ಧರ್ಮ ರಹಸ್ಯ ತಿಳಿದುಕೊಂಡರೆ ಸ್ಥಿತಪ್ರಜ್ಞತೆ ಸಾಧ್ಯ

KannadaprabhaNewsNetwork |  
Published : Dec 27, 2023, 01:31 AM ISTUpdated : Dec 27, 2023, 01:32 AM IST
2 | Kannada Prabha

ಸಾರಾಂಶ

ಅವಧೂತ ದತ್ತಪೀಠ, ಶ್ರೀ‌‌ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ದತ್ತಾತ್ರೇಯ ಜಯಂತಿ

- ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅಭಿಮತ

ಕನ್ನಡಪ್ರಭ ವಾರ್ತೆ ಮೈಸೂರು

ಆಸೆಯೇ ದುಃಖಕ್ಕೆ ಮೂಲ,ಧರ್ಮ ರಹಸ್ಯ ತಿಳಿದುಕೊಂಡರೆ ಸುಖ, ದುಃಖ ಸಮನಾಗಿ ತೆಗೆದುಕೊಳ್ಳಬಹುದು ಎಂದು ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ತಿಳಿಸಿದರು.

ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಶ್ರೀ ಅವಧೂತ ದತ್ತಪೀಠ, ಶ್ರೀ‌‌ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮಂಗಳವಾರ ನಡೆದ ಶ್ರೀ ದತ್ತಾತ್ರೇಯ ಜಯಂತಿಯಲ್ಲಿ ಭಕ್ತರಿಗೆ ಆಶೀರ್ವಚನ ನೀಡಿದ ಅವರು, ಇಂದು ಅತ್ಯಂತ ಪವಿತ್ರವಾದ ದಿನ. ಕಾಮ, ಕ್ರೋಧ ಲೋಭ, ಮತ್ಸರ ಎಲ್ಲವನ್ನು ಬಿಟ್ಟು ದತ್ತ ಉಪಾಸನೆ ಮಾಡಬೇಕು ಎಂದು ಹೇಳಿದರು.

ಈ ಶರೀರ ನಶ್ವರ, ದತ್ತನ ಉಪದೇಶ ಏನೆಂದರೆ ನಾವು ಸುಖ ಅನುಭವಿಸಿದಂತೆಯೇ. ಅದರ ಹಿಂದೆ ದುಃಖವೂ ಇರುತ್ತದೆ. ಹಾಗಾಗಿ ಎಲ್ಲಾ ಇಂದ್ರಿಯಗಳನ್ನು ನಿಗ್ರಹ ಮಾಡಬೇಕು. ಸುಖ, ಲೋಭ, ಆಸೆಯೇ ದುಃಖಕ್ಕೆ ಮೂಲ. ಸುಖ ಮಾತ್ರ ಬೇಕು ಅಂದುಕೊಳ್ಳಬಾರದು. ಸುಖ ದುಃಖ ಎರಡನ್ನು ಸಮಾನವಾಗಿ ಅನುಭವಿಸಬೇಕು ಎಂದರು.

ಬರಿ ಸುಖವನ್ನಷ್ಟೇ ಅಪೇಕ್ಷೆ ಪಡಬಾರದು, ಧರ್ಮ ರಹಸ್ಯ ತಿಳಿದು ಕೊಂಡಾಗ ಸುಖ, ದುಃಖ, ನೋವು ಎಲ್ಲವನ್ನು ಸಮಾನವಾಗಿ ತೆಗೆದುಕೊಳ್ಳಬಹುದು. ಜೊತೆಗೆ ಸದಾ ದತ್ತಸ್ಮರಣೆ ಮಾಡಿದರೆ ಎಲ್ಲವೂ ಒಳಿತೇ ಆಗಲಿದೆ. ದತ್ತನೇ ವಿಷ್ಣು, ದತ್ತನೆ ಶಿವನು, ದತ್ತನೆ ಜ್ಞಾನ, ದತ್ತ ಕೂಡ ಶಕ್ತಿಯಲ್ಲಿ ಲೀನವಾಗಿದ್ದಾನೆ. ಶ್ರೀ ಚಕ್ರ ಪೂಜೆ ಮಾಡಿದರೆ ದತ್ತನನ್ನೇ ಪೂಜೆ ಮಾಡಿದಂತೆ. ಇವೆರಡು ಒಂದೇ ಎಂಬುದನ್ನು ತಿಳಿದುಕೊಳ್ಳಿ ಎಂದು ಅವರು ಹೇಳಿದರು.

ಇದೇ ವೇಳೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮರಾಠಿ ಭಾಷೆಯ ದತ್ತ ದರ್ಶನಂ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು. ಅವಧೂತ ದತ್ತಪೀಠದ ಕಿರಿಯಶ್ರೀಗಳಾದ ಶ್ರೀ ದತ್ತ ವಿಜಯಾನಂದತೀರ್ಥ ಸ್ವಾಮೀಜಿ ಇದ್ದರು.

----

ದತ್ತಾತ್ರೇಯ ಜಯಂತಿ ಆಚರಣೆ

ಶ್ರೀ ಅವಧೂತ ದತ್ತಪೀಠ, ಶ್ರೀ‌‌ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತಾತ್ರೇಯ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಬೆಳಗ್ಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮೊದಲು ಗೋವುಗಳಿಗೆ ಹಣ್ಣು ತಿನ್ನಿಸಿ ಗೋ ಪೂಜೆ ‌ಮಾಡಿ ನಂತರ ಶ್ರೀ ಚಕ್ರ ಪೂಜೆ ನೆರವೇರಿಸಿದರು.

ದೇಶ ವಿದೇಶಗಳಿಂದ ಬಂದಿದ್ದ ನೂರಾರು ಭಕ್ತಾರಿಂದ ಶ್ರೀ ದತ್ತಾತ್ರೇಯ ಸ್ವಾಮಿಗೆ ಸಹಸ್ರ ಕಲಶ ತೈಲಾಭಿಷೇಕವನ್ನು ನೆರವೇರಿಸಲಾಯಿತು. ಈ ವೇಳೆ ಕೊಚ್ಚಿ ಆಶ್ರಮ ಭಜನಾ ತಂಡದವರಿಂದ ನಾಮ ಸಂಕೀರ್ತನ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ