ಇಡಿ ದಾಳಿ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Sep 10, 2026, 01:45 AM IST
ಸಚಿವ ಸತೀಶ ಜಾರಕಿಹೊಳಿ, ಅವರ ಆಪ್ತರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ನಡೆಸಿದ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಹಿಂದುಳಿದ ಸಮುದಾಯದ ಪ್ರಬಲ ನಾಯಕ ಹಾಗೂ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಸತೀಶ ಜಾರಕಿಹೊಳಿ ಅವರ ರಾಜಕೀಯ ಏಳ್ಗೆಯನ್ನು ಸಹಿಸದ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕರು ಇಡಿ ಮೂಲಕ ದಾಳಿ ನಡೆಸಿ ಭಯದ ವಾತಾವರಣ ಸೃಷ್ಟಿಸುವ ಹಾಗೂ ಅವರ ವರ್ಚಸ್ಸು ಕುಗ್ಗಿಸುವ ಪ್ರಯತ್ನ ನಡೆಸಿದ್ದಾರೆ.

ಹುಬ್ಬಳ್ಳಿ:

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಅವರ ಸಂಬಂಧಿಕರು ಹಾಗೂ ಆಪ್ತರ ಮನೆ, ಕಚೇರಿ ಮತ್ತು ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನಡೆಸಿದ ದಾಳಿ ಖಂಡಿಸಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವರ ಅಭಿಮಾನಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ರೈಲ್ವೆ ನಿಲ್ದಾಣ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಜುಟ್ಟಲ್, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ರಾಜಕೀಯ ದ್ವೇಷ ಸಾಧಿಸುತ್ತಿದೆ ಎಂದು ಆರೋಪಿಸಿದರು.

ಹಿಂದುಳಿದ ಸಮುದಾಯದ ಪ್ರಬಲ ನಾಯಕ ಹಾಗೂ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಸತೀಶ ಜಾರಕಿಹೊಳಿ ಅವರ ರಾಜಕೀಯ ಏಳ್ಗೆಯನ್ನು ಸಹಿಸದ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕರು ಇಡಿ ಮೂಲಕ ದಾಳಿ ನಡೆಸಿ ಭಯದ ವಾತಾವರಣ ಸೃಷ್ಟಿಸುವ ಹಾಗೂ ಅವರ ವರ್ಚಸ್ಸು ಕುಗ್ಗಿಸುವ ಪ್ರಯತ್ನ ನಡೆಸಿದ್ದಾರೆ ಎಂದು ದೂರಿದರು.

ರಾಜಕೀಯವಾಗಿ ಎದುರಿಸಲು ಸಾಧ್ಯವಾಗದವರು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸುತ್ತಿದ್ದಾರೆ. ಇಂತಹ ದ್ವೇಷದ ರಾಜಕಾರಣವನ್ನು ಕಾಂಗ್ರೆಸ್ ಕಾರ್ಯಕರ್ತರು ಸಹಿಸುವುದಿಲ್ಲ ಎಂದರು.

ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯ ಆರೀಫ್ ಭದ್ರಾಪುರ, ಮುಖಂಡರಾದ ಗಂಗಾಧರ ದೊಡವಾಡ, ಶಿವಾನಂದ ಮುತ್ತಣ್ಣವರ, ಸಿದ್ಧಾರ್ಥ ಡಂಬಳ, ಪ್ರಕಾಶ ಕುರಹಟ್ಟಿ, ಶಿವಾನಂದ ಬೆಂತೂರ, ಇಮ್ತಿಯಾಜ್ ಕುಮಾಟಕರ, ಸುಭಾಷ್ ಗೌಡಪ್ಪನವರ, ರಾಜು ದೊಡಶಂಕರ, ಶಂಭಯ್ಯ ನೀರಲಗಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುಮತಿ ಇಲ್ಲದೆ ನಡೆಸಿದ್ದ ಜಾನಪದ ವಿವಿ 8 ಪಿಜಿ ಕೋರ್ಸ್ ರದ್ದು!
ಕಬ್ಬಿಗೆ ಲಾಭದಾಯಕ ದರ ನಿಗದಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ: ರುದ್ರಪ್ಪ ಲಮಾಣಿ