ಕನ್ನಡಪ್ರಭ ವಾರ್ತೆ ಹರಿಹರ
ತಾಲೂಕು ಬಿಜೆಪಿಯಿಂದ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ದಾವಣಗೆರೆ ಉತ್ತರ ಕ್ಷೇತ್ರ ಕಾಡಜ್ಜಿ ಗ್ರಾಮದ ಕೃಷಿ ಸಂಶೋಧನಾ ಕೇಂದ್ರಕ್ಕೆ ಶಾಸಕ ಬಿ.ಪಿ.ಹರೀಶ್ ತೆರಳಿದ ಸಂದರ್ಭದಲ್ಲಿ. ಕೃಷಿ ಇಲಾಖೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಸಾಗಾಣಿಕೆ ಮಾಡುವುದನ್ನು ಗಮನಿಸಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಕರೆಸಿಕೊಂಡು ಅಕ್ರಮ ತಡೆದಿರುವ ಪರಿಣಾಮ ಅವರ ಮೇಲೆ ಅಟ್ರಾಸಿಟಿ ಕೇಸನ್ನು ದಾಖಲು ಮಾಡಿರುವುದು ಖಂಡನೀಯ ಎಂದರು.ಅಕ್ರಮ ಮಣ್ಣು ಸಾಗಾಣಿಕೆ ಮಾಡುವರ ವಿರುದ್ಧ ದೂರು ದಾಖಲಾಗಿ ಎರಡು ದಿನಗಳ ನಂತರ ಶಾಸಕ ಹರೀಶ್ ಅವರ ಮೇಲೆ ಅಟ್ರಾಸಿಟಿ ಕೇಸ್ ದಾಖಲು ಮಾಡಿರುವುದು ಹಲವು ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಪ್ರಭಾವಿಗಳ ಕುಮ್ಮಕ್ಕಿನಿಂದ ಆಗಿದೆ. ನಿಜವಾಗಿಯೂ ಜಾತಿ ನಿಂದನೆ ಆಗಿದ್ದರೆ ತನಿಖೆ ನಡೆಸಲಿ ಅದು ಬಿಟ್ಟು ಜಿಲ್ಲಾಧಿಕಾರಿ ಹಾಗೂ ಪೋಲಿಸ್ ಇಲಾಖೆಯ ಅಧಿಕಾರಿಗಳು ಪಕ್ಷಪಾತಿಯಾಗಿ ಕಾರ್ಯ ನಿರ್ವಹಿಸಬಾರದು ಎಂದರು.
ಸ್ವಪಕ್ಷೀಯರೇ ಹರೀಶ್ ಅವರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯುತ್ತಿರುವ ಬಿಜೆಪಿ ಪಕ್ಷದವರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಿಸುವ ಕೆಲಸವನ್ನು ಜಿಲ್ಲಾ ಮಂತ್ರಿಗಳು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇವರ ವಿರುದ್ಧ ಬಿಜೆಪಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ನಗರಸಭೆ ಮಾಜಿ ಸದಸ್ಯ ಆಟೋ ಹನುಮಂತಪ್ಪ, ನಗರ ಘಟಕ ಅಧ್ಯಕ್ಷ ಅಜೀತ್ ಸಾವಂತ್, ಪ್ರಧಾನ ಕಾರ್ಯದರ್ಶಿಗಳಾದ ತುಳಜಪ್ಪ ಭೂತೆ, ಮಂಜನಾಯ್ಕ್ ಹೆಚ್, ವೀರೇಶ್ ಆದಾಪುರ, ನಗರಸಭಾ ಸದಸ್ಯರಾದ ಮಾಜಿ ಸದಸ್ಯರಾದ ಅಶ್ವಿನಿ ಕೃಷ್ಣ, ಎಸ್ಸಿ ಮೋರ್ಚಾ ಅಧ್ಯಕ್ಷ ಸಂತೋಷ ಗುಡಿಮನಿ, ಕೆ.ಎನ್.ಹಳ್ಳಿ ಮಹಾಂತೇಶ್ ಮತ್ತಿತರು ಇದ್ದರು.