ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಜನರೇ ತೀರ್ಮಾನ ಮಾಡಿದ್ದಾರೆ. ಇಂತಹ ಅವಕಾಶವನ್ನು ಜನರು ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಕಾಂಗ್ರೆಸ್ ಗೆದ್ದರೆ ಮತ್ತೆ ಇವರ ನಾಟಕ ಎರಡು ವರ್ಷ ಮುಂದುವರಿಯುತ್ತದೆ. ಡಿನ್ನರ್ ಮತ್ತು ಲಂಚ್ ನಲ್ಲೇ ಸರ್ಕಾರ ಕಳೆಯುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ದಿನದಿಂದ ಪ್ರಚಾರ ಮಾಡುತ್ತಿದ್ದಾರೆ. ಅಭಿವೃದ್ಧಿ, ಗ್ಯಾರಂಟಿ ನೋಡಿ ಮತ ಹಾಕಿ ಅಂತಾರೆ. ಏನೂ ಅಭಿವೃದ್ಧಿಯೇ ಮಾಡಿಲ್ಲ ಹೇಗೆ ಮತ ಹಾಕೋದು, ಎಲ್ಲದರ ದರ ಏರಿಕೆ ಮಾಡಿ ಬಡವರು ಬದುಕಲು ಆಗದಂತೆ ಮಾಡಿದ್ದಾರೆ. ಗ್ಯಾರಂಟಿಗಳನ್ನು ಸರಿಯಾಗಿ ಕೊಟ್ಟಿಲ್ಲ. ಹಾಗಾಗಿ ಗ್ಯಾರಂಟಿ ನೋಡಿಯೂ ಮತ ಹಾಕಲ್ಲ. ಇದೆಲ್ಲ ಆದ ನಂತರ ಜಾತಿ ನೋಡಿ ಮತ ಕೊಡಿ ಅಂತ ಹೊಸ ರಾಗ ತೆಗೆದಿದ್ದಾರೆ ಎಂದು ವ್ಯಂಗ್ಯವಾಡಿದರು.ಈ ಸರ್ಕಾರ ಹೊಸ ಬಸ್ ಖರೀದಿ ಮಾಡಿಲ್ಲ. ಬಸ್ ಪಂಕ್ಚರ್ ಆದರೆ ಜಾಕ್ ಖರೀದಿ ಮಾಡಲು ಹಣವಿಲ್ಲ. ಹೊಸ ಬಸ್ ಇಲ್ಲದೆ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದೆ. ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ತುಟ್ಟಿ ಆಗಿದೆ. ಗ್ಯಾರಂಟಿ ಹೇಳಿಕೊಂಡೇ ಮೂರು ವರ್ಷ ಕಳೆದರು. ಗೃಹಲಕ್ಷ್ಮಿ ಎಂದು ಹೆಣ್ಣು ಮಕ್ಕಳಿಗೆ ₹2000 ಕೊಟ್ಟು ಪತಿಯ ಜೇಬಿಗೆ ಕತ್ತರಿ ಹಾಕುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ ಎಂದು ದೂರಿದರು.
ಬಿಜೆಪಿ ಜಾತಿವಾದಿಗಳ ಪಕ್ಷ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಇವರು ಜಾತಿಗಳನ್ನು ರಾಜಕೀಯಕ್ಕೆ ಬಳಸುತ್ತಾರೆ. ಮುಡಾ ಕೇಸ್ ಬಂದಾಗ ಹಿಂದುಳಿದ ಜಾತಿಯವರು ಅಂದರು. ಅದರಲ್ಲಿ ನೂರಾರು ಕೋಟಿ ಭ್ರಷ್ಪಾಚಾರ ಆಗಿದೆ. ಇಂತಹ ನಾಟಕ ನಿಲ್ಲಿಸಿ ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಅವರು ದಲಿತರ ವಿರೋಧಿ. ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಆಯಿತು. ಎಎಸ್ಸಿಪಿ/ಟಿಎಸ್ಪಿ ಹಣವನ್ನೂ ಗ್ಯಾರಂಟಿಗಳಿಗೆ ಬಳಸಿದ್ದೀರಿ. ದಲಿತರ ಉದ್ಧಾರಕ್ಕೆ ಇರುವ ನಿಗಮದ ಹಣ ಬಳಸಿ ಲೋಕಸಭೆ ಚುನಾವಣೆ ಮಾಡಿದ್ದೀರಿ. ಒಳಮೀಸಲಾತಿಗೆ ಮೂರು ದಶಕದಿಂದ ಹೋರಾಟ ನಡೆಯುತ್ತಿದೆ. ಆದರೆ ಅದನ್ನು ಸರಿಯಾಗಿ ಜಾರಿ ಮಾಡಲಿಲ್ಲ.