- ನೂತನ ಸಚಿವರಾಗಿ ಆಯ್ಕೆ: ಮಾಯಕೊಂಡದಲ್ಲಿ ಅಭಿನಂದನಾ ಸಮಾರಂಭ । ಜಿಲ್ಲೆ ಅಭಿವೃದ್ಧಿಗೆ ಎಸ್ಸೆಸ್ಸೆಂ ಜತೆ ಕೈ ಜೋಡಿಸಿ ಶ್ರಮ
ಕನ್ನಡಪ್ರಭ ವಾರ್ತೆ ದಾವಣಗೆರೆ
2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಕೆ.ಎಸ್. ಬಸವಂತಪ್ಪ ವಿಶ್ವಾಸ ವ್ಯಕ್ತಪಡಿಸಿದರು.ತಾಲೂಕಿನ ಮಾಯಕೊಂಡ ಗ್ರಾಮದಲ್ಲಿ ಶನಿವಾರ ನೂತನ ಸಚಿವ ಕೆ.ಎಸ್. ಬಸವಂತಪ್ಪ ಅವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ನೇತೃತ್ವದ ಸರ್ಕಾರ ಜನಪರ ಯೋಜನೆಗಳು, ಪಂಚ ಗ್ಯಾರಂಟಿ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯಗಳು ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಜನಪರ ಕೆಲಸಗಳ ಮೂಲಕ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕ್ಷೇತ್ರದ ಅಭಿವೃದ್ಧಿ ಮತ್ತು ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ ಎಂದರು.
ಮಾನವ ಜನ್ಮ ಎತ್ತಿದ ಮೇಲೆ ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡುಗೆ ನೀಡಬೇಕು. ನಿಷ್ಠೆಯಿಂದ ಕೆಲಸ ಮಾಡುವ ಕಾರ್ಯಕರ್ತರ ಬೆನ್ನಿಗೆ ನಿಲ್ಲುವುದು ಕಾಂಗ್ರೆಸ್ ಪಕ್ಷದ ಶಕ್ತಿ. ಆರಂಭದ ದಿನಗಳಲ್ಲಿ ಎಚ್.ಆಂಜನೇಯ ಮಾರ್ಗದರ್ಶನದಲ್ಲಿ ಗೋಡೆಗಳಿಗೆ ಪೋಸ್ಟರ್ ಅಂಟಿಸುವ ಕೆಲಸ ಮಾಡುತ್ತಿದ್ದೆವು. ಎಷ್ಟು ಪೋಸ್ಟರ್ ಅಂಟಿಸಿದ್ದೇವೆ ಎಂದರೆ ಕೈಯಲ್ಲಿ ರೇಖೆಗಳೇ ಅಳಿಸಿಹೋಗಿದ್ದವು. ಒಮ್ಮೆ ಮಾಜಿ ಪ್ರಧಾನಿ ರಾಜೀವ್ ಗಾಂದಿ ದಾವಣಗೆರೆಗೆ ಆಗಮಿಸಿದ್ದಾಗ ಚೇರ್ ಹಾಕುವ ಕಾರ್ಯಕರ್ತರಾಗಿ ನಾವು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದೆವು. ಅಂತಹ ನಿಷ್ಠಾವಂತ ಕಾರ್ಯಕರ್ತರ ಶ್ರಮವನ್ನು ಗುರುತಿಸಿ ನ್ಯಾಯ ಕೊಡುವ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್ ಎಂದು ಹರ್ಷ ವ್ಯಕ್ತಪಡಿಸಿದರು.
ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಹಿತರಕ್ಷಣೆಗೆ ತಮ್ಮ ಮೊದಲ ಆದ್ಯತೆ. ಮಾಯಕೊಂಡ ಕ್ಷೇತ್ರದಲ್ಲಿ 22 ಕೆರೆ ತುಂಬಿಸುವ ಯೋಜನೆ ಕಾಮಗಾರಿ ಕಳಪೆಯಾಗಿ, ಅಭಿವೃದ್ಧಿ ಕುಂಠಿತಗೊಂಡಿರುವುದು ತೀವ್ರ ನೋವು ತಂದಿದೆ. ಈಗಾಗಲೇ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಶೀಘ್ರದಲ್ಲೇ ಮರುಟೆಂಡರ್ ಕರೆದು ಕಾಮಗಾರಿ ಪೂರ್ಣಗೊಳಿಸಿ ರೈತರ ಮುಖದಲ್ಲಿ ಮಂದಹಾಸ ಮೂಡಿಸಲಾಗುವುದು ಎಂದು ಭರವಸೆ ನೀಡಿದರು.
ಬರ ವೀಕ್ಷಣೆ-ವರದಿ ಸಲ್ಲಿಕೆ:
ಕಾಂಗ್ರೆಸ್ ಹಿರಿಯ ನಾಯಕರಿಗೆ ಧನ್ಯವಾದ:
ಸಮಾರಂಭದಲ್ಲಿ ಹೊನ್ನಾಳಿ ಶಾಸಕ ಡಿ. ಜಿ. ಶಾಂತನಗೌಡ, ಹರಿಹರ ಮಾಜಿ ಶಾಸಕ ಎಸ್.ರಾಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ.ಹನುಮಂತಪ್ಪ, ತಾಂಡ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜಯದೇವ ನಾಯ್ಕ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಕೆ.ಚಂದ್ರಪ್ಪ, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜಿ.ನಾಗರಾಜಪ್ಪ, ರಾಘವೇಂದ್ರ ನಾಯ್ಕ್, ಎಸ್.ವೆಂಕಟೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ತರುಣ್, ಲೋಕೇಶ್, ಗೋವಿಂದಸ್ವಾಮಿ, ನಾರಾಯಣ ನಾಯ್ಕ್, ಗಂಗಾ ನಾಯ್ಕ್, ಜಯನಾಯ್ಕ್, ಮಂಜಾನಾಯ್ಕ್, ಕೊಪ್ಪದ ಮಂಜುನಾಥ್ ಇನ್ನಿತರರಿದ್ದರು.
(ಟಾಪ್ ಕೋಟ್)
ನಾನು ಮಂತ್ರಿಯಾದರೂ ಎಂದಿಗೂ ನಿಮ್ಮ ಮನೆಯ ಮಗ ಬಸವಂತಪ್ಪನಾಗಿಯೇ ಇರುತ್ತೇನೆ. ನಿಮ್ಮ ಕಷ್ಟಗಳಿಗೆ ಸದಾ ಸ್ಪಂದಿಸಲು ನಾನು ಸಿದ್ಧ. ನೀವು ಕರೆದರೆ ಓಡೋಡಿ ಬಂದು ನಿಮ್ಮ ಸೇವೆ ಮಾಡಲು, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಯಾವಾಗಲೂ ಸಿದ್ಧನಿದ್ದೇನೆ.- ಕೆ.ಎಸ್.ಬಸವಂತಪ್ಪ, ಸಚಿವ.
- - --8ಕೆಡಿವಿಜಿ43: ದಾವಣಗೆರೆ ತಾ. ಮಾಯಕೊಂಡದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ನೂತನ ಸಚಿವ ಕೆ.ಎಸ್. ಬಸವಂತಪ್ಪ ಮಾತನಾಡಿದರು.