ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಬಂದೀಗೌಡ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಚ್.ಬಿ.ಶುಭದಾಯಿನಿ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತೆಯರು ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಂತರ ಮಾತನಾಡಿದ ಅಧ್ಯಕ್ಷೆ ಎಚ್.ಬಿ.ಶುಭದಾಯಿನಿ ಅವರು, ಅತ್ಯಾಚಾರಿಗಳನ್ನು ಬೆಂಬಲಿಸುವ ಹೇಳಿಕೆ ನೀಡಿರುವ ಪ್ರಹ್ಲಾದ್ ಜೋಶಿ ಅವರನ್ನು ಕೇಂದ್ರ ಶಿಕ್ಷಣ ಸಚಿವರನ್ನಾಗಿ ನೇಮಿಸಿರುವುದು ಖಂಡನೀಯ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ಮಾಡಿದ ಯುವಜನತೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಂಗನಾರವರಿಗೆ ಸಂಸದೆ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ಶಿಕ್ಷೆ ವಿನಾಯಿತಿ ನೀಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಹ್ಲಾದ್ ಜೋಶಿ ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದನ್ನು ಖಂಡಿಸಿದರು.