ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ನಲ್ಲೂ ಭಾರತ್ ಜೋಡೋ ಯುವ ಸಂಘಟನೆಯನ್ನು ರಚಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ನೋಂದಾಯಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಆಂದೋಲನ ರೂಪದ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಸಂಘಟನೆಯ ಉಸ್ತುವಾರಿ ಐವನ್ ಡಿಸೋಜಾ ತಿಳಿಸಿದ್ದಾರೆ.
ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ನಲ್ಲೂ ಭಾರತ್ ಜೋಡೋ ಯುವ ಸಂಘಟನೆಯನ್ನು ರಚಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ನೋಂದಾಯಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಆಂದೋಲನ ರೂಪದ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಸಂಘಟನೆಯ ಉಸ್ತುವಾರಿ ಐವನ್ ಡಿಸೋಜಾ ತಿಳಿಸಿದ್ದಾರೆ.ಅವರು ಮನಪಾದ ತಮ್ಮ ಕಚೇರಿಯಲ್ಲಿ 203ನೇ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋ-ಆರ್ಡಿನೇಟರ್ಗಳನ್ನು ಉದ್ದೇಶಿಸಿ ಮಾತನಾಡಿದರು.ಪ್ರತಿಯೊಂದು ವಾರ್ಡ್ನಲ್ಲೂ ಯುವ ಸಂಘಟನೆಗಳನ್ನು ಶೀಘ್ರವಾಗಿ ರಚಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಆನ್ಲೈನ್ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿರುವುದರಿಂದ ಆಫ್ಲೈನ್ ಮೂಲಕ ಯುವಕರ ಅರ್ಜಿಗಳನ್ನು ಭರ್ತಿ ಮಾಡಿಸಿ, ಎಲ್ಲಾ ಸಮುದಾಯಗಳ ಯುವಕರನ್ನು ಒಳಗೊಂಡ ಭಾರತ್ ಜೋಡೋ ಯುವ ಸಂಘಟನೆಗಳನ್ನು ರಚಿಸಬೇಕು. ಮುಂದಿನ ಪೀಳಿಗೆಯಲ್ಲಿ ಯುವ ನಾಯಕತ್ವವನ್ನು ಬೆಳೆಸುವ ನಿಟ್ಟಿನಲ್ಲಿ ಈ ಸಂಘಟನೆಗಳು ಪ್ರಮುಖ ಪಾತ್ರ ವಹಿಸಲಿವೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.