ಬಿಜೆಪಿ ಶಾಸಕರ ಆರೋಪ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork | Published : Jun 25, 2025 12:33 AM

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಮುನಿಯಲು ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾನೇ ಕೈಗೊಂಡ ನಿರ್ಧಾರಗಳನ್ನು ಮರೆಮಾಚಿ ಸುಳ್ಳು ಆರೋಪಗಳನ್ನು ಹೊರಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಕಾರ್ಕಳಬಿಜೆಪಿ ಶಾಸಕರ ಸುಳ್ಳು ಆರೋಪಗಳ ವಿರುದ್ಧ ಕಾರ್ಕಳ ಬಸ್ ನಿಲ್ದಾಣದಲ್ಲಿ ಸೋಮವಾರ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಮುನಿಯಲು ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾನೇ ಕೈಗೊಂಡ ನಿರ್ಧಾರಗಳನ್ನು ಮರೆಮಾಚಿ ಸುಳ್ಳು ಆರೋಪಗಳನ್ನು ಹೊರಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಮುಖಂಡನನ್ನು ರಕ್ಷಿಸಲು ಶಾಸಕರು ತಮ್ಮ ಅಧಿಕಾರ ದುರುಪಯೋಗ ಪಡಿಸುತ್ತಿದ್ದಾರೆ. ಕಾರ್ಕಳದ ಜನರಿಗೆ ಅನ್ಯಾಯವಾಗುತ್ತಿರುವ ವಿಷಯಗಳಲ್ಲಿ ಧ್ವನಿ ಎತ್ತುವ ಬದಲು, ಅವರು ಜನರ ಗಮನ ಬೇರೆಡೆ ಸೆಳೆಯಲು ನಾಟಕವಾಡುತ್ತಿದ್ದಾರೆ ಎಂದರು.ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ಅಕ್ರಮ ಸಕ್ರಮ ಯೋಜನೆ ತಿರಸ್ಕಾರ, ಆಶ್ರಯ ಯೋಜನೆ ಸ್ಥಗಿತ, ಪಿಂಚಣಿ ಯೋಜನೆ ರದ್ದು ಮಾಡಿರುವುದು ಬಿಜೆಪಿ ಸರ್ಕಾರ ಎಂದು ವ್ಯಂಗ್ಯವಾಡಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಕಾಬೆಟ್ಟು, ಪುರಸಭಾ ಸದಸ್ಯ ಉದ್ಯಮಿ ವಿವೇಕಾನಂದ ಶೆಣೈ, ಜಿಲ್ಲಾ ವಕ್ತಾರ ಬಿಪಿನ್ ನಕ್ರೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್, ತಾಲೂಕು ಸೇವಾದಳ ಅಧ್ಯಕ್ಷ ಅಬ್ದುಲ್ಲ ಪುಲ್ಕೆರಿ, ಹಿರಿಯ ಮುಖಂಡ ಸುಂದರ ಸಮಗಾರ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಸುಧಾಕರ್ ಶೆಟ್ಟಿ, ಕಾರ್ಯದರ್ಶಿ ಎಂ.ಪಿ. ಮೊಯ್ದೀನ್‌ ಅಬ್ಬಾ, ಉಪಾಧ್ಯಕ್ಷ ಸುಧಾಕರ್ ಕೋಟ್ಯಾನ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಉದಯ್ ಶೆಟ್ಟಿ ಕುಕ್ಕುಂದೂರ್, ಉಪಾಧ್ಯಕ್ಷ ಜಾರ್ಜ್ ಕಾಸ್ಟಲಿನೋ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಬೂತ್ ಮಟ್ಟದ ಅಧ್ಯಕ್ಷರು, ಗ್ರಾಮ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕದ ಮುಖಂಡರು, ಮಾಜಿ ಪುರಸಭಾ ಸದಸ್ಯರು ಹಾಗೂ ಜನಪ್ರತಿನಿಧಿಗಳು ಪಾಲ್ಗೊಂಡರು.