ಜಿರಾಮ್‌ಜಿ ಯೋಜನೆ ವಿರೋಧಿ ಕಾಂಗ್ರೆಸ್‌ ಹೋರಾಟ: ಸಚಿವ ಜಮೀರ್‌ ಅಹಮದ್‌ ಖಾನ್‌

KannadaprabhaNewsNetwork |  
Published : Jan 15, 2026, 02:30 AM IST
14ಎಚ್‌ಪಿಟಿ2- ಹೊಸಪೇಟೆಯಲ್ಲಿ ಬುಧವಾರ ಮನರೇಗಾ ಹೆಸರು ಬದಲಾವಣೆ ವಿರೋಧಿಸಿ  ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಚಿವ ಜಮೀರ್‌ ಅಹಮದ್‌ ಖಾನ್‌, ಸಂಸದ ತುಕಾರಾಂ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೀರಾಜ್ ಶೇಕ್ ಮತ್ತಿತರರು ಭಾಗಿಯಾಗಿದ್ದರು. | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಬದಲಿಸಿದ್ದು, ಜಿರಾಮ್‌ಜಿ ಯೋಜನೆ ಜಾರಿ ಮಾಡುತ್ತಿದೆ.

ಹೊಸಪೇಟೆ: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಬದಲಿಸಿದ್ದು, ಜಿರಾಮ್‌ಜಿ ಯೋಜನೆ ಜಾರಿ ಮಾಡುತ್ತಿದೆ. ಇದನ್ನು ಕಾಂಗ್ರೆಸ್‌ ಪಕ್ಷ ಬಲವಾಗಿ ಖಂಡಿಸಲಿದ್ದು, ವಿಶೇಷ ಅಧಿವೇಶನ ಕರೆದು ಕೂಡ ಚರ್ಚಿಸಲಾಗುವುದು. ಜೊತೆಗೆ ಹೋರಾಟ ನಡೆಸಲಾಗುವುದು ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್‌ ಖಾನ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮನರೇಗಾ ಯೋಜನೆಯನ್ನು ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಗ್ರಾಮೀಣ ಪ್ರದೇಶಗಳ ಉದ್ಧಾರಕ್ಕಾಗಿ ಜಾರಿ ಮಾಡಿತ್ತು. ಈಗ ಹೆಸರು ಬದಲಾವಣೆ ಮಾಡಿದ್ದಾರೆ. ಮುಂದೆ, ₹500 ನೋಟಿನಲ್ಲೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರು ತೆಗೆಯಬಹುದು. ಮುಂದಿನ ದಿನಗಳಲ್ಲಿ ಕೇಂದ್ರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗುವ ಚಿಂತನೆ ಇದೆ ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿರಾಜ್‌ ಶೇಕ್‌ ಮಾತನಾಡಿ, ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬದಲಾವಣೆ ಮಾಡಿದಲ್ಲದೇ, ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಆರ್ಥಿಕ ಹೊರೆ ಹೊರೆಸುತ್ತಿದೆ ಎಂದರು.

ಶಾಸಕರಾದ ಎಂ.ಪಿ. ಲತಾ, ಜೆ.ಎನ್‌. ಗಣೇಶ, ಭರತ್‌ ರೆಡ್ಡಿ, ಹುಡಾ ಅಧ್ಯಕ್ಷ ಎಚ್‌ಎನ್‌ಎಫ್‌ ಇಮಾಮ್‌, ಮುಖಂಡರಾದ ಕೆ.ಎಂ. ಹಾಲಪ್ಪ, ವಿನಾಯಕ ಶೆಟ್ಟರ್‌ ಮತ್ತಿತರರಿದ್ದರು.

ಹೊಸಪೇಟೆಯಲ್ಲಿ ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ