ವೀರಶೈವರಿಗೆ ಟಿಕೆಟ್ ಸಿಕ್ಕರೆ ಕಾಂಗ್ರೆಸ್ ಗೆಲುವು ನಿಶ್ಚಿತ: ಮಳಿಮಠ

KannadaprabhaNewsNetwork |  
Published : Oct 10, 2023, 01:00 AM IST
9ಕೆಪಿಎಲ್23 ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಬಸವರಾಜ ಮಳಿಮಠ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ವೀರಶೈವರಿಗೆ ಟಿಕೆಟ್ ನೀಡಿದರೆ ಖಂಡಿತ ಗೆಲವು ಸಾಧ್ಯ ಎಂದು ಗಂಗಾವತಿಯ ಬಸವರಾಜಸ್ವಾಮಿ ಮಳಿಮಠ ಹೇಳಿದರು.

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ವೀರಶೈವರಿಗೆ ಟಿಕೆಟ್ ನೀಡಿದರೆ ಖಂಡಿತ ಗೆಲವು ಸಾಧ್ಯ ಎಂದು ಗಂಗಾವತಿಯ ಬಸವರಾಜಸ್ವಾಮಿ ಮಳಿಮಠ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1952ರಿಂದ 2019ರವರೆಗೆ ಈ ಕ್ಷೇತ್ರದಲ್ಲಿ 4 ಸಲ ಎಚ್‌.ಜಿ. ರಾಮುಲು, ಒಮ್ಮೆ ಕೆ.ವಿರುಪಾಕ್ಷಪ್ಪ ಅವರನ್ನು ಹೊರತುಪಡಿಸಿ, ವೀರಶೈವ ಲಿಂಗಾಯತ ಅಭ್ಯರ್ಥಿಗಳೇ ಜಯ ಸಾಧಿಸಿದ್ದಾರೆ. ಹೀಗಾಗಿ, ಈ ಕುರಿತು ಸಮಗ್ರ ಅಂಕಿ-ಸಂಖ್ಯೆ ಹೈಕಮಾಂಡ್‌ಗೆ ನೀಡಲಾಗಿದ್ದು, ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸುವ ವಿಶ್ವಾಸವಿದೆ ಎಂದರು.

2019ರಲ್ಲಿ ನನಗೆ ಕೊನೆಯ ವೇಳೆಯಲ್ಲಿ ಟಿಕೆಟ್ ತಪ್ಪಿತು. ಆಗ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಈ ಹಿಂದೆ ಬಳ್ಳಾರಿ ರಾಯಚೂರು ಜಿಲ್ಲೆಗಳಲ್ಲಿ ಪಕ್ಷದ ಉಸ್ತವಾರಿಯಾಗಿ ಕೆಲಸ ಮಾಡಿದ್ದೇನೆ. ಹೀಗಾಗಿ, ಪಕ್ಷ ನನ್ನನ್ನು ಈ ಬಾರಿ ಪರಿಗಣಿಸಿ, ಟಿಕೆಟ್ ನೀಡುತ್ತದೆ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಕಿಸಾನ್ ಸೆಲ್ ರಮೇಶ ಕುಲಕರ್ಣಿ, ಕನಕಗಿರಿ ಕಾಂಗ್ರೆಸ್ ಮುಖಂಡ ಜಿ.ಗವಿಸಿದ್ದಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಹನಮಂತರಾವ್ , ರಾಮಪ್ಪ ನಿಲೋಗಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಕ್ಷರತೆ ಬಾಲ್ಯ ವಿವಾಹ ಕೇಸ್‌ ರದ್ದತಿಗೆ ಆಧಾರವಾಗದು: ಕೋರ್ಟ್‌
ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!