾಗಿದ್ದವರು. ಅವರ ಮೊಮ್ಮಗನಿಗೆ ಟಿಕೆಟ್ ಕೊಡಲಾಗಿದೆ.
ಮೇಟಿ ನಿಧನರಾದುದರಿಂದ ಅವರ ಕುಟುಂಬಸ್ಥರಿಗೆ ಟಿಕೆಟ್ ನೀಡಲಾಗಿದೆ. ಆರಂಭದಲ್ಲಿ ವಿರೋಧ ವ್ಯಕ್ತವಾಯಿತು ನಿಜ. ಮುಸ್ಲಿಂ ಮತದಾರರು ಹೆಚ್ಚಿದ್ದಾರೆ ಎಂದು ಟಿಕೆಟ್ ಕೇಳಿದ್ದರು. ಈಗ ಎಲ್ಲವೂ ಸರಿ ಹೋಗಿದೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕೇರಳದಲ್ಲಿ ಕಾಂಗ್ರೆಸ್ಗೆ ಅಧಿಕಾರ:
ಎಡಪಕ್ಷಗಳಿಗೆ ಸೋಲಾಗಲಿದೆ. ವಿರಾಜಪೇಟೆ ಕ್ಷೇತ್ರಕ್ಕೆ ಹೊಂದಿಕೊಂಡಿರುವ ಕೇರಳದ ಮಾನಂದವಾಡಿ, ಸುಲ್ತಾನ್ ಬತ್ತೇರಿ ಸೇರಿ ನಾಲ್ಕು ಕ್ಷೇತ್ರಗಳ ಉಸ್ತುವಾರಿಯಾಗಿದ್ದು, ಇಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.
ಪ್ರಧಾನಿಯವರು ಇಸ್ರೇಲ್ ಗೆ ಹೋಗಲು ನಾವು ಹೇಳಿದ್ವಾ? ಹೋಗಿ ವಿ ಸ್ಟ್ಯಾಂಡ್ ಬೈ ಇಸ್ರೇಲ್ ಎಂದರು.
ನಾವು ಸಾಂಪ್ರದಾಯಿಕವಾಗಿ ಇರಾನ್ ಸ್ನೇಹಿತರು. ಸ್ಟ್ರೈಟ್ ಆಫ್ ಹೊರ್ಮುಜ್ ಮುಖಾಂತರ ನಮಗೆ ಎಲ್ಲ ತೈಲೋತ್ಪನ್ನಗಳು ಬರುತ್ತಿದ್ದವು. ಅಂತಾರಾಷ್ಟ್ರೀಯ ವ್ಯವಹಾರಗಳು ಹೇಗಿರಬೇಕು ಎನ್ನುವುದು ಗೊತ್ತಿರಬೇಕು. ದೇಶದಲ್ಲಿ ಡಾಲರ್ ರೇಟ್ 64 ಇದ್ದಾಗ ಆರ್ಥಿಕತೆ ಮಲಗಿದೆ ಎನ್ನುತ್ತಿದ್ದರು. ಈಗ ಡಾಲರ್ ರೇಟ್ 95 ಆಗಿದೆ. ಈಗ ಆರ್ಥಿಕತೆ ಓಡಾಡುತ್ತಿದೆಯಾ ಎಂದು ಪ್ರಶ್ನಿಸಿದರು.