ಭಾರತೀಯರ ಕೈಗೆ ಕೋಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Feb 24, 2025, 12:34 AM IST
೨೨ಕೆಎಂಎನ್‌ಡಿ-೪ಅಕ್ರಮ ವಲಸಿಗರೆಂದು ಬಿಂಬಿಸಿ ಭಾರತೀಯರ ಕೈಗೆ ಕೋಳ ತೊಡಿಸಿ ಕಳುಹಿಸುತ್ತಿರುವ ಅಮೆರಿಕಾ ದಬ್ಬಾಳಿಕೆ ನೀತಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಟನೆ ನಡೆಸಿದರು. | Kannada Prabha

ಸಾರಾಂಶ

ಅಮೆರಿಕಾದಲ್ಲಿರುವ ಭಾರತೀಯರನ್ನು ಅಕ್ರಮ ವಲಸಿಗರೆಂದು ಬಿಂಬಿಸಿ ಅವರಿಗೆ ಕೈ ಕೊಳ ಹಾಕಿ ಕರೆತರಲಾಗಿದೆ. ಗೌರವಯುತವಾಗಿ ಭಾರತಕ್ಕೆ ನಮ್ಮ ಸ್ವದೇಶಿ ವಿಮಾನದಲ್ಲಿಯೇ ಕರೆ ತರಬೇಕಿತ್ತು. ಅದನ್ನು ಮಾಡದೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಭಾರತೀಯ ಪ್ರಜೆಗಳನ್ನು ಅಕ್ರಮ ನಿರಾಶ್ರಿತರೆಂದು ಹೇಳಿ ಅವರ ಕೈಗಳಿಗೆ ಅಮೆರಿಕಾ ದೇಶವು ಕೋಳ ಹಾಕಿ ಕಳುಹಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸೇರಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ ಮಾತನಾಡಿ, ಅಮೆರಿಕಾದಲ್ಲಿರುವ ಭಾರತೀಯರನ್ನು ಅಕ್ರಮ ವಲಸಿಗರೆಂದು ಬಿಂಬಿಸಿ ಅವರಿಗೆ ಕೈ ಕೊಳ ಹಾಕಿ ಕರೆತರಲಾಗಿದೆ. ಗೌರವಯುತವಾಗಿ ಭಾರತಕ್ಕೆ ನಮ್ಮ ಸ್ವದೇಶಿ ವಿಮಾನದಲ್ಲಿಯೇ ಕರೆ ತರಬೇಕಿತ್ತು. ಅದನ್ನು ಮಾಡದೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಕಿಡಿಕಾರಿದರು.

ಅಮೆರಿಕಾದಲ್ಲಿ ವಾಸ ಮಾಡುತ್ತಿದ್ದ ಭಾರತೀಯರಿಗೆ ಕೋಳ ಹಾಕಿ ಕರೆತರುವ ಪ್ರಮೇಯವೇನಿದೆ. ನಮ್ಮ ದೇಶದ ಪ್ರಜೆಗಳನ್ನು ಗೌರವಯುತವಾಗಿ ನಡೆಸಿಕೊಳ್ಳುವುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮರೆತಿದ್ದಾರೆ, ಕೇಂದ್ರ ಸರ್ಕಾರವು ಅನಾಗರೀಕ ಸರ್ಕಾರವಾಗಿದೆ. ಈ ಎನ್‌ಡಿಎ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದವರಿಯುವುದನ್ನು ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮೆರಿಕಾದಲ್ಲಿ ಭಾರತೀಯರನ್ನು ಅಕ್ರಮ ನಿರಾತ್ರಿತರ ಹೆಸರಿನಲ್ಲಿ ಅಮಾನವೀಯವಾಗಿ ನಡೆಸಿಕೊಳ್ಳುವುದು ಸರಿಯಾದ ಕ್ರಮವಲ್ಲ, ಅವರೂ ಮನುಷ್ಯರು ಎಂಬ ಭಾವನೆ ಏಕೆ ಬರಲಿಲ್ಲ, ಬಿಜೆಪಿ ಸರ್ಕಾರವು ಕಣ್ಣಿಲ್ಲದಂತೆ ವರ್ತಿಸಿ ವಿದೇಶಿಯರು ನಮ್ಮ ಮೇಲೆ ದಬ್ಬಾಳಿಕೆ ನಡೆಸುವುದನ್ನು ಇನ್ನಾದರೂ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಶೈಲೇಂದ್ರ, ಸಿ.ಎಂ.ದ್ಯಾವಪ್ಪ, ಶ್ರೀಧರ್, ಸಾತನೂರು ಕೃಷ್ಣ, ರಮೇಶ್, ರಾಮಕೃಷ್ಣ, ಅಂಜನಾ ಶ್ರೀಕಾಂತ್, ವೀಣಾ, ಶಕುಂತಲಾ, ಗುರುರಾಜ್, ಜಯರಾಂ, ಕೊಮ್ಮೇರಹಳ್ಳಿ ಕೃಷ್ಣ, ನಾಗೇಶ್, ವಿಜಯಕುಮಾರ್ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ