ರಾಮನಗರದಲ್ಲಿ ಕಾಂಗ್ರೆಸ್ ಕಚೇರಿಗೆ ಬೀಗ

KannadaprabhaNewsNetwork |  
Published : Jun 05, 2024, 12:30 AM ISTUpdated : Jun 05, 2024, 01:12 PM IST
Congress flag

ಸಾರಾಂಶ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ರಾಮನಗರದ ಕಾಂಗ್ರೆಸ್ ಕಚೇರಿಗೆ ಬೀಗ ಜಡಿಯಲಾಗಿತ್ತು.

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ರಾಮನಗರದ ಕಾಂಗ್ರೆಸ್ ಕಚೇರಿಗೆ ಬೀಗ ಜಡಿಯಲಾಗಿತ್ತು. 

ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ .ಮಂಜುನಾಥ್ ಮುನ್ನಡೆ ಸಾಧಿಸಿದ ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ಸಿಗರಲ್ಲಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿಸಿತು. ಮಧ್ಯಾಹ್ನದ ವೇಳೆಗೆ ಮಂಜುನಾಥ್ ರವರ ಮತಗಳ ಅಂತರ ಒಂದೂವರೆ ಲಕ್ಷದ ಗಡಿ ದಾಟಿದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಬೇಸರಗೊಂಡರು. ಯಾರೂ ಮತ ಎಣಿಕೆ ಕೇಂದ್ರದತ್ತ ಆಗಮಿಸಲೇ ಇಲ್ಲ. 

ಚುನಾವಣೆ ಕಾರಣದಿಂದ ಸದಾ ಕಾರ್ಯಕರ್ತರಿಂದ ತುಂಬಿರುತ್ತಿದ್ದ ಕಾಂಗ್ರೆಸ್ ಕಚೇರಿಗೆ ಬೀಗ ಜಡಿಯಲಾಗಿತ್ತು. ಕಚೇರಿ ಬಳಿ ಯಾವೊಬ್ಬ ಮುಖಂಡರು ಇರಲಿಲ್ಲ. ಸುರೇಶ್ ಪರಾಭವಗೊಂಡಿದ್ದು ಕೈ ಪಡೆಯಲ್ಲಿ ನೋವಿನ ಛಾಯೆ ಆವರಿಸುವಂತೆ ಮಾಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿಲ್ಲಿಯಲ್ಲಿ ಡಿಕೆಶಿ ರಾಜ್ಯ ನೀರಾವರಿ ಸಭೆ
ಗ್ಯಾಸ್ ಇಲ್ಲದೇ ಬೆಳಗಾವಿಯ 60 + ಕೈಗಾರಿಕೆ ಬಂದ್‌ ಹಂತಕ್ಕೆ