ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಪ್ರಚಾರ ಆರಂಭ

KannadaprabhaNewsNetwork |  
Published : Feb 18, 2026, 01:15 AM IST
 | Kannada Prabha

ಸಾರಾಂಶ

ಆಗ್ನೇಯ ಪದವಿಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರು ತುಮಕೂರು ನಗರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದರು. ಪಕ್ಷದ ಮುಖಂಡರು, ಬೆಂಬಲಿಗರೊಂದಿಗೆ ನಗರದ ವಿವಿಧೆಡೆ ಪದವೀಧರ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಆಗ್ನೇಯ ಪದವಿಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರು ಮಂಗಳವಾರ ನಗರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದರು. ಪಕ್ಷದ ಮುಖಂಡರು, ಬೆಂಬಲಿಗರೊಂದಿಗೆ ನಗರದ ವಿವಿಧೆಡೆ ಪದವೀಧರ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.

ಇದಕ್ಕೂ ಮೊದಲು ಬೆಳಗ್ಗೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ತಮ್ಮ ಪತ್ನಿ ಅಮೂಲ್ಯ ಹಾಗೂ ಹಲವು ಕಾಂಗ್ರೆಸ್ ಮುಖಂಡರೊಂದಿಗೆ ಶಶಿ ಹುಲಿಕುಂಟೆಮಠ್ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮುಖಂಡರು ಪಕ್ಷದ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಘೋಷಿಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೇಮಠ್, ಅಭ್ಯರ್ಥಿಯಾದ ನಂತರ ಆಗ್ನೇಯ ಪದವಿಧರ ಕ್ಷೇತ್ರದಾದ್ಯಂತ ಸಾಕಷ್ಟು ಬಾರಿ ಪ್ರವಾಸ ಮಾಡಿ ಸಚಿವರು, ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರು ಹಾಗೂ ಪದವೀಧರ ಮತದಾರರನ್ನು ಭೇಟಿ ಮಾಡಿ ತಮಗೆ ಬೆಂಬಲ ಡುವಂತೆ ಕೋರಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಾರಿ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಉತ್ತಮ ಅವಕಾಶವಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ಶಶಿ ಹುಲಿಕುಂಟೆಮಠ್ ಅವರ ಗೆಲುವಿಗೆ ಪಕದ ಎಲ್ಲಾ ಮುಖಂಡರು ಒಟ್ಟಾಗಿ ಕೆಲಸ ಮಾಡುತ್ತೇವೆ. ಸರ್ಕಾರ ಕಾರ್ಯಕ್ರಮಗಳೂ ಇವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ತಿಳಿಸಿದರು.

ಮಾಜಿ ಶಾಸಕ ಡಾ.ಎಸ್.ರಫೀಕ್ ಅಹ್ಮದ್ ಅವರು ಶಶಿ ಹುಲಿಕುಂಟೇಮಠ್ ಅವರಿಗೆ ಶುಭ ಕೋರಿ ಗೆಲುವಿಗೆ ಎಲ್ಲಾ ರೀತಿಯ ಸಹಕಾರ ನಿಡುವುದಾಗಿ ಹೇಳಿದರು.

ಮುಖಂಡ ಇಕ್ಬಾಲ್ ಅಹ್ಮದ್ ಮಾತನಾಡಿ, ಆಗ್ನೇಯ ಪದವಿಧರರ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಆರಂಭಿಸಿರುವ ಶಶಿ ಹುಲಿಕುಂಟೆಮಠ್, ಮತದಾರರ ಒಲವು ಗಳಿಸುವಲ್ಲಿ ಯಶಸ್ವಿ ಹಾದಿಯಲ್ಲಿದ್ದಾರೆ. ಇವರ ಗೆಲುವಿಗೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳಿದರು.

ನಗರ ಪಾಲಿಕೆ ಮಾಜಿ ಸದಸ್ಯರಾದ ಟಿ.ಎಂ.ಮಹೇಶ್, ಸೈಯದ್ ನಯಾಜ್, ಎನ್.ಮಹೇಶ್, ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷ ಟಿ.ಎಚ್.ಅನಿಲ್‌ಕುಮಾರ್, ಮುಖಂಡರಾದ ಗುರುಪ್ರಸಾದ್, ನಟರಾಜಶೆಟ್ಟಿ, ಫಯಾಜ್ ಅಹ್ಮದ್, ಟಿ.ಆರ್.ಬಸವರಾಜು, ಶಿವಪ್ರಕಾಶ್, ಸಿ.ಎನ್.ಸುಗುಣಾದೇವಿ, ಕೆ.ಟಿ.ಮಂಜುನಾಥ್, ಪ್ರದೀಪ್‌ಕುಮಾರ್ ದಾಸೋಹ ಶಿವಣ್ಣ, ಅಂಬರೀಶ್, ಹೆಬ್ಬೂರು ಶ್ರೀನಿವಾಸಮೂರ್ತಿ, ಸುಜಾತ, ಜಯಶಂಕರ್, ಸಂತೋಷ್‌ಕುಮಾರ್, ಅನಿಲ್‌ಕುಮಾರ್, ಚರಣ್‌ರಾಜ್, ಮೋಹನ್ ಮೊದಲಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯದಲ್ಲಿ ಅಂಬೆಗಾಲಿಡುತ್ತಿರುವೆ: ಬಿ.ವೈ.ವಿಜಯೇಂದ್ರ
ಸುಬ್ಬಾರೆಡ್ಡಿ ಅನರ್ಹ: ಮರು ಚುನಾವಣೆಗೆ ಸಿಪಿಐಎಂ ಒತ್ತಾಯ