ಕಾಂಗ್ರೆಸ್ ತಳಮಟ್ಟದ ಹೆಜ್ಜೆ ಗುರುತು ಪುನರ್ ನಿರ್ಮಿಸಲು ಕಾರ್ಯಕರ್ತರು ಶ್ರಮಿಸಬೇಕಾಗಿದೆ

KannadaprabhaNewsNetwork |  
Published : Jul 29, 2026, 02:15 AM IST
ಬ್ಯಾಡಗಿಯಲ್ಲಿ ಎಐಸಿಸಿ ವೀಕ್ಷಕ ಹಾಗೂ ತೆಲಂಗಾಣದ ಮಾಜಿ ಶಾಸಕ ಶೇಖ್ ಮುಷ್ತಾಕ್ ವಲಿ ಅವರನ್ನು ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಸನ್ಮಾನಿಸಿದರು. | Kannada Prabha

ಸಾರಾಂಶ

ಚುನಾವಣಾ ಸವಾಲುಗಳನ್ನು ಎದುರಿಸಲು ಭಾರತದಾದ್ಯಂತ ಕಾಂಗ್ರೆಸ್ ತಳಮಟ್ಟದ ಹೆಜ್ಜೆ ಗುರುತನ್ನು ಪುನರ್ ನಿರ್ಮಿಸಲು ಕಾರ್ಯಕರ್ತರು ಶ್ರಮಿಸಬೇಕಾಗಿದೆ ಎಂದು ಎಐಸಿಸಿ ವೀಕ್ಷಕ ಹಾಗೂ ತೆಲಂಗಾಣದ ಮಾಜಿ ಶಾಸಕ ಶೇಖ್ ಮುಷ್ತಾಕ್ ವಲಿ ಹೇಳಿದರು.

ಬ್ಯಾಡಗಿ: ಚುನಾವಣಾ ಸವಾಲುಗಳನ್ನು ಎದುರಿಸಲು ಭಾರತದಾದ್ಯಂತ ಕಾಂಗ್ರೆಸ್ ತಳಮಟ್ಟದ ಹೆಜ್ಜೆ ಗುರುತನ್ನು ಪುನರ್ ನಿರ್ಮಿಸಲು ಕಾರ್ಯಕರ್ತರು ಶ್ರಮಿಸಬೇಕಾಗಿದೆ ಎಂದು ಎಐಸಿಸಿ ವೀಕ್ಷಕ ಹಾಗೂ ತೆಲಂಗಾಣದ ಮಾಜಿ ಶಾಸಕ ಶೇಖ್ ಮುಷ್ತಾಕ್ ವಲಿ ಹೇಳಿದರು.

ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಜರುಗಿದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಯಾವುದೋ ಒಂದು ಘಟನೆಯಿಂದ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎನ್ನುವ ಭ್ರಮೆಯಿಂದ ಕಾರ್ಯಕರ್ತರು ಹೊರ ಬರಬೇಕು, ಹೀಗಾಗಿ ಸಣ್ಣ ಪುಟ್ಟ ಕಾರಣಗಳಿಗೆ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ವೈಯಕ್ತಿಕ ಹಿತಾಸಕ್ತಿ ಮರೆಯುವಂತೆ ಸಲಹೆ ನೀಡಿದರು.

ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಬಹುದೊಡ್ಡ ಪಾಠ: ಇತ್ತೀಚೆಗೆ ಮುಕ್ತಾಯಗೊಂಡ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಚುನಾವಣೆಗಳಲ್ಲಿ ನಮ್ಮದೇ ಮುಖಂಡರು ಮುಖ್ಯಮಂತ್ರಿಗಳಾಗಿ ಹೊರಹೊಮ್ಮಿದ್ದಾರೆ. ಹೀಗಾಗಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ, ಮೂಲ ಕಾರ್ಯಕರ್ತರನ್ನು ಮತ್ತೆ ಪಕ್ಷಕ್ಕೆ ಪುನರುಜ್ಜೀವನಗೊಳಿಸಲು ತೆಲಂಗಾಣ, ಮಧ್ಯಪ್ರದೇಶ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈಗಾಗಲೇ ಸಕ್ರಿಯ ಅಭಿಯಾನಗಳು ನಡೆಯುತ್ತಿವೆ ಎಂದರು.

2028 ಕ್ಕೆ ಮತ್ತೆ ಕಾಂಗ್ರೆಸ್: ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಮುಂಬರುವ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದಲ್ಲಿ ಇಂದಿನಿಂದಲೇ ಕಾರ್ಯಕರ್ತರು ಪಕ್ಷ ಸಂಘಟನೆ ಜೊತೆಗೆ ನಮ್ಮ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಸಮರ್ಥ ನಾಯಕತ್ವ ನೀಡಬೇಕಾಗಿದೆ ಎಂದರು.

ಎಲ್ಲರೂ ಮುಖಂಡರೇ: ಜಿಲ್ಲಾ ವೀಕ್ಷಕ ಡಿ.ಬಸವರಾಜು ಮಾತನಾಡಿ, ಪಕ್ಷವನ್ನು ಬೂತ್ ಮಟ್ಟದಿಂದ ಮೇಲಕ್ಕೆ ಬಲಪಡಿಸುವ ಗುರಿ ಹೊಂದಿರುವ ಕಾರ್ಯಕರ್ತರು ತಮ್ಮ ಬೂತ ಮಟ್ಟಿಗೆ ತಾವೇ ಮುಖಂಡರು, ರಾಜಕೀಯ ಹಿನ್ನೆಲೆಯಿಲ್ಲದ ಆದರೆ ಕ್ರಿಯಾಶೀಲತೆಗೆ ಸಿದ್ಧರಾಗಿರುವ ಸೈದ್ಧಾಂತಿಕವಾಗಿ ಬದ್ಧರಾಗಿರುವ ಯುವಕರಿಗೆ ಆದ್ಯತೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ನೀರಲಗಿ, ತಾಲೂಕಾಧ್ಯಕ್ಷ ದಾನಪ್ಪ ಚೂರಿ, ಕಾಗಿನೆಲೆ ಬ್ಲಾಕ್ ಅಧ್ಯಕ್ಷ ಶಿವನಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಲಕ್ಷ್ಮೀ ಜಿಂಗಾಡೆ, ಮುಖಂಡರಾದ ಶಂಭನಗೌಡ ಪಾಟೀಲ, ರಮೇಶ ಸುತ್ತಕೋಟಿ, ಖಾದರಸಾಬ್ ದೊಡ್ಮನಿ, ದುರ್ಗೇಶ ಗೋಣೆಮ್ಮನವರ, ಡಿ.ಎಚ್.ಬುಡ್ಡನಗೌಡ್ರ ಹಾಗೂ ಇನ್ನಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶಕ್ಕಾಗಿ ಸೇವೆ ಮಾಡಲು ಸದಾ ಸಿದ್ಧರಾಗಿ: ಎ.ಬಿ. ಹೆಸರೂರ
ಸೂಡಿ ಗ್ರಾಮ ಪಂಚಾಯಿತಿ ಎದುರು ಕಸ ಸುರುವಿ ಆಕ್ರೋಶ