ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಬುಧವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಯಾವುದೇ ಒಂದು ಪಕ್ಷ, ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳ ಸ್ವತ್ತಲ್ಲ. ಸರ್ವಜನರ ಹಿತ ಒಳಗೊಂಡಿರುವ ಜಗತ್ತಿನಲ್ಲೆ ಉತ್ಕೃಷ್ಟ ಸಂವಿಧಾನವನ್ನು ಈ ದೇಶಕ್ಕೆ ಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಬಾಬಾ ಸಾಹೇಬರನ್ನು ಗುತ್ತಿಗೆ ಪಡೆದವರಂತೆ ಹೇಳಿಕೆ ಕೊಡುತ್ತಿರುವುದು ಗಮನಿಸಿದಾಗ ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಸಿ.ಟಿ ರವಿ ಅಂಬೇಡ್ಕರ್ ರವರ 135ನೇ ಜಯಂತಿ ಸಂದರ್ಭದಲ್ಲಿ ಮನೆಗಳಲ್ಲಿ ಆಚರಿಸಲಾಗಿದೆ ಇದನ್ನು ಸಹಿಸದ ಕಾಂಗ್ರೆಸ್ ಮುಖಂಡರು ದಲಿತರನ್ನು ಎತ್ತಿಕಟ್ಟಿ ಇಂತಹ ಮಹಾನ್ ಪುರುಷರ ಜಯಂತಿಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.ಪ.ಜಾ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದವರಿಗೆ ಜಿಲ್ಲಾ, ತಾಲೂಕು ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆ ಗಳಲ್ಲಿ ಮೀಸಲಾಗಿದ್ದ ಸ್ಥಾನಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಎಪಿಎಂಸಿಗೆ ಕೆ.ಪಿ ವೆಂಕಟೇಶ್, ನಗರಸಭೆಗೆ ಮುತ್ತಯ್ಯ ರವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದನ್ನು ಸ್ಮರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಟಿ.ಎಲ್ ಲಕ್ಷ್ಮಣ ನಾಯಕ್, ಬಿಜೆಪಿ ಹಿರಿಯ ಮುಖಂಡರಾದ ಡಾ. ಎಸ್.ಆರ್ ಶಿವುಪ್ರಸಾದ್, ಕೊಲ್ಲಾ ಭೋವಿ, ನವೀನ್ ಕುಮಾರ್ ಇದ್ದರು.