ಹಗರಿಬೊಮ್ಮನಹಳ್ಳಿ: ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜನರ ಆಶೋತ್ತರಗಳನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ದೇಶದಲ್ಲಿ ಕೂಡ ಕಾಂಗ್ರೆಸ್ ದಿನೇದಿನೇ ಸದೃಢವಾಗುತ್ತಿದೆ. ರಾಹುಲ್ ಗಾಂಧಿ ಪ್ರಧಾನಿಯಾಗುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರ ಶಕ್ತಿ ಪೂರಕವಾಗಲಿದೆ ಎಂದು ಎಐಸಿಸಿ ವೀಕ್ಷಕ ವೇಣುಗೋಪಾಲ ರಾವ್ ಅಭಿಪ್ರಾಯಪಟ್ಟರು.ಪಟ್ಟಣದ ಕನ್ಯಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಗುರುವಾರ ಸಂಜೆ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಸಂಘಟನ ಸೃಜನ್ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎರಡು ಬಾರಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಅಹರ್ನಿಶಿ ದುಡಿದ ತಮ್ಮನ್ನು ೨೦೨೩ರಲ್ಲಿ ಸೋಲಿಸಲಾಯಿತು. ತಮ್ಮ ಸೋಲಿಗೆ ಪಕ್ಷದೊಳಗಿರುವ ಹಿತಶತ್ರುಗಳೇ ಕಾರಣ. ಈ ಭೀಮಾನಾಯ್ಕ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮವರೇ ನಮ್ಮ ಬೆನ್ನಿಗಿರಿದರು ಎಂದು ಕಾರ್ಯಕರ್ತರೇ ಕಿಕ್ಕಿರಿದು ತುಂಬಿದ್ದ ಸಭೆಯಲ್ಲಿ ಗುಡುಗಿದರು.
ಪಕ್ಷದಲ್ಲಿದ್ದುಕೊಂಡು ಪಕ್ಷ ದ್ರೋಹ ಮಾಡುವವರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ. ಈ ಕುರಿತು ಎಐಸಿಸಿ ವೀಕ್ಷಕರೊಂದಿಗೆ ಪಕ್ಷದ ಕಾರ್ಯಕರ್ತರು ಮುಕ್ತವಾಗಿ ಚರ್ಚಿಸಬೇಕು. ಪಕ್ಷ ದ್ರೋಹಿಗಳು ಡಿಸಿಸಿಯಂತಹ ಆಯಕಟ್ಟಿನ ಸ್ಥಳಗಳಲ್ಲಿರಬಾರದು. ಪಕ್ಷ ನಿಷ್ಠರಿಗೆ ಅವಕಾಶ ನೀಡಬೇಕು ಎಂದು ಕೋರಿದಾಗ ವೀಕ್ಷಕ ವೇಣುಗೋಪಾಲ ರಾವ್ ಸಮ್ಮತಿಸಿದರು.ಪಕ್ಷದ ಮುಖಂಡರಾದ ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಥೋಡ್, ಆರತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ ಗೋಣಿಬಸಪ್ಪ ಕೆ.ಎಂ.ದ್ವಾರಕೇಶ ಹಾಗೂ ನಂದಿಬಂಡಿ ಸೋಮಣ್ಣ ಇದ್ದರು.