ಸಿದ್ದರಾಮಯ್ಯ ನೆಮ್ಮದಿಯಿಂದ ಅಧಿಕಾರ ಮಾಡಲು ಕಾಂಗ್ರೆಸ್ಸಿಗರು ಬಿಡಲಿಲ್ಲ; ಬಿ.ಶ್ರೀರಾಮುಲು

KannadaprabhaNewsNetwork |  
Published : May 30, 2026, 02:00 AM IST
ಬಿ.ಶ್ರೀರಾಮುಲು | Kannada Prabha

ಸಾರಾಂಶ

ಎಂಟು ವರ್ಷಗಳ ಕಾಲ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ.

ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಇದೇ ಮೊದಲ ಬಾರಿಗೆ ಅನುಕಂಪದ ಮಾತನಾಡಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಕಾಂಗ್ರೆಸ್ ಅಪಮಾನ ಮಾಡಿದೆ. ಕಾಂಗ್ರೆಸ್ ನಡೆಯಿಂದ ಅಹಿಂದ ವರ್ಗಕ್ಕೆ ನೋವಾಗಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಂಟು ವರ್ಷಗಳ ಕಾಲ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ. 2023ರಿಂದ ಸಿಎಂ ಆದಾಗಿನಿಂದಲೂ ಸಿದ್ದರಾಮಯ್ಯಗೆ ಕಿರಿಕಿರಿ ನೀಡಿದರು. ನೆಮ್ಮದಿಯಿಂದ ಇರಲು ಬಿಡಲಿಲ್ಲ. ಕೊನೆಗೆ ರಾಜೀನಾಮೆ ಕೊಡಿಸಿದರು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟ ಬಳಿಕ ಅವರ ಮುಖದಲ್ಲಿ ತೀವ್ರ ನೋವಿತ್ತು. ಅದನ್ನು ನೋಡಿ ನನಗೂ ನೋವಾಯಿತು ಎಂದರು.

ಸಿದ್ದರಾಮಯ್ಯ ನೆಮ್ಮದಿಯಿಂದ ಅಧಿಕಾರ ಮಾಡಲು ಕಾಂಗ್ರೆಸ್‌ನವರು ಬಿಡಲಿಲ್ಲ. ಒಂದು ಕಡೆ ಮಲ್ಲಿಕಾರ್ಜುನ ಖರ್ಗೆ ಮತ್ತೊಂದೆಡೆ ಡಿ.ಕೆ. ಶಿವಕುಮಾರ್ ಕಾಲೆಳೆಯುತ್ತಿದ್ದರು. ಸಿಎಂ ಖುರ್ಚಿಗೆ ಬೆಲೆ ಇಲ್ಲದಂತೆ ಮಾಡಿದರು. ಸಿಎಂ ಸ್ಥಾನದಿಂದ ಕೆಳಗಿಳಿಸುವಲ್ಲಿ ಡಿಕೆಶಿ ಯಶಸ್ವಿಯಾದರು. ರಾಹುಲ್ ಗಾಂಧಿ ಒಬಿಸಿ ನಾಯಕರನ್ನು ಬೆಂಬಲಿಸಬೇಕು ಎಂದು ಹೇಳುತ್ತಾರೆ. ಆದರೆ, ಒಬಿಸಿ ವರ್ಗಕ್ಕೆ ಸೇರಿದ ನಾಯಕ ಸಿದ್ದರಾಮಯ್ಯ ಅವರನ್ನೇ ಕೆಳಗಿಳಿಸಿದ್ದಾರೆ. ಕಾಂಗ್ರೆಸ್ ಈ ಹಂತಕ್ಕೆ ಬರಲು ಸಿದ್ದರಾಮಯ್ಯ ಕಾರಣ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯ ಫೋಟೋ ಇಟ್ಟುಕೊಂಡೇ ಚುನಾವಣೆಯಲ್ಲಿ ಗೆದ್ದಿದ್ದಾರೆ. ಜನಾದೇಶದಂತೆ ಅವರೇ ಐದು ವರ್ಷ ಸಿಎಂ ಆಗಿರಬೇಕಿತ್ತು. ನಾನು ರಾಜಕೀಯವಾಗಿ ಸಿದ್ದರಾಮಯ್ಯನವರ ವಿರೋಧಿಯಾಗಿರಬಹುದು. ಆದರೆ, ರಾಜಕೀಯ ಬೇರೆ, ವೈಯಕ್ತಿಕ ಸಂಬಂಧ ಬೇರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದಂತೆಯೇ ಬಳ್ಳಾರಿಯ ಜಿಲ್ಲೆಯ ಕಾಂಗ್ರೆಸ್ ಶಾಸಕರು ನಗುನಗುತ್ತಲೇ ಡಿ.ಕೆ. ಶಿವಕುಮಾರ್‌ಗೆ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಸಿದ್ದರಾಮಯ್ಯನವರ ಫೋಟೋ ಇಟ್ಟುಕೊಂಡು ಗೆದ್ದವರು ಅವರು ಅಧಿಕಾರ ಕಳೆದುಕೊಳ್ಳುತ್ತಿದ್ದಂತೆಯೇ ಡಿ.ಕೆ. ಶಿವಕುಮಾರ್ ಮನೆಯ ಮುಂದೆ ನಿಂತಿದ್ದಾರೆ ಎಂದು ಶ್ರೀರಾಮುಲು ಟೀಕಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆಗಾಲದಲ್ಲಿ ಪ್ರಾಣಹಾನಿ ತಡೆಗೆ ಮುನ್ನಚ್ಚರಿಕೆ ವಹಿಸಿ
ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬೀಡುಬಿಟ್ಟ ಕೊಪ್ಪಳ ಜಿಲ್ಲೆಯ ಶಾಸಕರು