ಕೈಯಲ್ಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Apr 22, 2024, 02:24 AM IST
ಚೊಂಬು21 | Kannada Prabha

ಸಾರಾಂಶ

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ನೀಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಕೂಡ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನೀಡದೆ ಸುಳ್ಳು ಹೇಳುತ್ತಿದೆ. ಈ ಬಾರಿ ಮತ್ತೆ ದೇಶದ ಮತದಾರರು ಬಿಜೆಪಿಯನ್ನು ಬೆಂಬಲಿಸಿದರೆ ಮುಂದೆ ಪ್ರತಿಯೊಬ್ಬರಿಗೂ ಚೊಂಬೇ ಗತಿಯಾಗಲಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಚೊಂಬು ಹಿಡಿದುಕೊಂಡು ಪ್ರತಿಭಟನೆ ಮಾಡುವುದರ ಮೂಲಕ ಭಾನುವಾರ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕೈಗೊಳ್ಳಲಾಯಿತು.

ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಇದ್ದರೂ ಕೂಡ ಬಿಜೆಪಿಯ ಸಂಸದರ ಕೇಂದ್ರದ ಮುಂದೆ ಬಾಯಿ ಬಿಚ್ಚುತ್ತಿಲ್ಲ. ದೇಶದಲ್ಲಿಯೇ ಅತೀ ಹೆಚ್ಚು ತೆರಿಗೆ ಸಂಗ್ರಹ ಮಾಡುವ ರಾಜ್ಯ ಕರ್ನಾಟಕ ಆಗಿದ್ದು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ನೀಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಕೂಡ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನೀಡದೆ ಸುಳ್ಳು ಹೇಳುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ನೀಡಿದ ಯಾವುದೇ ಭರವಸೆಗಳು ಈ ವರೆಗೆ ಈಡೇರಿಲ್ಲ. ಈ ಬಾರಿ ಮತ್ತೆ ದೇಶದ ಮತದಾರರು ಬಿಜೆಪಿಯನ್ನು ಬೆಂಬಲಿಸಿದರೆ ಮುಂದೆ ಪ್ರತಿಯೊಬ್ಬರಿಗೂ ಚೊಂಬೇ ಗತಿಯಾಗಲಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಈ ಸಂದರ್ಭದಲ್ಲಿ ಹೇಳಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ನಾಯಕರಾದ ನಾಗೇಶ್ ಉದ್ಯಾವರ, ಮಹಾಬಲ ಕುಂದರ್, ಆನಂದ ಪೂಜಾರಿ, ಸತೀಶ್ ಮಂಚಿ, ಸದಾಶಿವ ಪೂಜಾರಿ ಕಟ್ಟೆಗುಡ್ಡೆ ಸಂಧ್ಯಾ ತಿಲಕರಾಜ್, ಅರ್ಚನಾ, ನರಸಿಂಹ ಮೂರ್ತಿ, ರಾಜೇಶ್ ನಾಯಕ್, ಶರತ್ ಶೆಟ್ಟಿ, ಸತೀಶ್ ಪುತ್ರನ್, ಭರತ್, ಪ್ರಮೀಳಾ ಸುವರ್ಣ ಹಾಗೂ ಇತರರು ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ತೆರಿಗೆ ಪಾಲನ್ನು ನೀಡದೆ ಜನರಲ್ಲಿ ಸುಳ್ಳನ್ನು ಹೇಳುತ್ತಿರುವ ಬಿಜೆಪಿಯ ಜನವಿರೋಧಿ ವರ್ತನೆಯನ್ನು ಖಂಡಿಸುವ ಸಲುವಾಗಿ ಇಡೀ ಬ್ಲಾಕ್ ವ್ಯಾಪ್ತಿಯಲ್ಲಿ ವಿಭಿನ್ನವಾದ ಈ ಅಭಿಯಾನವನ್ನು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದರು. ಉಡುಪಿ ಬ್ಲಾಕ್‌ನ 133 ಬೂತ್‌ಗಳಲ್ಲಿ ಕೂಡ ಪ್ರಚಾರಕ್ಕೆ ಹೋಗುವ ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದುಕೊಂಡು ಹೋಗಿ ಮತಪ್ರಚಾರ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ