ಮನವಿ । ಪಟೇಲ್ರನ್ನು ಸಿಂಹದ ಮರಿಗೆ ಹೋಲಿಕೆಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಬುಧವಾರ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಹಾಸನ ಲೋಕಸಭಾ ಕ್ಷೇತ್ರ ಚುನಾವಣೆ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಒಂದು ಉತ್ತಮ ವ್ಯಕ್ತಿಯನ್ನು ಚುನಾವಣಾ ಕಣಕ್ಕೆ ಇಳಿಸಿದ್ದು ಶ್ರೇಯಸ್ ಪಟೇಲ್ ಅವರನ್ನು ಕಾರ್ಯಕರ್ತರು ಯಾವ ರೀತಿ ಬೆಳೆಸುತ್ತೀರಿ ಎಂಬುದೇ ಮುಖ್ಯವಾಗಿದೆ, ಹೈಕಮಾಂಡ್ ಹಾಸನ ಜಿಲ್ಲೆಯನ್ನು ಚುನಾವಣಾ ಸರ್ವೆ ಮಾಡಿಸಿಯೇ ಈ ಬಾರಿ ಶ್ರೇಯಸ್ ಪಟೇಲ್ ಅವರನ್ನು ಚುನಾವಣಾ ಕಣದಲ್ಲಿ ನಿಲ್ಲಿಸಿದ್ದು ಗೆಲ್ಲುವುದಕ್ಕೆ ಸಮರ್ಥವಾಗಿದೆ ಎಂದು ಹೇಳಿದರು.
ಆದರೆ ಅವರಿಗೆ ಬೆಂಬಲ ನೀಡಿ ಕಾರ್ಯಕರ್ತರು ಹೆಗಲು ಕೊಟ್ಟು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಅಸ್ಥಿತ್ವ ಉಳಿಸಿಕೊಳ್ಳಲು ಇದೊಂದೇ ಅವಕಾಶವಿರುವುದು. ಶ್ರೇಯಸ್ ಎಂಬ ಹುಡುಗನು ಹೊಳೇನರಸೀಪುರದಲ್ಲಿ ಕಳೆದ ಚುನಾವಣೆಯಲ್ಲಿ ಹೇಗೆ ಮತ ಪಡೆದಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಆದ್ದರಿಂದ ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಪ್ರತೀ ಬೂತ್ನಲ್ಲೂ ಏಜೆಂಟರು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿ ಯಾವುದೇ ಅಡ್ಡ ಮತದಾನ ಆಗದಂತೆ ತಡೆದು ಕಾಂಗ್ರೆಸ್ ಪಕ್ಷ ಗೆಲ್ಲಲು ಕೆಲಸ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ ಲೋಕಸಭಾ ಚುನಾವಣೆ ಈ ಬಾರಿ ಕಾಂಗ್ರೆಸ್ ಅಲೆ ಇದ್ದು ಹೈಕಮಾಂಡ್ ಆದೇಶದಂತೆ ಚುನಾವಣೆಗೆ ಸ್ಪರ್ಧಿಸಿದ್ದೇನೆ, ಕಳೆದ ಚುನಾವಣೆಯಲ್ಲಿ ಭಯದ ವಾತಾವರಣದಲ್ಲೇ ಚುನಾವಣೆ ಎದುರಿಸಿ ಕೇವಲ ೧೫೦೦ ಮತಗಳ ಅಂತರದಲ್ಲಿ ಸೋತಿದ್ದೆ. ಆದರೆ ಜನ ಇಷ್ಟೊಂದು ಮತ ನೀಡಿ ಧೈರ್ಯ ತುಂಬುತ್ತಾರೆ ಎಂದು ಕನಸಿನಲ್ಲಿಯೂ ತಿಳಿದಿರಲಿಲ್ಲ. ಆದರೆ ಈ ಚುನಾವಣೆಯಲ್ಲಿ ಎದೆ ತಟ್ಟಿ ಹೇಳುತ್ತೇನೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗೆಲುವು ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.