ಮತಗಳ್ಳತನ ಮಾಡುವುದರಲ್ಲಿ ಕಾಂಗ್ರೆಸ್ ನಾಯಕರು ನಿಸ್ಸೀಮರು

KannadaprabhaNewsNetwork |  
Published : Aug 10, 2025, 01:31 AM IST
ದದದದ | Kannada Prabha

ಸಾರಾಂಶ

ರಾಹುಲ್ ಗಾಂಧಿ ತಮ್ಮ ನೇತೃತ್ವದಲ್ಲಿ ರಾಜ್ಯಕ್ಕೆ ಬಂದು ರೀಲ್ ಬಿಡುವ ಕೆಲಸ ಮಾಡಿದ್ದಾರೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ, ಮತಗಳನ್ನು‌ ಕಳ್ಳತನ ಮಾಡುವುದರಲ್ಲಿ ಕಾಂಗ್ರೆಸ್ ನಾಯಕರು ನಿಸ್ಸೀಮರು. ಕುಂಬಳಕಾಯಿ ಕಳ್ಳ ಎಂದರೆ ರಾಹುಲ್ ಗಾಂಧಿ ಹೆಗಲು ಮುಟ್ಟಿ ನೋಡಿಕೊಳ್ಳುತ್ತಾರೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ತಮ್ಮ ನೇತೃತ್ವದಲ್ಲಿ ರಾಜ್ಯಕ್ಕೆ ಬಂದು ರೀಲ್ ಬಿಡುವ ಕೆಲಸ ಮಾಡಿದ್ದಾರೆ. ನಾವು 2008ರ ಚುನಾವಣೆ ವೇ‍ಳೆ ಮತದಾರರ ಲಿಸ್ಟ್ ಪರಿಶೀಲನೆ ಮಾಡಿದ್ದೇವು. ಆಗ ಒಂದೇ ಅಲ್ಪಸಂಖ್ಯಾತರ ಮನೆಯಲ್ಲಿ ಇಪ್ಪತ್ತು ಮೂವತ್ತು ಜನರ ಹೆಸರು ಲೀಸ್ಟನಲ್ಲಿತ್ತು. ನಾವು ಅಂದು ಆ ಆಶ್ರಯ ಮನೆಗಳಿಗೆ ತೆರಳಿ ಪರಿಶೀಲಿಸಿ, ಇಲ್ಲದವರ ಹೆಸರು ತೆಗೆದು ಹಾಕಿಸಿದ್ದೆವು. ಆಗ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿತ್ತು. ಈಗ ಅವರದೇ ಪಕ್ಷದ ರಾಹುಲ್ ಗಾಂಧಿ ಮತಗಳ್ಳತನ ಎಂದು ಹೇಳಿ ಹೊಸ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಜನ 136 ಸೀಟ್ ನೀಡಿದ್ದಾರೆ. ಆಗ ಮತಗಳ್ಳತನ‌ ಆರೋಪ ಯಾಕೆ ಮಾಡಲಿಲ್ಲ? 2024ರ ಲೋಕಸಭಾ ಚುನಾವಣೆಯಲ್ಲಿ ಜನ ಬಿಜೆಪಿಗೆ ಬೆಂಬಲ ನೀಡಿದ ತಕ್ಷಣ ಮತಗಳ್ಳತನ ಆರೋಪ ಮಾಡಿದ್ದಾರೆ. ಬಿಹಾರದ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹೊಸ ನಾಟಕ ಹೂಡಿದ್ದಾರೆ, ಅನುಮಾನ‌ವಿದ್ದರೆ ಚುನಾವಣೆ ಆಯೋಗಕ್ಕೆ ದೂರು ನೀಡಲಿ ಎಂದರು.

ಸಿಎಂ ರಾಜೀನಾಮೆ ನೀಡಲಿ

ಮತಗಳ್ಳತನ ಆರೋಪದಲ್ಲಿ ಪ್ರಧಾನಿ ರಾಜೀನಾಮೆ ಕೇಳಿರುವ ಸಿಎಂ ಸಿದ್ದರಾಮಯ್ಯ ಅವರೇ ರಾಜೀನಾಮೆ ನೀಡಲಿ. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತಗಳ್ಳತದಿಂದಲೇ 136 ಸೀಟು ಬಂದಿದೆಯಾ ಎಂದು ಪ್ರಶ್ನಿಸಿದರು.

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ನಿಂದ ಮತಗಳ್ಳತನವಾಗಿದೆ ಎಂದು ನಾವು ಆರೋಪಿಸಿದರೆ ಸಿಎಂ ರಾಜೀನಾಮೆ ನೀಡುತ್ತಾರಾ ಎಂದ ಅವರು, ಬಿಜೆಪಿ ಯಾವಾಗಲೂ ಜನರ ತೀರ್ಪಿಗೆ ತಲೆಬಾಗುತ್ತದೆ. ಕಾಂಗ್ರೆಸ್‌ ಸಹ ಜನರ ತೀರ್ಪು ಕಾಂಗ್ರೆಸ್ ಒಪ್ಪಿಕೊಳ್ಳುವುದನ್ನು ಕಲಿಯಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಚನ ಸಾಹಿತ್ಯ ಮಾನವತೆ, ಪ್ರೀತಿ, ಅಂತಃಕರಣಗಳ ಪ್ರತೀಕ: ಡಾ.ಸಂಗಮೇಶ ಮಾಟೊಳ್ಳಿ
ಹಿಂದು ಧರ್ಮ ಒಗ್ಗೂಡಿಸಿ ಗಟ್ಟಿಯಾಗಿಸಬೇಕು