ರಾಹುಲ್ ಗಾಂಧಿ ಮೇಲಿನ ದಾಳಿಗೆ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Jan 24, 2024, 02:03 AM IST
ಚಿತ್ರದುರ್ಗ ಲೀಡ್ ಮಾಡಿಕೊಳ್ಳಬಹುದು. | Kannada Prabha

ಸಾರಾಂಶ

ಮಣಿಪುರದಿಂದ ಆರಂಭಗೊಂಡಿರುವ ರಾಹುಲ್‍ ಗಾಂಧಿ ಅವರ ನ್ಯಾಯ ಯಾತ್ರೆ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಚಿತ್ರದುರ್ಗ: ಮಣಿಪುರದಿಂದ ಆರಂಭಗೊಂಡಿರುವ ರಾಹುಲ್‍ ಗಾಂಧಿ ಅವರ ನ್ಯಾಯ ಯಾತ್ರೆ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಎಚ್.ಆಂಜನೇಯ ಮಾತನಾಡಿ, ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 10 ವರ್ಷಗಳಾದರೂ ಒಂದು ದಿನವೂ ವಿರೋಧ ಪಕ್ಷದವರನ್ನು ಕರೆದು ಮಾತನಾಡುವ ಪ್ರಯತ್ನ ಮಾಡಿಲ್ಲ. ಕಾಂಗ್ರೆಸ್ ನಾಯಕ ರಾಹುಲ್‍ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಜನ ಸಾಮಾನ್ಯರ ಸಮಸ್ಯೆ ಆಲಿಸಿದ್ದನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಅಸ್ಸಾಂನಲ್ಲಿ ರಾಹುಲ್‍ ಗಾಂಧಿ ಅವರ ಕಾರು ಹಾಗೂ ಬಸ್‍ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರಜಾಪ್ರಭುತ್ವವನ್ನು ಗೌರವಿಸುವವರೆಲ್ಲಾ ರಾಹುಲ್ ನ್ಯಾಯ ಯಾತ್ರೆಗೆ ಬೆಂಬಲಿಸುತ್ತಿದ್ದಾರೆಂದು ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ, ಅಸ್ಸಾಂನಲ್ಲಿ ರಾಹುಲ್‍ ಕಾರು ಹಾಗೂ ಬಸ್ಸಿನ ಮೇಲೆ ಬಿಜೆಪಿಯ ಗೂಂಡಾಗಳು ಕಲ್ಲು ತೂರಿರುವುದು ಭಾರತವೇ ನಾಚಿ ತಲೆ ತಗ್ಗಿಸುವಂತ ಕೃತ್ಯ. ಅಂಬೇಡ್ಕರ್, ಜವಾಹರಲಾಲ್ ನೆಹರು ಇವರುಗಳದ್ದೆಲ್ಲಾ ಶಾಂತಿಯುತವಾದ ಹೋರಾಟ. ಬಿಜೆಪಿಯವರ ಗೂಂಡಾ ವರ್ತನೆಯನ್ನು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಪ್ರತಿಯೊಬ್ಬರೂ ಖಂಡಿಸಲೇಬೇಕು. ಆರ್.ಎಸ್ಎಸ್. ಕೃಪಾ ಪೋಷಿತ ಬಿಜೆಪಿಯ ಅಕ್ರಮವನ್ನು ಜನರಿಗೆ ತಿಳಿಸುವ ಕೆಲಸ ರಾಹುಲ್‍ಗಾಂಧಿ ಮಾಡುತ್ತಿರುವುದರಿಂದ ಯಾತ್ರೆಯನ್ನು ಮೊಟಕುಗೊಳಿಸುವ ಕುತಂತ್ರ ನಡೆಸುತ್ತಿದ್ದಾರೆ. ಬಹಿರಂಗ ಚರ್ಚೆ ಮಾಡುವ ಧೈರ್ಯವಿಲ್ಲದೆ ಇಂತಹ ಕ್ಷುಲ್ಲಕ ಕೆಲಸಕ್ಕೆ ಕೈಹಾಕಿರುವುದು ಬಿಜೆಪಿಗರ ಹಿಟ್ಲರ್ ಆಡಳಿತವನ್ನು ತೋರಿಸುತ್ತದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ ರಾಹುಲ್‍ರವರ ಭಾರತ್ ಜೋಡೋ ಯಾತ್ರೆಯನ್ನು ಸಹಿಸದ ಕೋಮುವಾದಿಗಳು ಇಂತಹ ಹೀನ ಕೃತ್ಯಕ್ಕೆ ಕೈಹಾಕುತ್ತಿರುವುದನ್ನು ದೇಶದ ಜನ ಗಮನಿಸುತ್ತಿದ್ದಾರೆ. ಎಲ್ಲಾ ಜಾತಿ ಧರ್ಮದವರನ್ನು ಪ್ರೀತಿಸುವ ನಾವುಗಳು ನಿಜವಾದ ಹಿಂದುಗಳು. ಬಿಜೆಪಿ ಯವರು ಡೋಂಗಿ ಹಿಂದುಗಳು ಎಂದು ವ್ಯಂಗ್ಯವಾಡಿದರು.

ಕೆಡಿಪಿ ಸದಸ್ಯ ರಾಜಣ್ಣ ಮಾತನಾಡಿ ರಾಹುಲ್‍ಗಾಂಧಿ ನ್ಯಾಯಯಾತ್ರೆ ಮೇಲೆ ನಡೆದ ಬಿಜೆಪಿ ದಾಳಿ ಅತ್ಯಂತ ಖಂಡನೀಯ. ಕಾಂಗ್ರೆಸ್ ಪಕ್ಷದ ಪ್ರತಿ ಹೋರಾಟವನ್ನು ಬಿಜೆಪಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಯೋಜನೆಗಳನ್ನು ಬಿಜೆಪಿ ನಮ್ಮದೆಂದು ಹೇಳಿಕೊಳ್ಳುತ್ತ ದೇಶದ ಜನರನ್ನು ದಿಕ್ಕುತಪ್ಪಿಸುತ್ತಿರುವುದರ ವಿರುದ್ದ ಯುವ ಜನಾಂಗ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರ್ಲಗುಂಟೆ ರಾಮಪ್ಪ ಮಾತನಾಡಿ ರಾಹುಲ್‍ಗಾಂಧಿ ಯಾತ್ರೆ ಕಂಡು ಬಿಜೆಪಿಗೆ ನಡುಕ ಉಂಟಾಗಿದೆ. ದೇಶದ ಪ್ರಧಾನಿ ಮೋದಿ ತಿರುಗಾಡಿದ ಕಡೆಗೆಲ್ಲಾ ಬಿಜೆಪಿ ಸೋತಿದೆ. ರಾಹುಲ್ ಸಂಚರಿಸಿದ ಕ್ಷೇತ್ರದಲ್ಲೆಲ್ಲಾ ಕಾಂಗ್ರೆಸ್ ಗೆದ್ದಿದೆ. ಅದಕ್ಕಾಗಿಯೇ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ 135 ಸೀಟುಗಳು ಲಭಿಸಲು ಕಾರಣವಾಯಿತು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷರುಗಳಾದ ನಜ್ಮತಾಜ್, ಜಿ.ಎಸ್.ಕುಮಾರ್‍ಗೌಡ, ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ ಕುಮಾರ್, ಡಿ.ಎನ್.ಮೈಲಾರಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೇಣುಕ ಶಿವು, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಎಚ್.ಅಂಜಿನಪ್ಪ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಸ್ವಾಮಿ, ಸೈಯದ್ ಖುದ್ದೂಸ್, ಹನೀಸ್, ಪವಿತ್ರ, ತುಳಸಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏನಾಗಬೇಕೋ ಸೂಕ್ತ ಟೈಮಲ್ಲಿ ಆಗುತ್ತೆ : ಡಿಕೆ ಶಿವಕುಮಾರ್‌
ಎಐ ಶೃಂಗಸಭೆ ಕಾಂಗ್ರೆಸ್‌ ಅಡ್ಡಿಗೆ ಬಿಜೆಪಿ ಆಕ್ರೋಶ