ಕನ್ನಡಪ್ರಭ ವಾರ್ತೆ ಮಡಿಕೇರಿ
ಸೋಮವಾರಪೇಟೆ ತಾಲೂಕು ರೈತ ಹೋರಾಟ ಸಮಿತಿ ಕರೆ ನೀಡಿದ್ದ ಬಂದ್ ಗೆ ಉತ್ತಮ ಜನ ಬೆಂಬಲ ವ್ಯಕ್ತವಾಗಿತ್ತು. ಈ ಸಂರ್ದಭ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಮುಖಂಡರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು.
ಈ ಸಂದರ್ಭ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಮತ್ತು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ , ನಿಯೋಗದಲ್ಲಿ ಕಾಂಗ್ರೆಸ್ ಮುಖಂಡ, ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ ,ಕೆ.ಪಿ.ಚಂದ್ರಕಲಾ, ಕೆ.ಎಂ ಲೋಕೇಶ್, ಬಿ.ಬಿಸತೀಶ್ , ವಿ.ಪಿ ಶಶಿಧರ್, ಮಾಜಿ ಎಂ.ಎಲ್.ಸಿ ವೀಣಾ ಅಚ್ಚಯ್ಯ, ಚೇತನ್ ಸೇರಿದಂತೆ ಮತ್ತಿತರು ಹಾಜರಿದ್ದರು.