ಕಾಂಗ್ರೆಸ್ ಮಹಿಳಾ ಮೀಸಲಾತಿ ಪರ ಇರಲಿಲ್ಲ; ಹೇಮಲತಾ ನಾಯಕ್

KannadaprabhaNewsNetwork |  
Published : Apr 16, 2026, 02:00 AM IST
( ಈ ಸುದ್ದಿಗೆ ಹೇಮಲತಾ ನಾಯಕ್ ಅವರ ಫೋಟೋ ಬಳಸಿಕೊಳ್ಳುವುದು )  | Kannada Prabha

ಸಾರಾಂಶ

ಮಹಿಳೆಯರಿಗೆ ಶಾಸನಸಭೆಗಳಲ್ಲಿ ಮೀಸಲಾತಿ ನೀಡಬೇಕು ಎಂಬುದು ಬಹುವರ್ಷಗಳ ಬೇಡಿಕೆಯಾಗಿದೆ.

ಬಳ್ಳಾರಿ: ಮಹಿಳೆಯರಿಗೆ ಶಾಸನಸಭೆಗಳಲ್ಲಿ ಮೀಸಲಾತಿ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಆದರೆ ಇದನ್ನು ಈಡೇರಿಸಲು ಯಾರೊಬ್ಬರು ಮುಂದಾಗಿರಲಿಲ್ಲ. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಮಹಿಳೆಯರ ಪರವಾಗಿ ನಿಂತು ಮೀಸಲಾತಿ ಅನುಷ್ಠಾನಕ್ಕೆ ಮುಂದಡಿ ಇಟ್ಟಿದ್ದಾರೆ ಎಂದು ಕೊಪ್ಪಳದ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಶಾಸನಸಭೆಗಳಲ್ಲಿ ಮೀಸಲಾತಿ ನೀಡಬೇಕು ಎಂಬುದು ಬಹುವರ್ಷಗಳ ಬೇಡಿಕೆಯಾಗಿದೆ. ಕಳೆದ ಮೂರು ದಶಕಗಳಿಂದ ಹೋರಾಟ ನಡೆಯುತ್ತಿದೆ. ಆದರೆ ಇದನ್ನು ಈಡೇರಿಸಲು ಯಾರೊಬ್ಬರು ಮುಂದಾಗಿರಲಿಲ್ಲ. ಈ ದೇಶವನ್ನು ಅತಿ ಹೆಚ್ಚು ವರ್ಷಗಳ ಕಾಲ ಆಳ್ವಿಕೆ ಮಾಡಿದ ಕಾಂಗ್ರೆಸ್ ಸರ್ಕಾರ ಎಂದೂ ಸಹ ಮಹಿಳಾ ಮೀಸಲಾತಿ ಪರವಾಗಿ ಮಾತನಾಡಲಿಲ್ಲ. ರಾಜಕೀಯದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಪಡೆಯುವಂತಾಗಲಿ ಎಂಬ ಯಾವ ಆಶಯವೂ ಕಾಂಗ್ರೆಸ್ಸಿಗೆ ಇರಲಿಲ್ಲ. ಹೀಗಾಗಿಯೇ ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿ ಎಂಬುದು ಬರೀ ಭರವಸೆಯಾಗಿಯೇ ಉಳಿದಿತ್ತು. ಈಗ ಈಡೇರಿಸುವ ಕಾಲ ಬಂದಿದೆ. ನರೇಂದ್ರ ಮೋದಿ ಅವರು ದೇಶದ ಮಹಿಳೆಯರ ಪರವಾದ ನಿಲುವು ತೆಗೆದುಕೊಂಡಿದ್ದು ಮಹಿಳೆಯರು ರಾಜಕೀಯ ಮುನ್ನಲೆ ಸಾಧಿಸಲು ಮೀಸಲಾತಿ ನಿರ್ಧಾರ ಹೆಚ್ಚು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅನೇಕ ಮಹಿಳಾಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಪ್ರಮುಖವಾಗಿ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚು ಆದ್ಯತೆ ನೀಡಿ ಕೇಂದ್ರ ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಿದೆ. ಶಾಸನಸಭೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿರಬೇಕು ಎಂಬುದು ಪ್ರಧಾನಮಂತ್ರಿಗಳ ಅಭಿಲಾಷೆಯಾಗಿತ್ತು. ಹೀಗಾಗಿಯೇ ಮೀಸಲಾತಿ ಮಸೂದೆಯನ್ನು ಜಾರಿಗೆ ತರುತ್ತಿದ್ದಾರೆ ಎಂದರು.

ಮಹಿಳಾ ಮೀಸಲಾತಿ ವಿಚಾರವಾಗಿ 15 ವರ್ಷದ ಹಿಂದೆ ಸಂಸತ್ತಿನಲಿ ಚರ್ಚೆಗೆ ಬಂದಾಗ ಮಸೂದೆಯ ಕಾಗದಪತ್ರಗಳನ್ನು ಹರಿದು ಹಾಕಿದ ಘಟನೆ ನಡೆದಿತ್ತು. ಇಂದಿರಾ ಗಾಂಧಿ ಪ್ರಧಾನಿ ಆಗಿದ್ದ ಪಕ್ಷದಲ್ಲಿ ಸೋನಿಯಾ ಗಾಂಧಿ ಯುಪಿಎ ನಿಯಂತ್ರಿಸುತ್ತಿದ್ದಾಗ ಮಹಿಳಾ ಮೀಸಲಾತಿ ಕುರಿತು ಚರ್ಚೆ ನಡೆಯಿತು. ಆದರೆ, ಕಾಂಗ್ರೆಸ್‌ನವರು ಮಹಿಳಾ ಮೀಸಲಾತಿ ಪರವಾಗಿ ಇರಲಿಲ್ಲ. ಹೀಗಾಗಿಯೇ ಅನೇಕ ಬಾರಿ ವಿರೋಧ ವ್ಯಕ್ತಪಡಿಸಿದ್ದರು ಎಂದರು.

ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಪಕ್ಷಬೇಧ ಮರೆತು ಪಕ್ಷಾತೀತವಾಗಿ ಎಲ್ಲರೂ ಸಂಸತ್ತಿನ ಉಭಯ ಸದನಗಳಲ್ಲಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ಪಕ್ಷದ ಮಹಿಳಾ ಘಟಕದ ಪ್ರಮುಖರಾದ ಡಾ.ರೇಣುಕಾ, ವಿಜಯಲಕ್ಷ್ಮಿ, ಡಾ.ಅರುಣಾ ಕಾಮಿನೇನಿ, ಸಾಧನಾ ಹಿರೇಮಠ, ಸುಗುಣ, ಅಲುವೇಲು, ಹಂಪಿ ರಮಣಾ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಂಬಾಚಾರಕ್ಕೆ ಮತ್ತೊಂದು ಹೆಸರೇ ವಚನಾನಂದ ಸ್ವಾಮೀಜಿ: ಮಹೇಶ ಹಾವೇರಿ
ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ