ಧಾರವಾಡ:
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕರ್ನಾಟಕ ಸೇರಿ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಲೈಂಗಿಕ ಶೋಷಣೆ ಜೊತೆಗೆ ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಕಾರ್ಪೋರೇಟ್ ಜಿಹಾದ್ಗಳು ನಡೆಯುತ್ತಿವೆ ಎಂದು ಹುಬ್ಬಳ್ಳಿಯ ಜಿಮ್ ಪ್ರಕರಣವನ್ನು ಅವರು ಪ್ರಸ್ತಾಪಿಸಿದರು.
ಪ್ರಮುಖವಾಗಿ ರಾಜ್ಯದಲ್ಲಿ ಗೋವುಗಳ ರಕ್ಷಣೆಯಾಗುತ್ತಿಲ್ಲ. ಕೇರಳ, ತಮಿಳುನಾಡು ಕಡೆಗೆ ಗೋವು ಸಾಗಣೆಯಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕಾಗಿದೆ. ಇದಕ್ಕಾಗಿ ತಪಾಸಣಾ ಕೇಂದ್ರ ತೆರೆಯಬೇಕು ಎಂದ ಅವರು, ಶಾಲೆ-ಕಾಲೇಜುಗಳಲ್ಲಿ ಮಕ್ಕಳು, ಯುವಕರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಸಮಾಜದಲ್ಲಿ ನಡೆಯುತ್ತಿರುವ ಇಂತಹ ಅನೈತಿಕ ಚಟುವಟಿಕೆಗಳು ಸಮಾಜದ ಮೌಲ್ಯ ಕುಸಿತ ತೋರುತ್ತಿದೆ. ವಿವಿಧ ಸಮುದಾಯಗಳ ಮಧ್ಯೆ ಅಸಮತೋಲನ ಉಂಟು ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಲುವು ಹಾಗೂ ನಿಯಮಗಳನ್ನು ಜಾರಿಗೆ ತರಬೇಕು ಎಂದರು.ಲವ್ ಜಿಹಾದ್, ಅಕ್ರಮ ಗೋ ಮಾಂಸ ಸಾಗಾಣಿಕೆ ಸೇರಿದಂತೆ ಅನೈತಿಕ ಚಟುವಟಿಕೆ ತಡೆಯಲು ವಿಶ್ವ ಹಿಂದೂ ಪರಿಷದ್ ಸದಸ್ಯರು ಪಣತೊಟ್ಟಿದೆ. ದುಷ್ಟರ ವಿರುದ್ಧ ದೂರು ದಾಖಲಿಸಿ ಕ್ರಮಕೈಗೊಳ್ಳುವ ಬದಲು ಹಿಂದೂ ಸಂಘಟನೆಗಳ ಮುಖಂಡರ ಮೇಲೆ ದೂರು ದಾಖಲಿಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳುವುದಿಲ್ಲ ಎಂದರು.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ವಿಚಾರವಾಗಿ, ಬಂಗಾಳದಲ್ಲಿ ಈ ಹಿಂದೆ ನೂರಾರು ಹಿಂದೂಗಳ ಮಾರಣ ಹೋಮ, ಮಹಿಳೆಯರ ಮೇಲೆ ಅತ್ಯಾಚಾರಗಳಾಗಿವೆ. ನುಸುಳುಕೋರರನ್ನು ಗುರುತಿಸಿ ಹೊರ ಹಾಕಬೇಕಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಅಲ್ಲಿಯ ಜನರು ಬಿಜೆಪಿಗೆ ಅಧಿಕಾರ ನೀಡಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಡಾ. ಎಸ್.ಆರ್. ರಾಮನಗೌಡರ, ಗೋವರ್ಧನರಾವ್, ಮಹೇಶ ಪಾಟೀಲ, ಈರೇಶ ಅಂಚಟಗೇರಿ ಇದ್ದರು.11ಡಿಡಬ್ಲೂಡಿ9