ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿಯಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದರು. ಮುಸಲ್ಮಾನರಿಗಾಗಿ ಸಂವಿಧಾನ ಬದಲಾಯಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎನ್ನುವ ಬಿಜೆಪಿಯವರ ಆರೋಪವನ್ನು ಅಲ್ಲೆಗಳೆದ ಬೋಸರಾಜು, ಬಿಜೆಪಿಯವರ ಆರೋಪಕ್ಕೆ ಡಿ.ಕೆ. ಶಿವಕುಮಾರ್ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಕಾಂಗ್ರೆಸ್, ಎಐಸಿಸಿ ಕೂಡ ಅದನ್ನೇ ಪ್ರತಿಪಾದಿಸುತ್ತದೆ. ಡಿ.ಕೆ. ಶಿವಕುಮಾರ್ ಕಾಂಗ್ರೆಸ್ನ ಹಿರಿಯ ನಾಯಕರು. ಹೀಗಿರುವಾಗ ಸಂವಿಧಾನ ವಿರುದ್ಧವಾಗಿ ಮಾತನಾಡಲು ಸಾಧ್ಯವೇ ಇಲ್ಲ ಎಂದು ಸಮರ್ಥಿಸಿಕೊಂಡರು.
ಹನಿ ಟ್ರ್ಯಾಪ್ ವಿಷಯ ಸಿಎಂ ಸಿದ್ದರಾಮಯ್ಯ ಅವರಿಂದಲೇ ಬಯಲಿಗೆ ಬಂದಿದೆ ಎಂಬ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ ವಿಚಾರದಲ್ಲಿ ಮಾತನಾಡಿದ ಬೋಸರಾಜು, ನಾನು ಎರಡು ಸದನಗಳಲ್ಲಿ ಭಾಗವಹಿಸುತ್ತಿದ್ದೆ. ಆ ವಿಷಯ ಪ್ರಸ್ತಾಪಿಸಿದ್ದು ಸಚಿವ ರಾಜಣ್ಣ. ಅದು ದಾಖಲೆಯಲ್ಲಿ ಇದೆ.ರಾಜಣ್ಣ ಅವರು ಯಾವ ಪಾರ್ಟಿಯವರು ಮಾಡಿದ್ದಾರೆ ಎಂದು ಹೇಳಿಲ್ಲ. ಹನಿ ಟ್ಯ್ರಾಪ್ ನಲ್ಲಿ ಎಲ್ಲಾ ಪಕ್ಷದವರು ಸೇರಿ 48 ಜನರಿದ್ದಾರೆ. ನನ್ನ ಹತ್ತಿರ ಯಾವುದೇ ದಾಖಲೆ ಇಲ್ಲ ಸಂದರ್ಭ ಬಂದಾಗ ಮಾತನಾಡುತ್ತೇನೆ ಎಂದಿದ್ದಾರೆ. ಯಾರೊಬ್ಬರನ್ನೂ ಗುರಿಯಾಗಿಸಿ ಯಾರ ಮೇಲೂ ಆರೋಪ ಮಾಡಿಲ್ಲ.
ಸಚಿವ ಸಂಪುಟ ಪುನರ್ರಚನೆ ವಿಷಯ ಪ್ರಸ್ತಾಪಿಸಿದಾಗ ಗರಂ ಆದ ಸಚಿವ ಬೋಸರಾಜ್ ಇಂಥ ಯಾವುದೇ ಪ್ರಸ್ತಾಪಗಳು ಆಗಿಲ್ಲ.